Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಜೂರು ಗ್ರಾಮಸಭೆ: ಗೋಮಾಳ ಭೂಮಿ ಹುಡುಕಿಕೊಡಿ
    ಊರ್ಮನೆ ಸಮಾಚಾರ

    ಬಿಜೂರು ಗ್ರಾಮಸಭೆ: ಗೋಮಾಳ ಭೂಮಿ ಹುಡುಕಿಕೊಡಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ನಮ್ಮ ಗ್ರಾಮ ವ್ಯಾಪ್ತಿಯ ಗೋಮಾಳ ಭೂಮಿ ಗುರುತಿಸಿಕೊಡುವಂತೆ, ಕಂದಾಯ ಇಲಾಖೆಯ ಅಧಿಕಾರಿಗೆ ಕಳೆದ ಹಲವಾರು ವರ್ಷಗಳಿಂದ ಗ್ರಾಮ ಸಭೆಯಲ್ಲಿ ಮನವಿ ಮಾಡುತ್ತಾ, ಇದ್ದೇವೆ, ಇದುವರೆಗೆ ಗೋಮಾಳ ಭೂಮಿ ಗುರುತಿಸುವ ಕಾರ್ಯ ನಡೆದಿಲ್ಲ. ಶೀಘ್ರ ಗೋಮಾಳ ಭೂಮಿ ಹುಡುಕಿಕೊಡಿ ಪ್ಲೀಸ್ ಎಂದು ಗ್ರಾಮಸ್ಥರು ಕಂದಾಯ ಅಧಿಕಾರಿಗಳಲ್ಲಿ ತಮ್ಮ ಅಳಲು ತೋಡಿಕೊಂಡ ಘಟನೆ  ಬಿಜೂರು ಗ್ರಾಮಸಭೆಯಿಲ್ಲಿ ನಡೆಯಿತು.

    Click Here

    Call us

    Click Here

    ಬಿಜೂರು ಗ್ರಾಮ ಪಂಚಾಯಿತಿನ ಮೊದಲ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ. ಅಧ್ಯಕ್ಷೆ  ಲೋಲಾಕ್ಷಿ ದೇವಾಡಿಗ ಅವರ ಅಧ್ಯಕ್ಷತೆಯಲ್ಲಿ ಕಂಚಿಕಾನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆಯಿತು.

    ಗ್ರಾಮ ವ್ಯಾಪ್ತಿಯಲ್ಲಿ ಗೋಮಾಳ ಭೂಮಿ ಗುರುತಿಸದ ಕಾರಣ ಜಾನುವಾರುಗಳು ಕೃಷಿ ಭೂಮಿಗೆ ನುಗ್ಗುತ್ತಿವೆ, ಇದರಿಂದಾಗಿ ವ್ಯವಸಾಯ ಮಾಡಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ ಎಂದು ಗ್ರಾಮಸ್ಥ ವೆಂಕಟೇಶ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು, ಇದಕ್ಕೆ ಗ್ರಾಮಸ್ಥರಾದ ಗಣೇಶ್ ಪೂಜಾರಿ, ರಾಜೇಂದ್ರ, ಜಯರಾಮ ಶೆಟ್ಟಿ, ರಾಘವೇಂದ್ರ ಮೊದಲಾದವರು ಧ್ವನಿ ಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮ ಕರಣೀಕ ಮಂಜುನಾಥ ಗೋಮಾಳ ಗುರುತಿಸುವಂತೆ ಈಗಾಗಲೇ ಸರ್ವೇಯರಿಗೆ ಸೂಚನೆ ನೀಡಲಾಗಿದೆ ಎಂದು ಸಮಜಾಯಿಸಿ ನೀಡಿದರು. ನೆಮ್ಮದಿ ಕೇಂದ್ರದಲ್ಲಿ ಆರ್‌ಟಿಸಿ ಪಡೆಯಲು ದಿನವಿಡಿಲಿ ಸರದಿ ಸಾಲಿನಲ್ಲಿ ನಿಂತು ಕಾಯಬೇಕಾಗಿದೆ, ಆರ್‌ಟಿಸಿಯನ್ನು  ಪಂಚಾಯಿತಿನಲ್ಲಿ ನೀಡಲು ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸರ್ಕಾರ ವಿಧಾನಪರಿಷತ್ತಿನ ಸದಸ್ಯ ಪ್ರತಾಪಶ್ಚಂದ್ರ ಶೆಟ್ಟಿಯವರು ಸದನದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದೆ, ಆದರೆ ಇದುವರೆಗೂ ಆ ವ್ಯವಸ್ಥೆ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಗ್ರಾಮಸ್ಥ ವೆಂಕಟೇಶ ರಾವ್ ಹೇಳಿದರು. ಶೀಘ್ರ ಪಂಚಾಯಿತಿನಲ್ಲಿ ನೀಡಲು ವ್ಯವಸ್ಥೆ ಕಲ್ಪಿಸಲು ನಿರ್ಣಯ ಕಳುಹಿಸಿ ಎಂದು ಅವರು ಆಗ್ರಹಿಸಿದರು.

