Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉದ್ಯೋಗ ಖಾತರಿ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮಸಭೆ
    ಊರ್ಮನೆ ಸಮಾಚಾರ

    ಉದ್ಯೋಗ ಖಾತರಿ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ 2005ರ ಸಾಮಾಜಿಕ ಲೆಕ್ಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಬುಧವಾರ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ನಡೆಯಿತು.

    Click Here

    Call us

    Click Here

    ಗ್ರಾಮ ಪಂಚಾಯತ್ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಗ್ರಾಪಂ ಉಪಾಧ್ಯಕ್ಷರನ್ನು ಕಡೆಗಣಿಸಿ ಗ್ರಾಮಸಭೆ ಆರಂಭಿಸಿದ ಬಗ್ಗೆ ಗ್ರಾಪಂ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ಕೂಡ ನಡೆಯಿತು. ಇದೇ ಸಂದರ್ಭ ಸಭೆಯಲ್ಲಿ ಹಾಜರಿದ್ದ ಅಧಿಕಾರಿಯೋರ್ವರು ಈ ಸಭೆಗೆ ಗ್ರಾಪಂ.ನ ಅವಶ್ಯಕತೆ ಇಲ್ಲ. ಇದು ಅಧಿಕಾರಿಗಳು ನಡೆಸುವ ಸಭೆ. ಈ ಸಭೆಗೆ ಉದ್ಯೋಗ ಖಾತರಿ ಯೋಜನೆಯ ಫಲಾನುಭವಿಗಳಿದ್ದರೆ ಸಾಕು ಎಂದು ನೀಡಿದ ಹೇಳಿಕೆ ಪಂಚಾಯತ್ ಸದಸ್ಯರನ್ನು ಮತ್ತಷ್ಟು ಕೆರಳಿಸಿತು. ಪಂಚಾಯತ್ ಅವಶ್ಯಕತೆ ಇಲ್ಲ ಎಂದಾದರೆ ಪಂಚಾಯತ್ ಬ್ಯಾನರ್ ತೆಗೆದು ಸಭೆ ನಡೆಸಿ, ಈ ಸಭೆಯ ಖರ್ಚನ್ನು ಕೂಡ ಪಂಚಾಯತ್ ಭರಿಸುವುದಿಲ್ಲ ಎಂದು ಪಟ್ಟು ಹಿಡಿದರು. ಇದೇ ಸಂದರ್ಭ ಗ್ರಾಪಂ ಸದಸ್ಯರು ಹಾಗೂ ಉಪಾಧ್ಯಕ್ಷರನ್ನು ಕಡೆಗಣಿಸಿ, ಅವರ ಮಾತಿಗೆ ಕಿಂಚಿತ್ತೂ ಬೆಲೆ ನೀಡದೆ ಸಭೆ ಮುಂದುವರಿಸಿದಾಗ ಮತ್ತಷ್ಟು ಗೊಂದಲಗಳಿಗೆ ಕಾರಣವಾಯಿತು.

    ಇದೇ ವೇಳೆ ಪಂಚಾಯತ್ ಆಡಳಿತವನ್ನು ಧಿಕ್ಕರಿಸಿ ಗ್ರಾಮಸಭೆಯನ್ನು ನಡೆಸಿದ ಮತ್ತು ಗ್ರಾಮ ಪಂಚಾಯತ್ ಸದಸ್ಯರನ್ನು ಅವಹೇಳನ ಮಾಡಿ ಉದ್ಧತನದ ಮಾತಾಡಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಸಭೆಯಲ್ಲಿ ಉಪಸ್ಥಿತರಿದ್ದ ಗ್ರಾಮ ಪಂಚಾಯತ್ ಸದಸ್ಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ದೂರು ನೀಡಿದರು.

