ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ರೋಟರಿ ರೈತ ಬಂಧು ಕಾರ್ಯಕ್ರಮದ ಅಡಿಯಲ್ಲಿ ಗಂಗೊಳ್ಳಿಯ ಕೃಷಿಕ ಗಣಪತಿ ಶೇರುಗಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಗಣಪತಿ ಶೇರುಗಾರ ಅವರ ಗದ್ದೆಯಲ್ಲಿ ನಾಟಿಯ ಸಮಯದಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ನ ಅಧ್ಯಕ್ಷ ರಾಜೇಶ ಎಂ.ಜಿ. ಅವರು ಗಣಪತಿ ಶೇರುಗಾರ್ ಅವರನ್ನು ಗೌರವಿಸಿದರು. ಕಾರ್ಯದರ್ಶಿ ನಾರಾಯಣ ಇ. ನಾಯ್ಕ, ವಲಯ ಸೇನಾನಿ ಕೆ. ರಾಮನಾಥ ನಾಯಕ, ಬಿ. ಲಕ್ಷ್ಮೀಕಾಂತ ಮಡಿವಾಳ, ಜಯಂತಿ ಶೇರುಗಾರ ಹಾಗೂ ಊರಿನ ರೈತರು ಉಪಸ್ಥಿತರಿದ್ದರು.