ಶ್ರೀ ಬ್ರಹ್ಮ ಬೈದರ್ಕಳ ಗರಡಿ ಟ್ರಸ್ಟ್ ನಾವುಂದ: ಅಧ್ಯಕ್ಷರಾಗಿ ಮುತ್ತ ಬಿಲ್ಲವ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಟ್ರಸ್ಟ್ ರಿ. ನಾವುಂದ ಇದರ ಆಡಳಿತ ಮೊಕ್ತೇಸರ ಹಾಗೂ ಕಾರ್ಯದರ್ಶಿ ಶೇಖರ ಎಮ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜರಗಿದ ಗರಡಿಯ ಆಡಳಿತ ಸಮಿತಿಯ ಸಭೆಯಲ್ಲಿ ಗರಡಿಯ ಟ್ರಸ್ಟಿಯಾದ ಮುತ್ತ ಬಿಲ್ಲವ ಅವರನ್ನು ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Call us

Click Here

ಉಪಾಧ್ಯಕ್ಷರಾಗಿ ಗರಡಿ ಮನೆಯ ನಾಗೇಶ್ ಪಿ ಪೂಜಾರಿ ಅವರನ್ನು ಆಯ್ಕೆ ಮಾಡಲಾಯಿತು, ಈ ಸಂದರ್ಭದಲ್ಲಿ ಗರಡಿಯ ಬಲ್ಲಾಳರಾಗಿರುವ ಚಂದ್ರಶೇಖರ ಶೆಟ್ಟಿ, ಕೆಳಗಿನ ಮನೆ ನಿವೃತ್ತ ಶಿಕ್ಷಕ ಸೀತಾರಾಮ ಪೂಜಾರಿ, ಆರ್ ಕೆ ಬಿಲ್ಲವ, ರಘು ಪೂಜಾರಿ ಬಿಇಎಸ್‌ಟಿ ಮುಂಬೈ, ವಸಂತ ಪೂಜಾರಿ, ಸತೀಶ್ ಪೂಜಾರಿ, ಅಶೋಕ ಪೂಜಾರಿ, ಸಂತೋಷ ಪೂಜಾರಿ, ಸತ್ಯವತಿ ಬಿಲ್ಲವ, ಸುಧಾಕರ ಪೂಜಾರಿ ಮತ್ತಿತರು ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ ಡಾ. ಎನ್ ಕೆ ಬಿಲ್ಲವ ಅವರನ್ನು ಗೌರವಿಸಲಾಯಿತು. ತಾಲೂಕು ಪಂಚಾಯತಿ ಸದಸ್ಯ ಹಕ್ಕಾಡಿ ಜಗದೀಶ ಪೂಜಾರಿ, ರಾಜೀವ ಶೆಟ್ಟಿ ನೂತನ ಅಧ್ಯಕ್ಷರಿಗೆ ಅಭಿನಂದಿಸಿದರು.

Leave a Reply