Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವೀಗನ್ ಫೆಸ್ಟಿವಲ್- ಸಿನರ್ಜಿ ಇನ್ಸ್ಟಿಟ್ಯೂಟ್ ಉದ್ಘಾಟನೆ
    ಊರ್ಮನೆ ಸಮಾಚಾರ

    ವೀಗನ್ ಫೆಸ್ಟಿವಲ್- ಸಿನರ್ಜಿ ಇನ್ಸ್ಟಿಟ್ಯೂಟ್ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

     ಬೈಂದೂರು: ಯಳಜಿತ ಗ್ರಾಮದ ಹೊಸೇರಿಯ ಸ್ಥಿತಪ್ರಜ್ಞ ವೀಗನ್ ವನದಲ್ಲಿ ರವಿವಾರ ನಡೆದ ೧೩ನೆ ಸಾತ್ವಿಕ್ ವೀಗನ್ ಫೆಸ್ಟಿವಲ್‌ನಲ್ಲಿ ಕುಂದಾಪುರದ ಕಾರ್ತಿಕ್ ಸ್ಕ್ಯಾನಿಂಗ್ ಸೆಂಟರ್‌ನ ಡಾ. ಬಿ. ವಿ. ಉಡುಪ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸಿನರ್ಜಿ ಇನ್ಸ್ಟಿಟ್ಯೂಟನ್ನು ಉದ್ಘಾಟಿಸಿದರು.

    Click Here

    Call us

    Click Here

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಪಡೆದವರಲ್ಲಿ ಬದುಕು ಮತ್ತು ಉದ್ಯೋಗಕ್ಕೆ ಅಗತ್ಯವಾದ ಜ್ಞಾನ ಮತ್ತು ಕೌಶಲಗಳು ಇವೆಯೆಂದು ಭಾವಿಸುವುದು ತಪ್ಪು. ಹಲವು ವಿಷಯಗಳಲ್ಲಿ ಅವರು ಅನ್ಯರನ್ನು ಅವಲಂಬಿಸಬೇಕಾಗುತ್ತದೆ. ಉದ್ಯೋಗಕ್ಕೆ ಆಂಗ್ಲ ಭಾಷಾ ಪ್ರೌಢಿಮೆಯೊಂದಿಗೆ ಅನ್ಯ ಕೌಶಲಗಳು ಅಗತ್ಯ. ಸಿನರ್ಜಿ ಇನ್ಸ್ಟಿಟ್ಯೂಟ್ ಇಂತಹ ಕೌಶಲ್ಯಗಳನ್ನು ಕಲಿಸುವ ಕೇಂದ್ರವಾಗಲಿ ಎಂದು ಹಾರೈಸಿದರು.

    ಭೌತಿಕ ಬದುಕಿಗೆ ಅಧ್ಯಾತ್ಮದ ಲೇಪ ಎಂಬ ಕುರಿತು ಮಾತನಾಡಿದ ತೀರ್ಥಹಳ್ಳಿಯ ಹೆದ್ದೂರಿನ ವನಚೇತನದ ಋಷಿ ದೇವಿತೊ ನಾಗೇಶ್ ಮನುಷ್ಯರಿಗೆ ಅನ್ನ ಮತ್ತು ಜ್ಞಾನ ಸಮಸ್ಯೆಯಾಗದು. ಆದರೆ ಬಯಕೆಗಳನ್ನು ಮಿತಿಗೊಳಿಸುವುದು ದೊಡ್ಡ ಸಮಸ್ಯೆಯಾಗಿದೆ. ಸಮೃದ್ಧಿ ಇದ್ದಲ್ಲಿ ಅಸುರೀ ಪ್ರವೃತ್ತಿ ಮನೆಮಾಡುತ್ತದೆ. ನಿಸರ್ಗಕ್ಕೆ ನಿಕಟವಾಗಿ ಹಿತಮಿತವಾದ, ರುಚಿಶುದ್ಧಿಯ ಬದುಕನ್ನು ರೂಢಿಸಿಕೊಂಡರೆ ಸಮಸ್ಯೆಗಳಿರುವುದಿಲ್ಲ ಎಂದರು. ಸಂಚಾಲಕ ಶಂಕರನಾರಾಯಣ ಸ್ವಾಗತಿಸಿ, ನಿರೂಪಿಸಿದರು.

    ಬೈಂದೂರಿನ ಪಿ. ರವೀಂದ್ರ ಅವರ ಪರಿಸರ ಗೀತೆ, ಮರವಂತೆಯ ಮಾ. ಕೇದಾರ್ ಅವರಿಂದ ಲಘು ಸಂಗೀತ, ಸಿರಸಿ ಹೆಗ್ಗಾರಿನ ರಾಜು ಹೆಗಡೆ ಅವರಿಂದ ಜಲತರಂಗ ವಾದನ ಪ್ರಸ್ತುತಗೊಂಡುವು. ಹೆಗಡೆ ಅವರಿಗೆ ಬೆಂಗಳೂರಿನ ಸತೀಶ್ ರಾಜನ್ ಘಟಂ ಸಾಥ್ ನೀಡಿದರು. ಡಾ. ಬಿ. ವಿ. ಉಡುಪ ಅವರಿಗೆ ವರ್ಷದ ವೀಗನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    two × three =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.