    ನಾಯ್ಕನಕಟ್ಟೆಯಲ್ಲಿರವ ಕೃಷಿ ಯಂತ್ರಮನೆಗೆ ಸರ್ಕಾರ ೭೫ ಲಕ್ಷ ರೂ. ನೀಡಿದೆ, ಆದರೆ ಈಗ ಅದು ಶೋರೂಂ ಆಗಿದಂತಿದೆ, ಇಲ್ಲಿನ ಕೃಷಿ ಯಂತ್ರಗಳಿಗೆ ಸಮರ್ಪಕ ಚಾಲಕ ಇಲ್ಲ, ಅಲ್ಲಿ ವ್ಯವಸ್ಥೆ ಹದಗೆಟ್ಟಿದ್ದು, ಮುಂದಿನ ವರ್ಷ ಇಲ್ಲಿನ ಯಂತ್ರಗಳು ಗುಜರಿ ಅಂಗಡಿಗೆ ಸೇರುವ ಸಾಧ್ಯತೆಯಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಅಲ್ಲಿ ಕೇವಲ ೨ ಕೃಷಿ ಯಂತ್ರಗಳು  ಇರುವುದರಿಂದ, ಕೃಷಿಕರು ದುಬಾರಿ ಬೆಲೆ ನೀಡಿ ಖಾಸಗಿ ವ್ಯಕ್ತಿಗಳ ಯಂತ್ರಗಳಿಂದ ಕೃಷಿ ಚಟುವಟಿಕೆ ನಡೆಸಬೇಕಾಗಿದೆ, ಇದನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

    ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆ ಹಾನಿ ಸಂವಿಸಿದಾಗ ಇಲಾಖೆ ನೀಡುವ ಪರಿಹಾರದ ಮೊತ್ತ ತುಂಬಾ ಕಡಿಮೆಯಾಗಿದೆ, ಇಂದು ಕೃಷಿ ಚಟುವಟಿಕೆಯ ಉತ್ಪಾದನ ವೆಚ್ಚ ಅಧಿಕವಾಗಿದೆ, ಇಲ್ಲಿನ ವ್ಯವಸ್ಥೆಯ ಅನಾನೂಕೂಲತೆಯಿಂದಾಗಿ ರೈತರು ಆತ್ಮಹತ್ಯೆಯಂತಹ ಮಾಡಿಕೊಳ್ಳುವಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

    Click here

    Click here

    Click here

    Call us

    Call us

    ಉಡುಪಿ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಗೌರಿ ದೇವಾಡಿಗ, ತಾ.ಪಂ. ಸದಸ್ಯೆ ಗೌರಿ ದೇವಾಡಿಗ ಬಿಜೂರು, ಮಾರ್ಗದರ್ಶಿ ಅಧಿಕಾರಿ ನಾಗೇಶ್ ನಾಯ್ಕ, ಗ್ರಾಮ ಪಂಚಾಯಿತಿನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಅರಣ್ಯ ಇಲಾಖೆಯ ಭಿರ್ತಿ ರಾಜ್, ಕಂದಾಯ ಇಲಾಖೆಯ ಮಂಜುನಾಥ, ಆರೋಗ್ಯ ಇಲಾಖೆಯ ಶಾಂತಾ ಬಿ., ನಮ್ಮ ಭೂಮಿ ಸಂಸ್ಥೆಯ ಶಾಂತಿ, ಪಶುಸಂಗೋಪನಾ ಇಲಾಖೆಯ ಕಾಳಿಂಗ ಕೊಠಾರಿ, ಮೆಸ್ಕಾಂ ರಾಘವೇಂದ್ರ, ಕೃಷಿ ಇಲಾಖೆಯ ಗೋಪಾಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿವೇದಿತಾ ತಮ್ಮ ಇಲಾಖೆಯ ಮಾಹಿತಿಯ ನೀಡಿದರು. ಕಾರ್ಯದಶಿ ಮಾಧವ ದೇವಾಡಿಗ ನಿರೂಪಿಸಿದರು.

    Like this:

    Like Loading...

    Related

    Byndoor
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d