Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಝೀಕಾ ವೈರಸ್ ಬಗ್ಗೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಜಿ. ಜಗದೀಶ್
    Uncategorized

    ಝೀಕಾ ವೈರಸ್ ಬಗ್ಗೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಜಿ. ಜಗದೀಶ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕೋರೊನಾ ನಡುವೆಯೇ ಇದೀಗ ಝೀಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಕೇರಳದಲ್ಲಿ ಝೀಕಾ ವೈರಸ್ ಖಚಿತ ಪ್ರಕರಣಗಳು ವರದಿಯಾಗಿದ್ದು, ಈ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಾದ ಉಡುಪಿ ಜಿಲ್ಲೆಯಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    Click Here

    Call us

    Click Here

    ಸಾರ್ವಜನಿಕರು ಯಾವುದೇ ಜ್ವರವಿರಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವುದರೊಂದಿಗೆ, ಝೀಕಾ ವೈರಸ್ ಹರಡುವ ವಿಧಾನ, ರೋಗಲಕ್ಷಣಗಳ ಬಗ್ಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದ್ದು ಹಾಗೂ ಇದನ್ನು ತಡೆಯುವ ನಿಟ್ಟನಲ್ಲಿ ಈ ಕೆಳಗಿನ ಎಲ್ಲಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ತಿಳಿಸಿದ್ದಾರೆ.

    ಹರಡುವ ವಿಧಾನ:
    • ಡೆಂಗ್ಯೂ/ಚಿಕುನ್ಗುನ್ಯಾ,ವೆಸ್ಟ ನೈಲ್ ಹಾಗೂ ಹಳದಿ ಜ್ವರವನ್ನು ಹರಡುವಂತಹ ಸೊಳ್ಳೆಗಳಾದ ಈಡೀಸ್ ಜಾತಿಯ ಹೆಣ್ಣು ಸೊಳ್ಳೆಗಳು ಕಚ್ಚುವುದರಿಂದ ಝೀಕಾ ವೈರಸ್ ಖಾಯಿಲೆಯು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ.
    • ಝೀಕಾ ವೈರಸ್ ಕೇವಲ ಸೊಳ್ಳೆಗಳ ಕಡಿತದಿಂದ ಹರಡುವುದಲ್ಲದೇ ರಕ್ತದ ವರ್ಗಾವಣೆ, ಅಸುರಕ್ಷಿತ ಲೈಂಗಿಕತೆ ಮುಂತಾದ ದೇಹದ ದ್ರವಗಳ ವಿನಿಮಯದ ಮೂಲಕವೂ ಹರಡುತ್ತದೆ.
    • ಸದ್ಯ ಮಳೆಗಾಲ ಈ ವೈರಸ್ ಹರಡಲು ಅನುಕೂಲವಾದ ವಾತಾವರಣ ಸೃಷ್ಟಿಯಾಗಿದೆ. ಮಳೆಗಾಲದಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳ ಸಾಂದ್ರತೆ ಜಾಸ್ತಿ ಇರುತ್ತದೆ.ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತವೆ.

    ರೋಗ ಲಕ್ಷಣಗಳು:
    ತೀವ್ರತರವಾದ ಜ್ವರ, ಮೈ-ಕೈ ನೋವು, ಕೀಲುಗಳಲ್ಲಿ ನೋವು, ದೇಹದ ಮೇಲೆ ಕೆಂಪು ರಕ್ತ ಮಿಶ್ರಿತ ಗುಳ್ಳೆಗಳು ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣವಾಗಿದೆ. ರಕ್ತ ಹಾಗೂ ಮೂತ್ರವನ್ನು ಪರೀಕ್ಷಿಸಿದಾಗ ಈ ರೋಗದ ಸೋಂಕು ಇರುವುದು ಕಂಡುಬುತ್ತದೆ.
    ಸಂಭವಿಸಬಹುದಾದಂತಹ ಅಪಾಯ:
    • ಗರ್ಭಿಣಿಯರು ಝೀಕಾ ವೈರಸ್ ಸೋಂಕಿಗೆ ಒಳಗಾಗಿದ್ದರೆ ಗರ್ಭಪಾತವಾಗುವ ಸಾಧ್ಯತೆ ಇದೆ ಹಾಗೂ ಹುಟ್ಟಲಿರುವ ಮಗುವಿಗೂ ಕೂಡ ಸೋಂಕು ರವಾನೆಯಾಗಬಹುದಾಗಿದೆ.
    • ಹುಟ್ಟುವ ಮಕ್ಕಳಲ್ಲಿ ಅಂಗಾಗ ನ್ಯೂನತೆ (ಮೈಕ್ರೋಸೆಫಲಿ -ಅಂದರೆ ಮಗುವಿನ ಮೆದುಳಿನ ಬೆಳವಣಿಗೆ ಕುಂಠಿತವಾಗುವುದು) ಕಾಣಿಸಿಕೊಳ್ಳುವ ಸಾಧ್ಯತೆಯೂ ಹೆಚ್ಚಾಗಿದೆ.
    • ವಯಸ್ಕರಲ್ಲಿ ತೀವ್ರತರವಾದ ನರಗಳ ದೌರ್ಬಲ್ಯ (Gillian- barre syndrome) ವಿರಳವಾಗಿ ಕಾಣಿಸಿಕೊಳ್ಳಬಹುದು.

