ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ: 22 ವಟುಗಳಿಗೆ ಸಾಮೂಹಿಕ ಉಪನಯನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ತಾಲೂಕು ಗಾಣಿಗ ಸೇವಾ ಸಂಘದ ಆಶ್ರಯದಲ್ಲಿ ಸಾಮೂಹಿಕ ಉಪನಯನ, ಸತ್ಯನಾರಾಯಣ ಪೂಜೆ, ರಾಮ ನವಮಿಯನ್ನು ವ್ಯಾಸರಾಜ ಕಲಾ ಮಂದಿರದಲ್ಲಿ ಆಚರಿಸಲಾಯಿತು.

Call us

Click Here

ಸಮಾಜದ 22 ವಟುಗಳಿಗೆ ಸಾಮೂಹಿಕ ಉಪನಯನ ನಡೆಯಿತು. ಮಠದ ಅರ್ಚಕ ವಿಜಯ ಪೆಜತ್ತಾಯ ಪೂಜಾ ವಿಧಿ ವಿಧಾನ ನಡೆಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ ಬಿ.ಕುಂಭಾಶಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜತೆ ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ಆಗಮಿಸಿದರು. ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಗೌರವಾಧ್ಯಕ್ಷ ಕೆ.ಎಂ.ಲಕ್ಷ್ಮಣ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ ಗಾಣಿಗ ಬಸ್ರೂರು ಸ್ವಾಗತಿಸಿದರು. ಕೋಶಾಧಿಕಾರಿ ನಾಗರಾಜ ಗಾಣಿಗ ಹಿಲ್ಕೋಡು ವಂದಿಸಿದರು. ಆಡಳಿತ ಮಂಡಳಿಯ ಸದಸ್ಯರಾದ ಚಂದ್ರಶೇಖರ ಬೀಜಾಡಿ ಪರಿಚಯಿಸಿ, ಸುಬ್ರಹ್ಮಣ್ಯ ಜಿ.ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.

Click here

Click here

Click here

Click Here

Call us

Call us

Leave a Reply