Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಲ್ಲವ ಸಮಾಜ ಸೇವಾ ಸಂಘ: ಅಭಿನಂದನಾ ಸಮಾರಂಭ
    ಊರ್ಮನೆ ಸಮಾಚಾರ

    ಬಿಲ್ಲವ ಸಮಾಜ ಸೇವಾ ಸಂಘ: ಅಭಿನಂದನಾ ಸಮಾರಂಭ

    Updated:19/04/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕೇವಲ ಬಿಲ್ಲವರು ಮಾತ್ರವಲ್ಲ ವಿಶ್ವ ಮಾನವ ಸಮುದಾಯವನ್ನೆ ಒಟ್ಟುಗೂಡಿಸಬೇಕು ಎನ್ನುವ ಚಿಂತನೆಯನ್ನು ಕಂಡವರು ಬ್ರಹ್ಮಶ್ರೀ ನಾರಾಯಣಗುರುಗಳು. ಗೋಕರ್ಣನಾಥ ಕ್ಷೇತ್ರವಲ್ಲದೆ, 80 ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಅವರು ಪ್ರತಿಷ್ಠೆ ಕಾರ್ಯವನ್ನು ನೆರವೇರಿಸಿದ್ದಾರೆ. ಅವರು ಅಂದು ಸ್ಥಾಪಿಸಿದ್ದ ಶಿಕ್ಷಣ ಸಂಸ್ಥೆಗಳು ಇಂದು ವಿಶ್ವ ವಿದ್ಯಾಲಯಗಳಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಭಾನುವಾರ ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನಡೆದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

    ವಿದ್ಯೆಯನ್ನು ಯಾರಿಂದಲೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ವಿದ್ಯೆಗೆ ಮಾತ್ರ ಬಡತವನ್ನು ಹೋಗಲಾಡಿಸುವ ಶಕ್ತಿ ಇದೆ. ಮಕ್ಕಳಲ್ಲಿ ಜ್ಞಾನಾವರಣಕ್ಕೆ ಅವಕಾಶ ಕಲ್ಪಿಸಬೇಕು. ಪ್ರತಿಯೊಂದು ಸಮಾಜ ಸಂಘಟನೆಗಳು ಅವರವರ ದ್ಯೇಯೋದ್ದೇಶಗಳ ಹಿನ್ನೆಲೆಯಲ್ಲಿ ಕೆಲಸ ಮಾಡಬೇಕು. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಧಾರ್ಮಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಬೆಳವಣಿಗೆ ಸಾಧಿಸಿದಲ್ಲಿ ಸಮಾಜಗಳು ಅಭಿವೃದ್ಧಿಯಾಗುತ್ತದೆ. ಸಂಘಟನೆಗಳು ನಿಂತ ನೀರಾಗದೆ ಹರಿಯುವ ನೀರಾಗಬೇಕು. ಭವಿಷ್ಯದ ಪೀಳಿಗೆಯ ಯುವ ಸಮುದಾಯಕ್ಕೆ ನಾಯಕತ್ವ ಅವಕಾಶಗಳು ದೊರಕಬೇಕು. ತುಳು ನಾಡಿನ ವೀರ ಪುರುಷರಾದ ಕೋಟಿ-ಚನ್ನಯ್ಯರ ಬದುಕಿನ ಆದರ್ಶಗಳು ನಮಗೆ ನಿತ್ಯ ಸ್ಮರಣೀಯವಾಗಬೇಕು ಎಂದರು.

    ಕರ್ನಾಟಕದಲ್ಲಿ ಬಿಲ್ಲವರು, ಈಡಿಗರು, ನಾಮಧಾರಿಗಳು, ಕೇರಳದಲ್ಲಿ ತೀಯಾ, ಆಂಧ್ರದಲ್ಲಿ ಗೌಡರ್, ತಮಿಳುನಾಡಿನಲ್ಲಿ ನಾಡವರ್, ಗೋವಾದಲ್ಲಿ ಭಂಡಾರಿ, ಉತ್ತರ ಭಾರತದಲ್ಲಿ ಗುಪ್ತಾಸ್ ಸೇರಿದಂತೆ ದೇಶಾದ್ಯಾಂತ ಬಿಲ್ಲವ ಸಮುದಾಯ ಬೇರೆ ಬೇರೆ ಹೆಸರಿನಲ್ಲಿ ಗುರುತಿಸಿಕೊಂಡಿದೆ. ಸೈನ್ಯ, ವೈದ್ಯಕೀಯ, ತಂತ್ರಜ್ಞಾನ, ಶಿಕ್ಷಣ, ಉದ್ಯಮ, ರಾಜಕೀಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಬಿಲ್ಲವ ಸಮುದಾಯವನ್ನು ಕೇವಲ ಮೂರ್ತೆಧಾರಿಕೆಗೆ ಸೀಮಿತಗೊಳಿಸುವ ಹುನ್ನಾರದಿಂದ ಹೊರ ಬರಬೇಕಾಗಿದೆ ಎಂದ ಅವರು, ಎಲ್ಲ ಸಮಾಜದವರೊಂದಿಗೆ ಪ್ರೀತಿ, ವಿಶ್ವಾಸದ ನಡೆಯೊಂದಿಗೆ ನಮ್ಮ ಸಮಾಜವನ್ನು ಬೆಳೆಸುವ ಗುರಿ ಸಂಘಟನೆಯವರಲ್ಲಿ ಇರಬೇಕು ಎಂದರು.

    ಬಿಲ್ಲವ ಸೇವಾ ಸಮಾಜದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಉದ್ಯಮಿ ಗೋವಿಂದ ಬಾಬು ಪೂಜಾರಿ, ಬಿಲ್ಲವ ಸೇವಾ ಸಂಘದ ಉಪಾಧ್ಯಕ್ಷರಾದ ಭಾಸ್ಕರ ಬಿಲ್ಲವ, ರಾಮ ಪೂಜಾರಿ, ನಾರಯಣಗುರು ಯುವಕ ಮಂಡಲ ಅಧ್ಯಕ್ಷ ಶ್ರೀನಾಥ್ ಪೂಜಾರಿ ಕಡ್ಗಿ ಮನೆ, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ ಶೆಶಿಕಲಾ ಬಿಜೂರು ಇದ್ದರು.

    Click here

    Click here

    Click here

    Call us

    Call us

    ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಭಾಸ್ಕರ ಬಿಲ್ಲವ, ವಿಜಯ ಎಸ್.ಪೂಜಾರಿ, ಮಹೇಂದ್ರಕುಮಾರ ಪೂಜಾರಿ, ಜ್ಯೋತಿ ಉದಯ್ಕುಮಾರ ಪೂಜಾರಿ, ಶೇಖರ ಪೂಜಾರಿ ಹುಂಚಾರಬೆಟ್ಟು, ಕೆ.ಪಿ.ಶೇಖರ ಪೂಜಾರಿ, ವಿಶ್ವನಾಥ ಪೂಜಾರಿ ಗರಡಿಮನೆ ಹಾಗೂ ನೂತನವಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿರುವ ಬಿಲ್ಲವ ಸಮುದಾಯದ ಗ್ರಾಮ ಪಂಚಾಯಿತಿ ಸದಸ್ಯರನ್ನು ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅಭಿನಂದಿಸಿದರು. ಗಣೇಶ್ ಪೂಜಾರಿ ವಿಠ್ಠಲವಾಡಿ ಸ್ವಾಗತಿಸಿದರು, ಭಾಸ್ಕರ್ ವಿಠ್ಠಲವಾಡಿ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.