    ಸಭೆಯ ಕೊನೆಯಲ್ಲಿ ಸಾರ್ವಜನಿಕರು ಅಹವಾಲು ಸಲ್ಲಿಸಬಹುದು ಎಂದು ಗ್ರಾಮಸಭೆಯ ನೋಡೆಲ್ ಅಧಿಕಾರಿಯವರು ಹೇಳುತ್ತಿದ್ದಂತೆಯೇ ಸಾರ್ವಜನಿಕರು ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಓದಿ ಹೇಳುವಂತೆ ಆಗ್ರಹಿಸಿದರು. ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಓದುತ್ತಿದಂತೆಯೇ ಗ್ರಾಮಸ್ಥರನ್ನು ಮತ್ತಷ್ಟು ಕೆರಳಿಸಿತು. ನೋಡೆಲ್ ಅಧಿಕಾರಿಗಳನ್ನು ಹಾಗೂ ಸಭೆಯಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ನಾಗರಿಕರು, ಯೋಜನೆಯಲ್ಲಿ ನಡೆದ ಅವ್ಯವಹಾರವನ್ನು ಮುಚ್ಚಿಡಲು ತುರಾತುರಿಯಲ್ಲಿ ಗ್ರಾಮಸಭೆ ನಡೆಸಿ, ತಪ್ಪು ತಪ್ಪು ನಿರ್ಣಯಗಳನ್ನು ಬರೆಯಲಾಗಿದೆ. ಗ್ರಾಮದಲ್ಲಿ ಯೋಜನೆಯು ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಈವರೆಗೆ ನಡೆದ ಯೋಜನೆಯ ಕಾಮಗಾರಿಗಳ ಸ್ಥಳ ಪರೀಕ್ಷೆ ನಡೆಸಿಲ್ಲ. ಸಭೆ ನಡೆಸಬೇಕೆನ್ನುವ ಉದ್ದೇಶದಿಂದ ಎಲ್ಲವನ್ನು ಮುಚ್ಚಿಟ್ಟು ಸಭೆ ನಡೆಸಿ ನಿರ್ಣಯ ದಾಖಲಿಸಿರುವುದು, ಗ್ರಾಪಂ ಉಪಾಧ್ಯಕ್ಷರು ಹಾಗೂ ಸದಸ್ಯರ ವಿರುದ್ಧ ನಿರ್ಣಯ ಕೈಗೊಂಡಿರುವುದು ಸರಿಯಲ್ಲ ಎಂದು ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

    ಗ್ರಾಪಂ ಉಪಾಧ್ಯಕ್ಷರು ಹಾಗೂ ಸದಸ್ಯರ ವಿರುದ್ಧ ನಿರ್ಣಯ ಕೈಗೊಳ್ಳುವುದಾದರೆ ಗ್ರಾಪಂ ಆಡಳಿತ ಹಾಗೂ ಸದಸ್ಯರನ್ನು ನಿಂದಿಸಿ ಅವಹೇಳನ ಮಾಡಿದ ಮತ್ತು ಸ್ಥಳೀಯಾಡಳಿತವನ್ನು ಕಡೆಗಣಿಸಿ ಸಭೆ ನಡೆಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ನಿರ್ಣಯಕೈಗೊಳ್ಳುವಂತೆ ಒತ್ತಾಯಿಸಿದರು. ಸಾರ್ವಜನಿಕರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ಮುಂದುವರೆಯುತ್ತಿರುವಂತೆಯೇ ಮಧ್ಯಪ್ರವೇಶಿಸಿದ ನೋಡೆಲ್ ಅಧಿಕಾರಿಯವರು ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ಸಭೆಯಲ್ಲಿ ಕೈಗೊಂಡ ನಿರ್ಣಯಗಳಿಗೆ ಗ್ರಾಮಸ್ಥರ ಸಮ್ಮತಿ ಇಲ್ಲ ಎಂಬ ನಿರ್ಣಯ ದಾಖಲಿಸಿ ಸಭೆಯನ್ನು ಮುಕ್ತಾಯಗೊಳಿಸಿದರು.

    Click here

    Click here

    Click here

    Click Here

    Call us

    Call us

    ಮೀನುಗಾರಿಕೆ ಇಲಾಖಾಧಿಕಾರಿ ದಿಲೀಪ್ ಕುಮಾರ್ ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿದ್ದರು. ಯೋಜನೆಯ ತಾಲೂಕು ಸಂಯೋಜನಾಧಿಕಾರಿ ಮೋಹನಚಂದ್ರ ಕಾಳಾವರಕರ್, ಕೋ-ಆರ್ಡಿನೇಟರ್ ಸುಕುಮಾರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ ಡಿಸೋಜ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    four + 7 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.