Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖಿನ್ನತೆಯಲ್ಲಿರುವವರ ಬಳಿ ಈ ಮಾತನಾಡಿ. ಅದೇ ಅವರಿಗೆ ಆತ್ಮವಿಶ್ವಾಸದ ಚಿಕಿತ್ಸೆ
    ವಿಶೇಷ ಲೇಖನ

    ಖಿನ್ನತೆಯಲ್ಲಿರುವವರ ಬಳಿ ಈ ಮಾತನಾಡಿ. ಅದೇ ಅವರಿಗೆ ಆತ್ಮವಿಶ್ವಾಸದ ಚಿಕಿತ್ಸೆ

    Updated:28/05/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ‘ನಿನ್ನ ಕಷ್ಟ ನನಗೆ ಅರ್ಥವಾಗುತ್ತದೆ’ ಹೀಗೆ ನಾವು ಹೇಳುವ ಒಂದು ಚಿಕ್ಕ ವಾಕ್ಯ ಹಲವರ ಬದುಕಿನಲ್ಲಿ ಹೊಸ ಚೈತನ್ಯವನ್ನೇ ತುಂಬಬಹುದು. ನಮ್ಮ ಮಾತನ್ನು ಕೇಳಿಸಿಕೊಳ್ಳುವವರಿದ್ದಾರೆ. ನಮ್ಮ ನೋವಿಗೆ ಹೆಗಲಾಗುವವರಿದ್ದಾರೆ ಎಂಬ ಸಣ್ಣ ವಿಶ್ವಾಸವೂ ಕೂಡ ಮನುಷ್ಯನ ಬದುಕಿನ ದೊಡ್ಡ ಆತ್ಮವಿಶ್ವಾಸಕ್ಕೆ ದಾರಿಮಾಡಿಕೊಡಬಲ್ಲದು./ಕುಂದಾಪ್ರ ಡಾಟ್ ಕಾಂ/

    Click Here

    Call us

    Click Here

    ಕೀಳರಿಮೆ ಹೆಚ್ಚಾದಾಗ, ಪ್ರೀತಿಯಲ್ಲಿ ಸೋತಾಗ, ಉದ್ಯೋಗದಲ್ಲಿ ಅಂದುಕೊಂಡ ಯಶಸ್ಸು ಸಿಗದಾಗ, ಕಾಯಿಲೆಗಳು ಕಂಗೆಡಿಸಿದಾಗ, ಅವಮಾನದಿಂದ ಬೇಸತ್ತಾಗ… ಹೀಗೆ ಅನೇಕ ಕಾರಣಕ್ಕೆ ಜನರು ಖಿನ್ನತೆಗೆ ಜಾರುತ್ತಾರೆ. ನಮ್ಮ ಸುತ್ತಮುತ್ತಲಲ್ಲೇ ಹಲವರು ಖಿನ್ನತೆಯಿಂದ ನರಳುತ್ತಿರುತ್ತಾರೆ. ಅವರು ನಮ್ಮವರೇ ಆಗಿದ್ದಾಗ ಅವರನ್ನು ಸಮಾಧಾನ ಪಡಿಸಲು ಮನಸ್ಸು ಚಡಪಡಿಸಿದರೂ, ಏನು ಮಾತನಾಡಬೇಕೆಂಬುದು ಹಲವರಿಗೆ ತಿಳಿಯುವುದಿಲ್ಲ. ಇಂಥ ಸಂದರ್ಭದಲ್ಲಿ ಅವರಿಗೆ ಯಾವುದೇ ಕ್ಷಣ ಬೇಕಾದರೂ ನಾವಿರುವುದಾಗಿ ಅರಿವು ಮೂಡಿಸುವುದೇ ದೊಡ್ಡ ಬಲ.

    ಖಿನ್ನತೆಯಲ್ಲಿರುವವರ ಬಳಿ ಎಂಥ ಮಾತುಗಳು ಕೆಲಸ ಮಾಡಬಹುದು ಎಂಬ ಅರಿವಿದ್ದರೆ, ಹತ್ತಿರದವರನ್ನು ಈ ವೇದನೆಯಿಂದ ಹೊರತರಲು ಸಹಾಯ ಆಗಬಹುದು. ನಿನಗೇನಾಗುತ್ತಿದೆ ಎಂದು ನನ್ನಲ್ಲಿ ಹೇಳಿಕೋ. ಅರ್ಥ ಮಾಡಿಕೊಳ್ಳುತ್ತೇನೆ. ಇದರಿಂದ ನಿನ್ನ ಮನಸ್ಸೂ ಹಗುರಾಗುತ್ತದೆ. ನಿನಗಿದರ ಬಗ್ಗೆ ಮಾತನಾಡಲು ಇಷ್ಟವಿಲ್ಲವಾದರೆ ಪರವಾಗಿಲ್ಲ. ನೀನು ಹೇಗೇ ಇದ್ದರೂ ನಿನ್ನೊಂದಿಗೆ ನಾನಿರುತ್ತೇನೆ. ಈ ಪರಿಸ್ಥಿತಿ ಸರಿಯಾಗುವುದೇ ಇಲ್ಲ ಎಂದು ಎನಿಸುತ್ತಿರಬಹುದು. ಆದರೆ ಕಾಲ ಕಳೆದಂತೆಲ್ಲ ಬಹಳಷ್ಟು ಬದಲಾಗುತ್ತದೆ. ಪ್ರತಿ ಕೆಟ್ಟ ಕಾಲಕ್ಕೂ ಒಂದು ಅಂತ್ಯ ಇರಲೇಬೇಕು. ಒಳ್ಳೆ ಕಾಲ ಬಂದೇ ಬರುತ್ತದೆ, ಕಾಯೋಣ.’

