ಉಪ್ಪುಂದ ವಲಯ ದ್ರಾವಿಡ ಬ್ರಾಹ್ಮಣ ಪರಿಷತ್ತು: ಶಂಕರನಾರಾಯಣ ಭಟ್ಟರಿಗೆ ಸನ್ಮಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯದ ವತಿಯಿಂದ ಈ ವರ್ಷದ ಚಾಂದ್ರಮಾನ ಯುಗಾದಿ ಆಚರಣೆಯನ್ನು ಬಿಜೂರು ಗ್ರಾಮದ ಮಕ್ಕಿದೇವಸ್ಥಾನದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಚರಿಸಲಾಯಿತು.

Call us

Click Here

ನಿವೃತ್ತ ಶಿಕ್ಷಕ ವಿದ್ವಾನ್ ಶಂಕರನಾರಾಯಣ ಭಟ್ ಅವರು ಪಂಚಾಂಗ ಶೃವಣ ಮಾಡಿ ಯುಗಾದಿ ಆಚರಣೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ವಲಯಾಧ್ಯಕ್ಷ ಯು. ಸಂದೇಶ್ ಭಟ್ ಅಧ್ಯಕ್ಷತೆ ವಹಿಸಿದ್ದರು.

ವಿದ್ವಾನ್ ಶಂಕರನಾರಾಯಣ ಭಟ್ಟರಿಗೆ ವಿದ್ವತ್ ಸನ್ಮಾನ ಮಾಡಲಾಯಿತು. ಕೊಲ್ಲೂರು ಮುಕಾಂಬಿಕಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಮ್. ನಾಗರಾಜ ಭಟ್, ಗೌರವಾಧ್ಯಕ್ಷ ಬಿ. ವಿಶ್ವೇಶ್ವರ ಅಡಿಗ ಉಪಸ್ಥಿತರಿದ್ದರು. ವಲಯ ಮಹಿಳಾ ವೇದಿಕೆಯ ಸದಸ್ಯರಿಂದ ವಿಷ್ಣು ಸಹಸ್ರನಾಮ ಪಠಣ ಪಠಿಸಲಾಯಿತು.

ಕಾರ್ಯದರ್ಶಿ ಕೆ. ಅರುಣ್ ಕುಮಾರ್ ಶ್ಯಾನಭಾಗ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು, ಕೋಶಾಧ್ಯಕ್ಷ ಜಗದೀಶ್ ರಾವ್ ವಂದಿಸಿದರು, ಕೊನೆಯಲ್ಲಿ ಶಾಂತಿ ಮಂತ್ರ ಪಠಿಸಲಾಯಿತು

Leave a Reply