Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪೋಟೋಗ್ರಾಫರ್ಸ್ ಅಸೋಷಿಯೇಷನ್ ಕ್ರೀಡಾಕೂಟ
    ಊರ್ಮನೆ ಸಮಾಚಾರ

    ಪೋಟೋಗ್ರಾಫರ್ಸ್ ಅಸೋಷಿಯೇಷನ್ ಕ್ರೀಡಾಕೂಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಸಂಘನೆಗಳು ಸಮಾಜಮುಖಿ ಕೈಂಕರ್ಯಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಮಾಜಕ್ಕೆ ನೆರಳಾಗಿ ಕಾರ್ಯಹಿಸಬೇಕು, ಆಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಮನುಷ್ಯನ ಜೀವಿತದ ಅವಧಿಯಲ್ಲಿ ಅರ್ಪಣಾ ಮನೋಭಾವದ ಸೇವೆ ಅಗತ್ಯವಾಗಿದ್ದು, ಆ ಮೂಲಕ ಸಾರ್ಥಕತೆ ಕಂಡುಕೊಳ್ಳಬಹುದು ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಕಂಬದಕೋಣೆ ಕಂಬಳಗದ್ದೆಯಲ್ಲಿ ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಷಿಯನ್ ಕುಂದಾಪುರ ವಲಯದ ಕೆಸರುಗದ್ದೆ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ತಾಲೂಕಿನಲ್ಲಿ ಪೋಟೋಗ್ರಾಫರ್ಸ್ ಸಂಘಟನೆಯು ಅತ್ಯಂತ ಬಲಿಷ್ಠವಾಗಿದ್ದು, ಹತ್ತಾರು ವರ್ಷಗಳೀಚಿದ ಹಲವು ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ. ಫೋಟೋಗ್ರಾಫರ್‌ಗಳು ತಮ್ಮ ಒತ್ತಡದ ಕೆಲಸದ ನಡುವೆಯು, ಸಮಾಜದ ಅಭಿವೃದ್ಧಿಯ ಬಗ್ಗೆ ಚಿಂತನೆ ನಡೆಸಿರುವುದು ಸಮಾಜದ ಮೇಲಿರುವ ಅವರಿಗಿರುವ ತುಡಿತ ನಿಜವಾಗಿಯೂ ಶ್ಲಾಘನೀಯವಾಗಿದೆ ಎಂದರು.

    ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಷಿಯನ್ ಕುಂದಾಪುರ ವಲಯ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿ.ಪಂ. ಸದಸ್ಯ ಬಾಬು ಶೆಟ್ಟಿ, ತಾ.ಪಂ. ಸದಸ್ಯ ರಾಧಾ ಪೂಜಾರಿ, ಕಂಬದಕೋಣೆ ಗ್ರಾ.ಪಂ. ಅಧ್ಯಕ್ಷ ರಾಜೇಶ್, ಕಂಬದಕೋಣೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜು ಪೂಜಾರಿ, ಸೌತ್ ಕೆನರಾ ಫೋಟೀಗ್ರಾಫರ‍್ಸ್ ಅಸೋಷಿಯನ್ ಕುಂದಾಪುರ ವಲಯ ಗೌರವಾಧ್ಯಕ್ಷ ರಾಬರ್ಟ್ ಡಿಸೋಜಾ, ಸೌತ್ ಕೆನರಾ ಫೋಟೀಗ್ರಾಫರ‍್ಸ್ ಅಸೋಷಿಯನ್ ಕ್ರೀಡಾ ಕಾರ್ಯದರ್ಶಿ ವಿಲ್ಸ್‌ನ್, ಉದ್ಯಮಿಗಳಾದ ಬಿ.ಎಸ್. ಸುರೇಶ ಶೆಟ್ಟಿ, ಉದಯ ಕುಮಾರ ಶೆಟ್ಟಿ ಹಳಗೇರಿ, ಎಚ್. ವಿಜಯ ಶೆಟ್ಟಿ, ವಿಜಯ ಶೆಟ್ಟಿ ಕಂಬದಕೋಣೆ ಉಪಸ್ಥಿತರಿದ್ದರು.

    ಛಾಯಾಗ್ರಾಹಕ ಅಶೋಕ್ ಕುಮಾರ ಶೆಟ್ಟಿ ಸ್ವಾಗತಿಸಿದರು, ದಿವಾಕರ ಶೆಟ್ಟಿ ವಂದಿಸಿ, ವಿಶ್ವನಾಥ ಶೆಟ್ಟಿ ನಿರೂಪಿಸಿದರು. ಕ್ರೀಡಾಕೂಟದ ಮೊದಲು ಛಾಯಾಗ್ರಾಹಕರು ತ್ರಾಸಿಯಿಂದ ಬೈಂದೂರಿನ ತನಕ ಹಾಗೂ ಬೈಂದೂರಿನಿಂದ ಕಂಬದಕೋಣೆಯ ತನಕ ವಾಹನ ಜಾಥ ನಡೆಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    19/12/2025

    ವೃದ್ಧೆ ನಾಪತ್ತೆ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.