ಪೈಪ್‌ಲೈನ್ ಲೇಯಿಂಗ್ ಕಾಮಗಾರಿ: ವಾಹನ ಸಂಚಾರ ಸ್ಥಗಿತ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸೌಕೂರು ಏತ ನೀರಾವರಿ ಕಾಮಗಾರಿಯಲ್ಲಿಪೈಪ್‌ಲೈನ್ ಲೇಯಿಂಗ್ ಕಾಮಗಾರಿಯನ್ನು ಕೈಗೊಳ್ಳಲಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿ 1989 ರ ಕಲಂ 221(ಎ)(2) & (5)
ರನ್ವಯ ಕುಂದಾಪುರ ತಾಲೂಕಿನ ಮಾವಿನಕಟ್ಟೆ ಸರ್ಕಲ್ನಿಂದ ನೇರಳಕಟ್ಟೆ ಸರ್ಕಲ್ವರೆಗೆ ಮೇ 1 ರಿಂದ ಮೇ 11 ರ ವರೆಗೆ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ, ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

Call us

Click Here

ವಾಹನಗಳ ಪರ್ಯಾಯ ಮಾರ್ಗ: ಅಂಪಾರು-ನೇರಳಕಟ್ಟೆ-ನೆಂಪು-ಹೆಮ್ಮಾಡಿ ಮಾರ್ಗವಾಗಿ ಹಾಗೂ ಕಂಡ್ಲೂರು-ಗುಲ್ವಾಡಿ-ಮಾವಿನಕಟ್ಟೆ-ಹಟ್ಟಿಯಂಗಡಿ-ತಲ್ಲೂರು-ಹೆಮ್ಮಾಡಿ ಮಾರ್ಗವಾಗಿ ತಲುಪುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply