Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಳೆ ರೋಗದಿಂದ ಅಡಿಕೆ ಮರಗಳ ರಕ್ಷಣೆ ಕುರಿತು ಮಾಹಿತಿ
    ಉಡುಪಿ ಜಿಲ್ಲೆ

    ಕೊಳೆ ರೋಗದಿಂದ ಅಡಿಕೆ ಮರಗಳ ರಕ್ಷಣೆ ಕುರಿತು ಮಾಹಿತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಅಡಿಕೆ ಬೆಳೆ ಮೇಲೆ ಪರಿಣಾಮ ಬೀರಲಿದೆ. ಮೋಡ ಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಪೋಷಕಾಂಶಗಳು ಕೊಚ್ಚಿ ಹೋಗುವುದು ಮತ್ತು ಸೂರ್ಯನ ಬೆಳಕಿನ ಕೊರತೆ ಮುಂತಾದ ಹಲವು ಕಾರಣಗಳಿಂದ ಅಡಿಕೆ ಬೆಳೆಯಲ್ಲಿ ಕೊಳೆರೋಗ ಉಲ್ಬಣಗೊಳ್ಳುವ ಸಾಧ್ಯತೆ ಇರುವುದರಿಂದ ಆಗಬಹುದಾದ ಹಾನಿಯ ಪ್ರಮಾಣ ಕಡಿಮೆ ಮಾಡಲು ಮತ್ತು ಸಂರಕ್ಷಣೆ ದೃಷ್ಟಿಯಿಂದ ಈ ಕೆಳಕಂಡ ಕೆಲವು ಅವಶ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ತೋಟಗಾರಿಕೆ ಇಲಾಖೆಯ ಪ್ರಕಟಣೆ ತಿಳಿಸಿದೆ.

    Click Here

    Call us

    Click Here

    ಕೆಳಗೆ ಬಿದ್ದಿರುವ ರೋಗಪಿಡಿತ ಕಾಯಿಗಳನ್ನು ಹಾಗೂ ಒಣಗಿದ ಹಿಂಗಾರಗಳನ್ನು ತೆಗೆದು ಸುಡಬೇಕು ಅಥವಾ ತೋಟದಿಂದ ಹೊರಗೆ ಗುಂಡಿಗಳಲ್ಲಿ ಹಾಕಿ ಮಣ್ಣಿನಿಂದ ಮುಚ್ಚಬೇಕು. ತೋಟಗಳಲ್ಲಿ ಆದಷ್ಟು ಸ್ವಚ್ಛತೆಯನ್ನು ಕಾಪಾಡಬೇಕು. ತೋಟಗಳಲ್ಲಿ ನೀರು ನಿಲ್ಲದಂತೆ ಬಸಿಲುಗಾಲುವೆಗಳನ್ನು ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡಬೇಕು. ತೋಟದಲ್ಲಿ ಅಲ್ಲಲ್ಲಿ ಅಡಿಕೆ ಸಿಪ್ಪೆ, ಭತ್ತದ ಹೊಟ್ಟು ಹಾಗೂ ಇತರೆ ತ್ಯಾಜ್ಯ ವಸ್ತುಗಳನ್ನು ಬಳಸಿ ಹೊಗೆ ಹಾಕಬೇಕು. ತೋಟದ ಸುತ್ತ ಇರುವ ಕಾಡುಮರಗಳ ಮತ್ತು ಅಂತರ ಬೆಳೆಗಳ ಹೆಚ್ಚುವರಿ ರೆಂಬೆ ಕೊಂಬೆಗಳನ್ನು ಕತ್ತರಿಸಿ ತೆಗೆದು ಗಾಳಿಯಾಡುವಂತೆ ಮಾಡಬೇಕು. ಕೊಳೆರೋಗ ನಿಯಂತ್ರಣಕ್ಕೆ ಈಗಾಗಲೇ ಔಷಧ ಸಿಂಪರಣೆ ಮಾಡಿ 30-40 ದಿನಗಳಾಗಿದಲ್ಲಿ ಮುಂಜಾಗ್ರತೆಯಾಗಿ ಮತ್ತೊಮ್ಮೆ ಶೇಕಡಾ 1 ರ ಬೋರ್ಡೋ ದ್ರಾವಣವನ್ನು ಸಿಂಪಡಿಸಬೇಕು.

    ಈಗಾಗಲೇ ಕೊಳೆರೋಗ ಬಂದಿರುವ ತೋಟಗಳಲ್ಲಿ ಕೊಳೆರೋಗ ಪೀಡಿತ ಅಡಿಕೆ ಮರಗಳು ಸುಳಿಕೊಳೆ/ಚಂಡೆ ಕೊಳೆ ರೋಗಕ್ಕೆ ತುತ್ತಾಗುವ ಸಾಧ್ಯತೆಗಳಿದ್ದು, ಇದನ್ನು ತಡೆಯಲು ಕೊಳೆರೋಗ ಪೀಡಿತ ಅಡಿಕೆ ಮರದ ಗೊನೆಗಳಿಗೆ ಮತ್ತು ಕೆಳ ಭಾಗದ ಮೂರ್ನಾಲ್ಕು ಹೆಡೆಗಳಿಗೆ ಮೆಟಲಾಕ್ಸಿಲ್ ಎಂ.ಜಡ್ 2 ಗ್ರಾಂ. ಅಥವಾ ಶೇ.1 ರ ಬೋರ್ಡೋ ದ್ರಾವಣ ಅಥವಾ 3 ಗ್ರಾ. ತಾಮ್ರದ ಆಕ್ಸಿಕ್ಲೋರೈಡ್ ಅನ್ನು ಪ್ರತಿ ಲೀಟರ್ ನೀರಿಗೆ ಬೆರೆಸಿ ಅಡಿಕೆ ಗೊನೆಗಳು, ಎಲೆತೊಟ್ಟು ಮತ್ತು ಸುಳಿ ಭಾಗಗಳಿಗೆ ಚೆನ್ನಾಗಿ ನೆನೆಯುವಂತೆ ಮಳೆ ಬಿಡುವಿದ್ದಾಗ ಸಿಂಪಡಿಸಬೇಕು.

    ಮೇಲಿನ ಕ್ರಮಗಳನ್ನು ಅನುಸರಿಸಿದ್ದಲ್ಲಿ ಅಡಿಕೆ ಮರಗಳು ಕೊಳೆರೋಗ/ಸುಳಿ ಕೊಳೆ ರೋಗದಿಂದ ಸಾಯುವುದನ್ನು ತಪ್ಪಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ, ದೂ.ಸಂಖ್ಯೆ : 0820-2522837 ಅನ್ನು ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    18/12/2025

    ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    18/12/2025

    ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.