ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ನಾರಾಯಣಗುರು ಯುವಕ ಮಂಡಲದ ಪದಾಧಿಕಾರಿಗಳು ಲಾಕ್ ಡೌನ್’ನಲ್ಲಿ ಕುಂದಾಪುರ ಪರಿಸರದಲ್ಲಿ ಹಸಿದವರಿಗೆ, ವಿಕಲ ಚೇತನರಿಗೆ, ಲಾರಿ ಚಾಲಕರಿಗೆ, ಕೂಲಿಕಾರ್ಮಿಕರಿಗೆ ಸುಮಾರು 250 ಮಂದಿಗೆ ಊಟ ವಿತರಿಸಿದರು.
ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಯುವಕ ಮಂಡಲ ರಿ. ಅಧ್ಯಕ್ಷ ಶ್ರೀನಾಥ್ ಕಡ್ಗಿಮನೆ, ಕಾರ್ಯದರ್ಶಿ ವಿಜಯ್ ಪೂಜಾರಿ, ಕಿರಣ್ ಪೂಜಾರಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.