Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾತೆಯರ ಹಬ್ಬ: ವರಮಹಾಲಕ್ಷ್ಮೀ ವ್ರತ
    ತನ್ನಿಮಿತ್ತ

    ಮಾತೆಯರ ಹಬ್ಬ: ವರಮಹಾಲಕ್ಷ್ಮೀ ವ್ರತ

    Updated:05/08/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಲೇಖನ.
    ಆಷಾಢ ಮಾಸದ ಕೊನೆಯ ದಿನ ಭೀಮನ ಅಮವಾಸ್ಯೆ ಕಳೆಯುತ್ತಿದ್ದ ಹಾಗೆ ಶ್ರಾವಣ ಮಾಸ ಪ್ರಾರಂಭ. ಈ ಹಿಂದೂ ಮಾಸದಲ್ಲಿ ಹಬ್ಬಗಳ ಸಾಲೇ ಸಾಲು ಎದಿರುಗೊಳ್ಳುತ್ತದೆ. ಈ ಮಾಸದಲ್ಲಿ ಬರುವ ಹಬ್ಬಗಳು ಮತ್ತು ವ್ರತಗಳು ಬೇರೆ ಯಾವ ಮಾಸದಲ್ಲಿಯೂ ಬರುವುದಿಲ್ಲ. ಆದ್ದರಿಂದಲೇ ಈ ಮಾಸ ಹಬ್ಬಗಳ ಮಾಸ ಎನ್ನುವರು.

    Click Here

    Call us

    Click Here

    ವರಮಹಾಲಕ್ಷ್ಮಿ ವ್ರತ: ಶುಭ ಶ್ರಾವಣ ಮಾಸದ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬ. ದಕ್ಷಿಣ ಭಾರತದ ಪ್ರಮುಖವಾದ ಹಬ್ಬಗಳಲ್ಲಿ ವರಮಹಾಲಕ್ಷ್ಮಿ ಹಬ್ಬವೂ ಒಂದು. ಸಕಲ ಐಶ್ವರ್ಯವನ್ನೂ ಕರುಣಿಸುವ ಮಹಾಲಕ್ಷ್ಮಿಗೆ ಮನೆಮನೆಯಲ್ಲಿ ಸಂಭ್ರಮದ ಪೂಜೆ ನಡೆಯುತ್ತದೆ. ಎಲ್ಲೆಲ್ಲೂ ಸುಖ, ಸಂಪತ್ತು, ಸಮೃದ್ಧಿಯನ್ನು ಕರುಣಿಸೋ ಭಾಗ್ಯದಾತೆಯ ಆರಾಧನೆ ನಡೆಯುತ್ತದೆ. ಶ್ರೀ ಮಹಾವಿಷ್ಣುವಿನ ಪತ್ನಿ ವರ ಮಹಾಲಕ್ಷ್ಮಿಯನ್ನು ಪೂಜಿಸಿದರೆ, ಸಕಲ ಸೌಭಾಗ್ಯವೂ ದೊರೆಯುತ್ತದೆ ಎಂಬ ನಂಬಿಕೆ ಜನರಲ್ಲಿದೆ.

    ಪೂಜಾ ವಿಧಾನ : ಅಂದಿನ ದಿನ ಮುಂಜಾನೆ ಚುಮುಚುಮು ಬೆಳಕಿರುವಾಗಲೇ ಎದ್ದು, ಮನೆಯ ಮುಂದಿನ ಬಾಗಿಲಿಗೆ ಥಳಿ ರಂಗೋಲಿ ಹಾಕಿ, ಬಾಗಿಲಿಗೆ ಹಸಿರು ತೋರಣ ಕಟ್ಟಿದಾಗ ಮನೆಗೆ ಒಂದು ಬಗೆಯ ಕಳೆ. ಹೆಣ್ಣುಮಕ್ಕಳು ಅಭ್ಯಂಜನ ಮುಗಿಸಿಕೊಂಡು ರೇಷಿಮೆ ಬಟ್ಟೆ ಧರಿಸಿಕೊಂಡು ಸರಬರ ಓಡಾಡುತ್ತಾ ಪೂಜಾ ಸಾಮಗ್ರಿಗಳನ್ನೆಲ್ಲಾ ತಯಾರು ಮಾಡಿಕೊಂಡು ಪೂಜೆಗೆ ಸಿದ್ಧರಾಗುತ್ತಾರೆ.