    ಕೆಲವೊಮ್ಮೆ ಬದುಕಿನಲ್ಲಿ ಹಿನ್ನಡೆಯಾಗುತ್ತದೆ. ಆದರೆ ನಾಳೆ ಎಂಬುದು ಇದ್ದೇ ಇದೆಯಲ್ಲ. ಪ್ರತಿ ನಾಳೆಯಲ್ಲೂ ಬಹಳಷ್ಟು ಅವಕಾಶಗಳಿರುತ್ತವೆ. ಆಗ ಗೆಲ್ಲಬಹುದು. ನಿನಗೆ ಬೆಂಬಲ ಬೇಕೆಂದರೆ ನಾನು ನಿನ್ನೊಂದಿಗೆ ಬರುತ್ತೇನೆ. ಬಾ ಇಬ್ಬರೂ ಹೊರ ಹೋಗಿ ಬರೋಣ.’ ನಿನಗೆ ಹೇಗೆನಿಸುತ್ತಿದೆಯೋ ಅದರಲ್ಲಿ ನಿನ್ನ ತಪ್ಪಿಲ್ಲ. ಅದಕ್ಕಾಗಿ ಯಾರೂ ನಿನ್ನನ್ನು ದೂಷಿಸುವುದಿಲ್ಲ. ಎಲ್ಲರಿಗೂ ಒಮ್ಮೊಮ್ಮೆ ಹೀಗಾಗುತ್ತದೆ. ನೀನು ಕೂಡಾ ನಿನ್ನನ್ನು ದೂಷಿಸಿಕೊಳ್ಳುವುದು, ವೃಥಾ ಪಶ್ಚಾತ್ತಾಪ ಪಟ್ಟುಕೊಳ್ಳುವುದು ಬಿಡಬೇಕು ನೀನೇನು ಒಂಟಿಯಲ್ಲ. ನನಗೆ ನೀನೆಂದರೆ ಇಷ್ಟ. ನೀನು ಮುಂಚಿನಂತಾಗಬೇಕು ‘ಏನು ಮಾಡಬೇಕೆನಿಸುತ್ತಿದೆ ಹೇಳು? ನಾನು ಜೊತೆಗೂಡುತ್ತೇನೆ. ನಿನಗೆ ಇಷ್ಟ ಬಂದಂತೆ ಮಾಡೋಣ. ‘/ಕುಂದಾಪ್ರ ಡಾಟ್ ಕಾಂ/

    ಹೀಗೆ ನಾವಾಡುವ ಸಾಮಾನ್ಯ ಪದಗಳೆ ಖಿನ್ನತೆಗೆ ಒಳಗಾದವರಲ್ಲಿ ಧೈರ್ಯ, ಸ್ಥೈರ್ಯ ತುಂಬಲಿದೆ. ನಮ್ಮೊಂದಿಗೆ ಯಾರೋ ಒಬ್ಬರು ಇದ್ದಾರೆ ಎಂಬ ಭಾವನೆ ಬಂದರೆ ಸಾಕು ಮನಸ್ಸು ದೃಢವಾಗುತ್ತದೆ. ಏಕಾತನತೆಯಿಂದ ಹೊರಬರಲು, ಪ್ರಪಂಚದ ಆಗುಹೋಗುಗಳಿಗೆ ತೆರೆದುಕೊಳ್ಳಲು ಆರಂಭಿಸುತ್ತದೆ. ಹಾಗಾಗಿಯೇ ನಮ್ಮಿಂದ ಏನು ಸಾಧ್ಯವಿಲ್ಲದಿದ್ದರೂ ಹೀಗೆ ಖಿನ್ನತೆಯಿಂದ ಇರುವ ವ್ಯಕ್ತಿಗಳಿದ್ದರೆ ಅವರಿಗಾಗಿ ಒಂದಿಷ್ಟು ಸಮಯ ಕೊಡೋಣ.

    Click here

    Click here

    Click here

    Call us

    Call us

    ಕುಂದಾಪ್ರ ಡಾಟ್ ಕಾಂ ಲೇಖನ

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಣನಾಯಕನ ರೂಪ, ಗುಣದಲ್ಲಿ ಕಲಿಯಬೇಕಾದ ಪಾಠಗಳು ಅನೇಕ

    06/09/2024

    ಭಾರತ ಬಜೆಟ್-23 ಮುನ್ನೋಟ: ಆರ್ಥಿಕ ಕುಸಿತದ ಭೀತಿಯ ನಡುವೆ ಭಾರತೀಯ ಅರ್ಥವ್ಯವಸ್ಥೆಯನ್ನು ಮೇಲೆತ್ತುವ ಸವಾಲು

    01/02/2023

    ಉದ್ಯೋಗ ಸಂದರ್ಶನದ ತಯಾರಿಗೆ ಒಂದಿಷ್ಟು ಟಿಪ್ಸ್

    01/01/2023

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d