    ರೋಗ ಲಕ್ಷಣಗಳು ಕಂಡು ಬಂದರೆ ಏನು ಮಾಡಬೇಕು:
    • ಇದುವರೆಗೆ ಈ ಖಾಯಿಲೆಗೆ ಯಾವುದೇ ಲಸಿಕೆ ಕಂಡುಹಿಡಿದಿಲ್ಲ.
    • ಸಾಕಷ್ಟು ದ್ರವ ಆಹಾರಗಳನ್ನು ಸೇವಿಸುವುದರ ಮೂಲಕ ನಿರ್ಜಲೀಕರಣವನ್ನು ತಡೆಯಬೇಕು.
    • ಸಾಕಷ್ಟು ವಿಶ್ರಾಂತಿಯನ್ನು ಪಡೆಯಬೇಕು.
    • ಯಾವುದೇ ಜ್ವರವಿರಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವುದು.

    Click here

    Click here

    Click here

    Click Here

    Call us

    Call us

    ಸೊಳ್ಳೆಗಳ ಉತ್ಪತ್ತಿ ತಾಣಗಳು:
    ಈ ಸೊಳ್ಳೆಗಳು ಹಗಲು ಹೊತ್ತು ಕಚ್ಚುತ್ತದೆ. ಡ್ರಮ್, ಬ್ಯಾರೆಲ್, ನೀರಿನ ತೊಟ್ಟಿ, ಏರ್ ಕೂಲರ್, ಅನುಪಯುಕ್ತ ಟೈರ್, ಒಡೆದ ಮಡಕೆ, ತೆಂಗಿನ ಚಿಪ್ಪು, ತಾರಸಿ ಮನೆಗಳ ಮೇಲ್ಚಾವಣಿ, ಘನತ್ಯಾಜ್ಯ ವಸ್ತುಗಳು, ಅಡಿಕೆ ತೋಟಗಳಲ್ಲಿ ಬಿದ್ದಿರುವ ಹಾಳೆಗಳು, ರಬ್ಬರ ತೋಟಗಳಲ್ಲಿ ರಬ್ಬರ ಸಂಗ್ರಹಿಸುವ ಕಫ್, ಹೂವಿನ ಕುಂಡ, ಇತ್ಯಾದಿಗಳಲ್ಲಿ ನೀರು ನಿಂತು ಈಡಿಸ್ ಸೊಳ್ಳೆ ಉತ್ಪತ್ತಿಯಾಗುತ್ತದೆ.

    ಸಾರ್ವಜನಿಕರ ಪಾತ್ರ:
    • ಮನೆ ಪರಿಸರ, ಅಂಗಡಿ ಮುಂಗಟ್ಟುಗಳಲ್ಲಿ ಎಲ್ಲಿಯೂ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು.
    • ಸೊಳ್ಳೆಗಳು ಪ್ರವೇಶಿಸದಂತೆ ಮನೆಯ ಕಿಟಕಿ ಬಾಗಿಲುಗಳಿಗೆ ಜಾಲರಿ ಅಳವಡಿಸುವುದು.
    • ಹೊರಾಂಗಣದಲ್ಲಿ ಮಲಗುವುದನ್ನು ಸಾಧ್ಯವಾದಷ್ಟು ತಪ್ಪಿಸುವುದು ಹಾಗೂ ವಿಶ್ರಾಂತಿ ಪಡೆಯುವಾಗ ಮತ್ತು ಮಲಗುವಾಗ ವಿಶೇಷವಾಗಿ ಗರ್ಭಿಣಿಯರು/ವಯಸ್ಕರು ಮತ್ತು ಮಕ್ಕಳು ಕೀಟನಾಶಕ ಲೇಪಿತ ಸೊಳ್ಳೆ ಪರದೆಗಳನ್ನು ಉಪಯೋಗಿಸುವುದು.
    • ನೀರಿನ ತೊಟ್ಟಿ/ಟ್ಯಾಂಕ್ನ್ನು ಕನಿಷ್ಟ ಪಕ್ಷ ವಾರಕ್ಕೊಮ್ಮೆಯಾದರೂ ಪೂರ್ತಿ ಖಾಲಿ ಮಾಡಿ ತಿಕ್ಕಿ ತೀಡಿ ತೊಳೆಯುವುದು.
    • ಬಯಲಿನಲ್ಲಿ ತ್ಯಾಜ್ಯ ವಸ್ತುಗಳಾದ ಟೈರ್, ಎಳೆನೀರಿನಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರವಹಿಸಿವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು.
    • ಸಾಧ್ಯವಾದಷ್ಟು ಮೈ ಮುಚ್ಚುವಂತೆ ಬಟ್ಟೆಯನ್ನು ಧರಿಸುವುದು.
    • ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು. ಸೊಳ್ಳೆ ಕಚ್ಚದಂತೆ ಎಲ್ಲಾ ರೀತಿಯ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    seventeen − five =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.