ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ, ಮೇ 27: ಪ್ರಸ್ತುತ ಕೋವಿಡ್-19 ನಿರ್ಬಂಧಗಳ ಸಂದರ್ಭದಲ್ಲಿ, ಸಾರ್ವಜನಿಕರಿಗೆ ಬ್ಯಾಂಕಿಂಗ್ ಸೌಲಭ್ಯಗಳು ಅತೀ ಅವಶ್ಯವಿರುವುದರಿಂದ, ಕೋವಿಡ್ 19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಬ್ಯಾಂಕುಗಳ ವ್ಯವಹಾರ ಹಾಗೂ ಕೆಲಸದ ಸಮಯವನ್ನು ಬದಲಿಸಲು ಸೂಚಿಸಲಾಗಿದೆ.
ಮೇ 28 ರಿಂದ ಜೂನ್ 6ರ ವರೆಗೆ ಬ್ಯಾಂಕ್ ಗಳಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರ ವರೆಗೆ ವ್ಯವಹಾರದ ಸಮಯ ಮತ್ತು ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವೆಗೆ ಕೆಲಸದ ಸಮಯ ಎಂದು ನಿಗದಿಗೊಳಿಸಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.