Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾನು ಬಡ್ಡಿ ವ್ಯವಹಾರ ನಡೆಸಿಲ್ಲ. ಬ್ಲ್ಯಾಂಕ್ ಚೆಕ್ ಕೂಡ ಪಡೆದಿಲ್ಲ: ಆರೋಪಕ್ಕೆ ಸದಾನಂದ ಶೆಟ್ಟಿ ಸ್ಪಷ್ಟನೆ
    ಊರ್ಮನೆ ಸಮಾಚಾರ

    ನಾನು ಬಡ್ಡಿ ವ್ಯವಹಾರ ನಡೆಸಿಲ್ಲ. ಬ್ಲ್ಯಾಂಕ್ ಚೆಕ್ ಕೂಡ ಪಡೆದಿಲ್ಲ: ಆರೋಪಕ್ಕೆ ಸದಾನಂದ ಶೆಟ್ಟಿ ಸ್ಪಷ್ಟನೆ

    Updated:10/04/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಬಿಜೆಪಿ ಮುಖಂಡರಾದ ಸದಾನಂದ ಉಪ್ಪಿನಕುದ್ರು ಅವರಿಗೆ ತಾನು ಬಡ್ಡಿಯಲ್ಲಿ ಸಾಲ ನೀಡಿಲ್ಲ. ಅವರಿಂದ ಯಾವುದೇ ಬ್ಲ್ಯಾಂಕ್ ಚೆಕ್ ಪಡೆದಿಲ್ಲ. ಈ ಹಿಂದೆ ಜಾಗ ಖರೀದಿಯ ವ್ಯವಹಾರದಲ್ಲಿ ಅವರು ನೀಡಿದ ಚೆಕ್ಗಳು ಬೌನ್ಸ್ ಆಗಿದ್ದು ಆ ಪ್ರಕರಣ ಕೋರ್ಟ್ನಲ್ಲಿದೆ ಎಂದು ಕುಂದಾಪುರದ ನ್ಯಾಯವಾದಿ ಸದಾನಂದ ಶೆಟ್ಟಿ ಹೇಳಿದ್ದಾರೆ.

    Click Here

    Call us

    Click Here

    ಶನಿವಾರ ಕುಂದಾಪುರ ಪ್ರೆಸ್ ಕ್ಲಬ್ನಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ ಸದಾನಂದ ಉಪ್ಪಿನಕುದ್ರು ಅವರಿಗೆ ತಾನು ವಂಚನೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸ್ಪಷನೆ ನೀಡಿ ಸದಾನಂದ ಉಪ್ಪಿನಕುದ್ರು ನನ್ನ ಮೇಲೆ ಮಾನಹಾನಿಕರ ಮತ್ತು ಸುಳ್ಳು ಆರೋಪಗಳನ್ನು ಜಗದ್ವಿಖ್ಯಾತ ಕೊಲ್ಲೂರು ಮೂಕಾಂಬಿಕಾ ದೇಗುಲದಲ್ಲಿ ಮಾಡಿದ್ದಾರೆ. ಇದರ ಹಿನ್ನೆಲೆ ಏನು, ಉದ್ದೇಶವೇನು ಮತ್ತು ಇದರ ಹಿಂದೆ ಯಾರಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಆದರೆ ಸದಾನಂದ ಉಪ್ಪಿನಕುದ್ರು ಮಾಡಿರುವ ಆರೋಪಗಳು ಸಂಪೂರ್ಣ ಸತ್ಯಕ್ಕೆ ದೂರವಾಗಿದೆ ಎಂದು ಸದಾನಂದ ಶೆಟ್ಟಿ ಹೇಳಿದ್ದಾರೆ. ಅವರು ಮಾಡಿರುವ ಆರೋಪಕ್ಕೆ ಒಂದೇ ಒಂದು ಸಾಕ್ಷ್ಯವನ್ನು ಅವರು ನೀಡಿಲ್ಲ, ಸಾಕ್ಷ್ಯ ಅವರ ಬಳಿ ಇಲ್ಲ ಎಂದು ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.
    ಸದಾನಂದ ಉಪ್ಪಿನಕುದ್ರು ಅವರಿಗೆ ಬಾಡಿಗೆಗೆ ಜಾಗ ನೀಡಿದ್ದೆವು

