Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸಲು ಹೆಚ್ಚಿನ ಕರ್ತವ್ಯ ನಿರ್ವಹಿಸಿ: ಡಾ.ಎಂ.ಟಿ. ರೇಜು
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸಲು ಹೆಚ್ಚಿನ ಕರ್ತವ್ಯ ನಿರ್ವಹಿಸಿ: ಡಾ.ಎಂ.ಟಿ. ರೇಜು

    Updated:21/05/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕೋವಿಡ್ ಪಾಸಿಟಿವ್ ಆಗಿ, ಹೋಂ ಐಸೋಲೇಷನ್ನಲ್ಲಿರುವವರು, ಅನಗತ್ಯವಾಗಿ ಮನೆಯಿಂದ ಹೊರಬಂದು , ಸಾರ್ವಜನಿಕವಾಗಿ ಸ್ಥಳಗಳಲ್ಲಿ ತಿರುಗಾಡಿ, ಆರೋಗ್ಯವಂತರಿಗೆ ಕೋವಿಡ್ ಸೋಂಕು ಹರಡುವುದನ್ನು ತಪ್ಪಿಸುವ ಉದ್ದೇಶದಿಂದ, ಹೋಂ ಐಸೋಲೇಷನ್ ನಲ್ಲಿರುವವರನ್ನು ಗುರುತಿಸಲು ಸಾಧ್ಯವಾಗುವಂತೆ, ಅವರ ಕೈಗೆ ಸೀಲ್ ಹಾಕುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ. ರೇಜು ಸೂಚನೆ ನೀಡಿದರು.

    Click Here

    Call us

    Click Here

    ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಆಗಿ , ಹೋಂ ಐಸೋಲೇಶನ್ ನಲ್ಲಿರುವ ವ್ಯಕ್ತಿಗಳು , ಐಸೋಲೇಷನ್ ನಿಯಮಗಳನ್ನು ಉಲ್ಲಂಘಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯವಾಗಿ ತಿರುಗಾಡುತ್ತಿರುವ ಕುರಿತು ದೂರುಗಳು ಬರುತ್ತಿರುವ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಉಸ್ತುವಾರಿ ಕಾರ್ಯದರ್ಶಿಗಳ ಗಮನಕ್ಕ ತಂದರು, ಈ ಕುರಿತಂತೆ ಪ್ರತಿಕ್ರಿಯಿಸಿದ ಡಾ. ಎಂ.ಟಿ.ರೇಜು ಸೋಂಕಿತರ ಕೈಗಳಿಗೆ ಸೀಲ್ ಹಾಕುವ ಮೂಲಕ, ಅವರು ಮನೆಯಿಂದ ಹೊರಬರದಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡದಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂದರು.

    ಕೋವಿಡ್ ಪರೀಕ್ಷಾ ವರದಿಯನ್ನು ವಿಳಂಬಕ್ಕೆ ಆಸ್ಪದ ನೀಡದೆ ಕಾಲಮಿತಿಯಿಳಗೆ ವರದಿ ನೀಡಿ, ಗ್ರಾಮೀಣ ಪ್ರದೇಶಗಳಿಂದ ಸಂಗ್ರಹಿಸುವ ಪರೀಕ್ಷಾ ಮಾದರಿಯನ್ನು ಆದಷ್ಟು ಶೀಘ್ರದಲ್ಲಿ ಸಂಗ್ರಹಿಸಿ ಎಂದರು. ಜಿಲ್ಲೆಯ ಆಸ್ಪತ್ರೆಗಳಲ್ಲಿನ ಬೆಡ್ ಸೌಲಭ್ಯದ ಕುರಿತು ರೂಪಿಸಿರುವ ವ್ಯವಸ್ಥೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು , ಆಸ್ಪತ್ರೆಗಳಲ್ಲಿ ಆಕ್ಸಿಜಿನ್ ಪೋಲಾಗದಂತೆ ಕೈಗೊಂಡಿರುವ ಕ್ರಮಗಳನ್ನು ಶ್ಲಾಘಿಸಿ, ಜಿಲ್ಲೆಗೆ ಅಗತ್ಯವಿರುವ ಹೆಚ್ಚುವರಿ ಆಕ್ಸಿಜನ್ ಪೂರೈಕೆ ಕುರಿತಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಎಲ್ಲಾ ಹೆಲ್ತ್ಕೇರ್ ವರ್ಕರ್ ಮತ್ತು ಪ್ರಂಟ್ ಲೈನ್ ವರ್ಕರ್ಗಳು , ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸಲು ಹೆಚ್ಚಿನ ಶ್ರಮವಹಿಸಿ ಕರ್ತವ್ಯ ನಿರ್ವಹಿಸುವಂತೆ ಡಾ.ಎಂ.ಟಿ.ರೇಜು ಹೇಳಿದರು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿ.ಪಂ. ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಡಿಹೆಚ್ಓ ಡಾ.ಸುದೀರ್ ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ.ಮಧುಸೂನ್ ನಾಯಕ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ ಭಟ್ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    3 × three =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.