ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೇರಳದ ಬಿಜೆಪಿ -ಅರ್ಎಸ್ಎಸ್ ರಾಜ್ಯ ನಾಯಕರು 3.5 ಕೋಟಿ ಹವಾಲಾದಲ್ಲಿ ಭಾಗಿಯಾಗಿದ್ದು, ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕೋಮು ಹಿಂಸಾಚಾರವನ್ನು ಪ್ರಚೋದಿಸಲು ಮತ್ತು ವಿಧ್ವಂಸಕ ಕೃತ್ಯ ನಡೆಸಲು ಬಳಸಲಾಗಿತ್ತು. ಇದರ ಬಗ್ಗೆ ಈಡಿಯು ತನಿಖೆ ನಡೆಸಬೇಕು, ಈಡಿ ಆಯ್ದ ಕೆಲವೊಂದು ಕೇಂದ್ರ ಸರ್ಕಾರದ ವಿರುದ್ಧ ಧ್ವನಿಯೆತ್ತುವವರನ್ನು ಮಾತ್ರ ಭೇಟೆಯಾಡುತ್ತಿದೆ. ಇಂತಹ ಗಂಭೀರ ಪ್ರಕರಕರಣಗಳನ್ನು ಈಡಿಯು ಮರೆಮಾಚುತ್ತಿದೆ, ಈ ವಿಚಾರವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕುಂದಾಪುರ ಜಿಲ್ಲಾ ಸಮಿತಿ ವತಿಯಿಂದ ಬಿಜೆಪಿ ಹವಾಲಾ ಕಾಣಿಸಿಕೊಂಡಾಗ ಇಡಿ ಕಣ್ಮರೆಯಾಯಿತು ಎಂಬ ಸಾಮೂಹಿಕ ಮೇಲಿಂಗ್ ಅಭಿಯಾನ ನಡೆಸಿತು
ಸಂಬಂಧಪಟ್ಟ ಇಲಾಖೆಗಳಿಗೆ, ಅಧಿಕಾರಿಗಳಿಗೆ ಇದರ ಬಗ್ಗೆ ಸೂಕ್ತ ತನಿಖೆ ನಡೆಸಲು ಈ ಮೇಲ್ ಮುಖಾಂತರ ಒತ್ತಾಯಿಸಲಾಯಿತು. ಜಿಲ್ಲೆಯಿಂದ ಸುಮಾರು ನೂರಕ್ಕೂ ಅಧಿಕ ಇಮೇಲ್ ಗಳನ್ನು ವಿದ್ಯಾರ್ಥಿಗಳು, ನಾಗರಿಕರು ಕಳುಹಿಸಿದರು. ಕ್ಯಾಂಪಸ್ ಫ್ರಂಟ್ ಕುಂದಾಪುರ ಜಿಲ್ಲಾ ಸಮಿತಿ ಸದಸ್ಯರಾದ ಸಹದ್ ಬಸ್ರೂರ್ ,ಮುಜಾಹಿದ್ ,ಸಿಂಹಾನ ,ಶಾಹಿಘ್ ಹಾಗೂ ವಿಧ್ಯಾರ್ಥಿಗಳು ಭಾಗವಹಿಸಿದ್ದರು.