    ಆಭರಣಗಳಿಂದ ಭೂಷಿತೆಯಾದ ಲಕ್ಷ್ಮಿದೇವಿಯ ಮುಖವಾಡವನ್ನು ಒಂದು ಕಲಶದಲ್ಲಿರಿಸಿ ಅದಕ್ಕೆ ಚೆಂದವಾದ ಜರತಾರಿಯ ಅಂಚು ಸೆರಗು ಇರುವ ಸೀರೆಯನ್ನು ಉಡಿಸಲಾಗುತ್ತದೆ. ಹೀಗೆ ಅಲಂಕೃತಳಾದ ಶ್ರೀವಲ್ಲಭೆ ಬಾಳೆಯ ದಿಂಡಿನಿಂದ ಶೋಭಿತವಾದ ಒಂದು ಮಂಟಪದಲ್ಲಿ ಸ್ಥಾಪಿತಳಾಗುತ್ತಾಳೆ. ಆ ಮಂಟಪದ ಮೇಲ್ಭಾಗಕ್ಕೆ ಕಟ್ಟಿದ ಮಾವಿನ ತೋರಣ ಅದರ ಸೊಬಗನ್ನು ಮತ್ತಷ್ಟು ಹೆಚ್ಚಿಸುತ್ತದೆ.

    ಹೀಗೆ ಸ್ಥಾಪಿತವಾದ ಹರಿದ್ರಕುಂಕುಮಶೋಭಿತಳಾದ ಲಕ್ಷ್ಮಿದೇವಿಗೆ ಅರಿಶಿನ ಕುಂಕುಮ ಗೆಜ್ಜೆ ವಸ್ತ್ರ ಏರಿಸಿ ಪೂಜೆ ಮಾಡಲಾಗುತ್ತದೆ. ಸುಮಧುರ ಸುವಾಸನೆಯುಳ್ಳ ಸೇವಂತಿಗೆ, ಮಲ್ಲಿಗೆ, ಸಂಪಿಗೆ ಹೂವುಗಳಿಂದ ತಾಯಿ ಅಲಂಕೃತಳಾಗುತ್ತಾಳೆ. ಭಾಗ್ಯದ ಲಕ್ಷ್ಮಿ ಬಾರಮ್ಮ… ಎಂದು ಹಾಡುತ್ತ ಅತ್ಯಂತ ಹರ್ಷದಿಂದ, ಭಕ್ತಿಭಾವದಿಂದ ತಮ್ಮ ತಮ್ಮ ಮನೆಗಳಲ್ಲಿ ಶಾಶ್ವತವಾಗಿ ನೆಲೆಸಿ ಹರಿಸಲಿ ಎಂದು ಆಕೆಯನ್ನು ಬರಮಾಡಿಕೊಳ್ಳುತ್ತಾರೆ.

    Click here

    Click here

    Click here

    Call us

    Call us

    ನೈವೇದ್ಯಕ್ಕಾಗಿ ವಿಧವಿಧವಾದ ಸಿಹಿತಿನಿಸುಗಳನ್ನು ಮಾಡಿ ಆಕೆಗೆ ಮೀಸಲಿಡಲಾಗುತ್ತದೆ. ಅದರಲ್ಲೂ ಪುಟಾಣಿ ಸಕ್ಕರೆಯೆಂದರೆ ಸರ್ವಾಲಂಕಾರಭೂಷಿತೆಗೆ ಬಹಳ ಪ್ರಿಯ. ಹೀಗೆ ಬಗೆಬಗೆಯ ಹಣ್ಣು, ಕಾಯಿ, ಸಿಹಿತಿನಿಸು, ಹಾಲುಸಕ್ಕರೆಗಳನ್ನು ಆಕೆಗೆ ಸಮರ್ಪಿಸಲಾಗುತ್ತದೆ. ಈ ದಿನ ಮುತ್ತೈದೆಯರನ್ನು ಮನೆಗೆ ಆಮಂತ್ರಿಸಿ ಅವರಿಗೆ ಅರಿಶಿನ ಕುಂಕುಮದ ಜೊತೆಗೆ ಮರದ ಬಾಗಣವನ್ನು ಕೊಡಲಾಗುತ್ತದೆ.

    ನಂತರ ಕೊನಗೆ, ತಮ್ಮ ಸಂಕಷ್ಟಗಳನ್ನು ದೂರಮಾಡಿ ಸುಖ ಶಾಂತಿ ಶಾಶ್ವತವಾಗಿ ನೆಲೆಸಲಿ, ಸಮೃದ್ಧಿಯನ್ನು ದಯಪಾಲಿಸಲಿ ಎಂದು ಹೆಂಗಳೆಯರು ಆರತಿ ಬೆಳಗುತ್ತಾರೆ

    ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

    Like this:

    Like Loading...

    Related

    Bangalore Festival Kundapur Varamahalaxmi Vrata
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಶರನ್ನವರಾತ್ರಿ: ದೇವಿಯ ಒಂಭತ್ತು ಸ್ವರೂಪಗಳ ಮಹತ್ವ

    22/09/2025

    ಬೆಳಕ ಚಿತ್ರಿಸಿದ ಕ್ಷಣಗಳ ಹಬ್ಬ – ವಿಶ್ವ ಛಾಯಾಗ್ರಹಣ ದಿನ

    19/08/2025

    ಮುಖದ ಸೌಂದರ್ಯ ಹೆಚ್ಚಿಸಲು ಫೇಶಿಯಲ್‌ ಯೋಗ ಎಂಬ ಟ್ರೆಂಡ್

    11/04/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d