Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತ್ರಾಸಿ ಗ್ರಾಮ ಮಟ್ಟದ ಟಾಸ್ಕ್‌ಪೋರ್ಸ್ ಸಮಿತಿ ಸಭೆ
    ಊರ್ಮನೆ ಸಮಾಚಾರ

    ತ್ರಾಸಿ ಗ್ರಾಮ ಮಟ್ಟದ ಟಾಸ್ಕ್‌ಪೋರ್ಸ್ ಸಮಿತಿ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ಗ್ರಾಮ ಅಭಿವೃದ್ಧಿಗೊಂಡರೆ ದೇಶವು ಅಭಿವೃದ್ಧಿಗೊಂಡಂತೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಕರೋನಾ ವೈರಸ್ ಜನರ ಬದುಕನ್ನು ನಾಶ ಮಾಡಿದೆ ಅಲ್ಲದೆ ಹಳ್ಳಿ ಹಳ್ಳಿಗೂ ಕಾಲಿಟ್ಟು ಗ್ರಾಮೀಣ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ.

    Click Here

    Call us

    Click Here

    ಕರೋನಾ ನಿರ್ವಹಣೆಯಲ್ಲಿ ಗ್ರಾಮ ಪಂಚಾಯತಿಗಳ ಪಾತ್ರ ಮಹತ್ವದಾಗಿದೆ. ಕೋವಿಡ್ ನಿರ್ವಹಣೆಯಲ್ಲಿ ಗ್ರಾಮ ಪಂಚಾಯತಿಗಳು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವೈರಸ್ ಹರಡದಂತೆ ತಡೆಯುವಲ್ಲಿ ಹಾಗೂ ಜನರಲ್ಲಿ ಆತ್ಮಸ್ಥೈರ್ಯ ತುಂಬುವಲ್ಲಿ ಯಶಸ್ಸು ಸಾಧಿಸುತ್ತಿದೆ.

    ಗ್ರಾಮ ಮಟ್ಟದ ಟಾಸ್ಕ್‌ಪೋರ್ಸ್ ಸಮಿತಿ ಮನೆ ಮನೆ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಕರೋನಾ ವೈರಸ್ ಬಗ್ಗೆ ಗ್ರಾಮದ ಜನರಲ್ಲಿ ಅರಿವು ಮೂಡಿಸುತ್ತಿದೆ. ಕೋವಿಡ್-೧೯ ವೈರಸ್ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ಕೋವಿಡ್ ಲಸಿಕೆ ಮಹತ್ವದ ಬಗ್ಗೆ ತಿಳಿಸಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲರೂ ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹಾಗೂ ಅನಗತ್ಯವಾಗಿ ಯಾರೂ ಹೊರಗಡೆ ತಿರುಗಾಡದಂತೆ ಮನವಿ ಮಾಡಿಕೊಳ್ಳಲಾಗುತ್ತಿದ್ದುಜನರ ಸುರಕ್ಷತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿರುವ ಟಾಸ್ಕ್‌ಪೋರ್ಸ್ ಸಮಿತಿ ಕೋವಿಡ್ ಕಟ್ಟಿ ಹಾಕುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ.

    ಇನ್ನೊಂದೆಡೆ ಕೋವಿಡ್-19 ಸಂದರ್ಭದಲ್ಲಿಯೂ ಕೂಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜನರಿಗೆ ನರೇಗಾ ಯೋಜನೆಯಡಿ ಕೆರೆ ಹೂಳೆತ್ತಿ ಅಭಿವೃದ್ಧಿಪಡಿಸುವ ಕಾರ್ಯಕ್ರಮಗಳನ್ನು ಸರಕಾರದ ಮಾರ್ಗಸೂಚಿಯಂತೆ ಹಮ್ಮಿಕೊಂಡು ಜನರಿಗೆ ಉತ್ತೇಜನ ಹಾಗೂ ಆತ್ಮಸ್ಥೈರ್ಯ ನೀಡುವುದರ ಮೂಲಕ ಗ್ರಾಮ ಪಂಚಾಯತ್‌ಗಳು ಯಶಸ್ಸು ಸಾಧಿಸುತ್ತಿದೆ.

    Click here

    Click here

    Click here

    Click Here

    Call us

    Call us

    ಲಾಕ್‌ಡೌನ್ ನಿಯಮಗಳನ್ನು ಯಾರೂ ಉಲ್ಲಂಘನೆ ಮಾಡಬಾರದು. ಮಾಸ್ಕ್ ಕಡ್ಡಾಯವಾಗಿ ಬಳಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಭಯಕ್ಕಿಂತ ಜಾಗೃತಿ ಮುಖ್ಯ. ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ಕೋವಿಡ್ ನಿಯಂತ್ರಣ ಸಂಬಂಧ ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ – ಶೋಭಾ ಎಸ್., ಪಿಡಿಒ, ಗ್ರಾಮ ಪಂಚಾಯತ್ ತ್ರಾಸಿ.

    ಕರೋನಾ ಎರಡನೇ ಅಲೆ ಅಪಾಯಕಾರಿಯಾಗಿದ್ದು ಜನರು ಜಾಗೃತೆ ವಹಿಸಬೇಕು. ಗ್ರಾಪಂ ಮುಖಾಂತರ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕೋವಿಡ್ ನಿಯಮ ಪಾಲಿಸುವುದು ಜನರ ಕರ್ತವ್ಯವಾಗಿದ್ದು, ಕರೋನಾ ವೈರಸ್ ಹರಡದಂತೆ ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಸಹಕಾರ ನೀಡಬೇಕು. ಅನಗತ್ಯವಾಗಿ ಜನರು ಹೊರಗಡೆ ತಿರುಗಾಡಬಾರದು – ಶ್ರೀನಿವಾಸ ಖಾರ್ವಿ, ಅಧ್ಯಕ್ಷರು, ಗ್ರಾಮ ಪಂಚಾಯತ್, ಗಂಗೊಳ್ಳಿ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    seventeen + three =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.