Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೀನುಗಾರರ ಜೀವನದೊಂದಿಗೆ ಸರಕಾರ ಚೆಲ್ಲಾಟ ಆಡುತ್ತಿದೆ: ಮೀನಾಗಾರಿಕಾ ಸಮಿತಿ ಅಧ್ಯಕ್ಷ ನಾಗೇಶ್ ಖಾರ್ವಿ ಆರೋಪ
    ಊರ್ಮನೆ ಸಮಾಚಾರ

    ಮೀನುಗಾರರ ಜೀವನದೊಂದಿಗೆ ಸರಕಾರ ಚೆಲ್ಲಾಟ ಆಡುತ್ತಿದೆ: ಮೀನಾಗಾರಿಕಾ ಸಮಿತಿ ಅಧ್ಯಕ್ಷ ನಾಗೇಶ್ ಖಾರ್ವಿ ಆರೋಪ

    Updated:14/04/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ಕರಾವಳಿಯ ಅಸಂಖ್ಯ ಮೀನುಗಾರರ ಜೀವನಾಧಾರ. ಅದರಲ್ಲಿನ ಅವರ ಕಠಿಣ ದುಡಿಮೆ ಮತ್ತು ಅನಿಶ್ಚಿತ ಬದುಕನ್ನು ಮನಗಂಡ ಸರ್ಕಾರಗಳು ಅವರಿಗೆ ವಿವಿಧ ನೆರವು ನೀಡುತ್ತ ಬಂದಿದ್ದರೆ, ಪ್ರಸಕ್ತ ಬಿಜೆಪಿ ಸರ್ಕಾರ ಅವುಗಳನ್ನು ಒಂದೊಂದಾಗಿ ಕೈಬಿಡುವ ಮೂಲಕ ಅವರ ಜೀವನದೊಂದಿಗೆ ಚೆಲ್ಲಾಟ ಆಡುತ್ತಿದೆ ಎಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ಮೀನುಗಾರಿಕಾ ಸಮಿತಿ ಅಧ್ಯಕ್ಷ ನಾಗೇಶ ಖಾರ್ವಿ ಆರೋಪಿಸಿದ್ದಾರೆ.

    Click Here

    Call us

    Click Here

    ಹಿಂದಿನ ಸರ್ಕಾರಗಳು ನಾಡದೋಣಿ ಮೀನುಗಾರಿಕೆಗೆ ರಿಯಾಯಿತಿ ದರದಲ್ಲಿ ನೀಡುತ್ತಿದ್ದ ಸೀಮೆ ಎಣ್ಣೆ ಮೀನುಗಾರಿಕಾ ಎಂಜಿನ್ ಮತ್ತು ಅಗತ್ಯ ಸಲಕರಣೆಗಳ ಖರೀದಿಗೆ ನೀಡುತ್ತಿದ್ದ ಸಬ್ಸಿಡಿಯಿಂದ ಉಡುಪಿ ಜಿಲ್ಲೆಯ 4760 ದೋಣಿಗಳನ್ನು ಅವಲಂಬಿಸಿರುವ ಮೀನುಗಾರ ಕುಟುಂಬಗಳಿಗೆ ಅನುಕೂಲವಾಗುತ್ತಿತ್ತು. ಬಿಜೆಪಿ ಸರ್ಕಾರ ಇದನ್ನು ಹಂತಹಂತವಾಗಿ ನಿಲ್ಲಿಸಿರುವುದರಿಂದ ಮೀನುಗಾರರು ಕಂಗಾಲಾಗಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರವು ಮೀನುಗಾರ ಮಹಿಳೆಯರಿಗೆ ಮೀನು ವ್ಯಾಪಾರದ ಮೂಲಕ ಸ್ವಾವಲಂಬಿಗಳಾಗಲು ಶೇ 4ರ ಬಡ್ಡಿ ದರದಲ್ಲಿ ನೀಡುತ್ತಿದ್ದ ರೂ 50 ಸಾವಿರದಿಂದ ಒಂದು ಲಕ್ಷದ ವರೆಗೆ ಸಾಲವನ್ನು ಈಗ ಕೊಡುತ್ತಿಲ್ಲ. ಪ್ರಸ್ತುತ ಬಿಜೆಪಿ ಸರ್ಕಾರವು ಮಹಿಳೆಯರ ಸಾಲ ಮನ್ನಾ ಎಂಬ ನಾಟಕವಾಡಿ ಅತ್ತ ಸಾಲ ಮನ್ನಾವೂ ಆಗದೆ, ಇತ್ತ ಮರಳಿ ಸಾಲ ಪಡೆಯಲೂ ಆಗದೆ ಮಹಿಳೆಯರು ತ್ರಿಶಂಕು ಸ್ಥಿತಿಯಲ್ಲಿದ್ದಾರೆ ಎಂದು ಸಂಕಷ್ಟ ತೋಡಿಕೊಂಡಿದ್ದಾರೆ.

    ಮೀನುಗಾರಿಕೆ ನಡೆಯದ ಅವಧಿಯಲ್ಲಿ ಮೀನುಗಾರರ ಜೀವನ ನಿರ್ವಹಣೆಗೆಂದು ಕಲ್ಪಿಸಿದ್ದ ಸಹಾಯಧನ ಬೆಂಬಲಿತ ಉಳಿತಾಯ ಯೋಜನೆಯನ್ನೂ ರದ್ದುಪಡಿಸಲಾಗಿದೆ. ಪಂಜರ ಮೀನು ಕೃಷಿಗೆ ನಿಗದಿತ ಮಾನದಂಡದಂತೆ ಪ್ರೋತ್ಸಾಹಧನ ನೀಡದೆ ಅಲ್ಪ ಮೊತ್ತ ವಿತರಿಸಲಾಗುತ್ತಿದೆ. ಮೀನುಗಾರರಿಗೆ ಸೀಮಿತವಾದ ಮತ್ಸ್ಯಾಶ್ರಯ ಮನೆಗಳ ಸಂಖ್ಯೆ ಕಡಿತಗೊಳಿಸಲಾಗಿದೆ. ಇದನ್ನು ಮೀನುಗಾರೇತರರಿಗೂ ನೀಡುವ ಮೂಲಕ ಮೀನುಗಾರರಿಗೆ ಅನ್ಯಾಯ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರವು ಮೀನುಗಾರರಿಗೆ ಮಾತಿನ ಮಂಟಪದ ಭರವಸೆ ನೀಡುವುದರಲ್ಲೇ ಕಾಲಹರಣ ಮಾಡುತ್ತಿದೆ. ಸರ್ಕಾರ ಮೀನುಗಾರರೆಡೆಗಿನ ತನ್ನ ನಿರ್ಲಕ್ಷ್ಯ ಧೋರಣೆಯನ್ನು ಸರಿಪಡಿಸಿಕೊಳ್ಳದಿದ್ದರೆ ಮೀನುಗಾರರು ಸರ್ಕಾರದ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಸರ್ಕಾರವನ್ನು ಮತ್ತು ಜನಪ್ರತಿನಿಧಿಗಳನ್ನು ಎಚ್ಚರಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    2 + four =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.