    ಸದಾನಂದ ಉಪ್ಪಿನಕುದ್ರು ಅವರು ವ್ಯವಹಾರ ನಡೆಸಲು ನಮ್ಮ ಕುಟುಂಬಕ್ಕೆ ಸೇರಿದ್ದ ಜಾಗವೊಂದನ್ನು ಹತ್ತು ವರ್ಷಗಳ ಕಾಲ ಬಾಡಿಗೆಗೆ ಕೇಳಿದ್ದರು. ತಿಂಗಳೊಂದರ ಬಾಡಿಗೆ 35 ಸಾವಿರ ಎಂದು ನಿಗದಿಪಡಿಸಿ ಅವರಿಗೆ ಬಾಡಿಗೆ ನೀಡಿದ್ದೆವು. ಆ ಬಳಿಕ ನನಗೂ ಅವರ ಜೊತೆ ಉತ್ತಮ ಸಂಬಂಧ ಬೆಳೆದಿತ್ತು. ಅವರ ಬಳಿ ಇದ್ದ ಜಾಗವೊಂದನ್ನು ನಮ್ಮ ಕುಟುಂಬ ಖರೀದಿ ಮಾಡಿತು. ಈ ಕುರಿತು ಅವರಿಗೆ 40 ಲಕ್ಷ ರೂಪಾಯಿಗಳನ್ನು ಸಂದಾಯ ಮಾಡಿದ್ದೆವು. ಈ ಕುರಿತು ಒಪ್ಪಂದವನ್ನೂ ಮಾಡಿಕೊಂಡು ನೋಂದಣಿ ಮಾಡಿಕೊಂಡಿದ್ದೆವು. ಆದರೆ ಆ ಬಳಿಕ ತನಗೆ ಆ ಜಾಗ ಮಾರಲು ಮನಸ್ಸಿಲ್ಲ, ನಿಮಗೆ ನಿಮ್ಮ ದುಡ್ಡು ವಾಪಾಸು ಕೊಡುತ್ತೇನೆ ಎಂದಾಗ ನಾನು ಅದಕ್ಕೆ ಒಪ್ಪಿದ್ದೆ. ನಾನು ಕೊಟ್ಟ 40 ಲಕ್ಷ ರೂಪಾಯಿಗಳನ್ನು ಹಿಂದಿರುಗಿಸಲು ಅವರು ನನಗೆ ಒಟ್ಟು ಮೂರು ಚೆಕ್ ನೀಡಿದ್ದರು. ಆ ಪೈಕಿ ಹತ್ತು ಲಕ್ಷ ರೂಪಾಯಿಗಳ ಒಂದು ಚೆಕ್ ನಗದಿಯಾಯಿತು ಬಿಟ್ಟರೆ ಉಳಿದ ಒಟ್ಟು ಇಪ್ಪತ್ತೈದು ಲಕ್ಷಕ್ಕೆ ನೀಡಿದ ಎರಡು ಚೆಕ್ಗಳು ಬೌನ್ಸ್ ಆಗಿ ಹಣ ಸಿಗಲಿಲ್ಲ. ಈ ಕುರಿತು ಅವರಿಗೆ ಫೋನ್ ಮಾಡಿದಾಗ ಅವರು ಹಣ ನೀಡುತ್ತೇನೆ ಎನ್ನುವ ಭರವಸೆ ನೀಡಿದರು ವಿನಃ ಹಣ ನನಗೆ ಬರಲಿಲ್ಲ. ಆ ಬಳಿಕ ಕಾನೂನು ಕ್ರಮಕ್ಕೆ ಮುಂದಾಗಿ ನಾನು ಕೋರ್ಟ್ನಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿದೆ. ಆ ಬಳಿಕ ನನಗೆ ಅವರು ಐದು ಲಕ್ಷ ರೂಪಾಯಿ ಚೆಕ್ ಮೂಲಕ ನೀಡಿದರು. ಆದರೆ ಉಳಿದ ಹಣ ಹಾಗೆಯೆ ಉಳಿದು ಪ್ರಕರಣವೂ ಮುಂದುವರಿಯಿತು. ಇಷ್ಟು ವ್ಯವಹಾರ ಬಿಟ್ಟರೆ ನನಗೆ ಸದಾನಂದ ಉಪ್ಪಿನಕುದ್ರು ಅವರ ಜೊತೆ ಯಾವುದೇ ವ್ಯವಹಾರ ಇಲ್ಲ ಎಂದು ಸದಾನಂದ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

    ಇದನ್ನೂ ಓದಿ
    ► ಬೈಂದೂರು ಶಾಸಕ ಸುಕುಮಾರ ಶೆಟ್ಟರ ಕಿರುಕುಳದಿಂದ ಬೇಸತ್ತಿದ್ದೇನೆ: ಸದಾನಂದ ಉಪ್ಪಿನಕುದ್ರು ಆರೋಪ – https://kundapraa.com/?p=47102 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    one + 10 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.