Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖ್ಯಾತ ಕವಿ ಕೆ.ವಿ. ತಿರುಮಲೇಶ್‌ರ ಮಲೆಯಾಳಕ್ಕೆ ಅನುವಾದಿತ ಆಯ್ದ ಕವಿತೆಗಳ ಕೃತಿ ಬಿಡುಗಡೆ
    ಊರ್ಮನೆ ಸಮಾಚಾರ

    ಖ್ಯಾತ ಕವಿ ಕೆ.ವಿ. ತಿರುಮಲೇಶ್‌ರ ಮಲೆಯಾಳಕ್ಕೆ ಅನುವಾದಿತ ಆಯ್ದ ಕವಿತೆಗಳ ಕೃತಿ ಬಿಡುಗಡೆ

    Updated:19/07/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಮಲೆಯಾಳದ ಮಹಾಕವಿ ಚಙ್ಙಪ್ಪುಳ ಕೃಷ್ಣ ಪಿಳ್ಳೆ ಅವರು ಹೇಳಿದಂತೆ ಕಾವ್ಯವು ಒಬ್ಬ ನರ್ತಕಿ ಇದ್ದಂತೆ. ನರ್ತಕಿ ತನಗೆ ಹೇಳಬೇಕಾದ ವಿಚಾರಗಳನ್ನು ಸನ್ನೆ – ಸಂಕೇತಗಳ ಮೂಲಕವೇ ಸೂಚಿಸುತ್ತಾಳೆ. ಚಙ್ಙಪ್ಪುಳ, ವಳ್ಳತ್ತೋಳ್, ಉಳ್ಳೂರ್ ಮೊದಲಾದ ಮಹಾಕವಿಗಳು ಮಲೆಯಾಳ ಕಾವ್ಯದ ತೋರುಗಂಬಗಳಾಗಿ ಉತ್ಕೃಷ್ಟ ಕಾವ್ಯ ರಚನೆ ಮಾಡಿದರು. ವೇದ-ಉಪನಿಷತ್ತುಗಳು, ರಾಮಾಯಣ, ಮಹಾಭಾರತ, ಮೊದಲಾದ ಮಹಾಕಾವ್ಯಗಳು, ಭಗವದ್ಗೀತೆಯಂಥ ಅಮೂಲ್ಯ ಗ್ರಂಥ, ಕಾಳಿದಾಸ-ಭಾಸರಂಥ ಮಹಾಕವಿಗಳು ಸಾಹಿತ್ಯವನ್ನು ಶ್ರೀಮಂತವಾಗಿಸಿದಂತಹ ನಾಡು ನಮ್ಮದು. ಅವರ ಆದರ್ಶದಲ್ಲೇ ಮಲೆಯಾಳ ಕಾವ್ಯವು ರೂಪ ಪಡೆಯಿತು. ಅಂಥ ಸಾಹಿತ್ಯಕ್ಕೆ ಈಗ ಕೆ.ವಿ.ತಿರುಮಲೇಶ್ ಅವರ ಕಾವ್ಯವೂ ಅನುವಾದದ ಮೂಲಕ ಸೇರ್ಪಡೆಗೊಳ್ಳುತ್ತಿರುವುದು ತುಂಬಾ ಸಂತಸ ಪಡಬೇಕಾದ ಸಂಗತಿ ‘ಎಂದು ಮಣಿಪಾಲ ಕೆ.ಎಂ.ಸಿ.ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ.ಜಯರಾಜ್ ಹೇಳಿದರು.

    Click Here

    Call us

    Click Here

    ಅವರು ಎಸ್.ಎಂ.ಎಸ್.ಕಾಲೇಜಿನ ಕಿರು ಸಭಾಂಗಣದಲ್ಲಿ ಡಾ.ಪಾರ್ವತಿ ಜಿ.ಐತಾಳ್ ಮಲೆಯಾಳಕ್ಕೆ ಅನುವಾದಿಸಿದ ‘ಕೆ.ವಿ. ತಿರುಮಲೇಶಿಂದೆ ತೆರಞ್ಣೆಡುತ್ತ ಕವಿತಗಳ್'( ಕೆ.ವಿ.ತಿರುಮಲೇಶರ ಆಯ್ದ ಕವಿತೆಗಳು) ಕೃತಿಯ ಅನಾವರಣಕ್ಕಾಗಿ ಏರ್ಪಡಿಸಿದ ಸಮಾರಂಭದಲ್ಲಿ ಮಾತನಾಡಿದರು.

    ಕಾಲೇಜಿನ ಪ್ರಾಂಶುಪಾಲರಾದ ಗಣಪತಿ ಭಟ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಡಾ. ಪಾರ್ವತಿ ಜಿ. ಐತಾಳ್ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಪ್ರೊ.ಬಾಬುರಾಜ್ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿ, ಸಹ-ಅನುವಾದಕ ಡಾ.ಟಿ.ಕೆ.ರವೀಂದ್ರನ್ ಅವರ ಅನುಪಸ್ಥಿತಿಯ ಕಾರಣದಿಂದ ಅವರು ಕೃತಿಯ ಕುರಿತು ಬರೆದ ಪ್ರಬಂಧವನ್ನು ಓದಿ ಹೇಳಿದರು. ಮುಖಚಿತ್ರ ಕಲಾವಿದರಾದ ಡಾ.ಹರ್ಷಿತ್ ಕ್ರಮಧಾರಿಯವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಜೆಸ್ಸಿ ಎಲಿಝಬೆತ್ ನಿರೂಪಿಸಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಐಎಂಜೆ ಸಂಸ್ಥೆಗಳಲ್ಲಿ ‘ಭಾರತದ ವೈಜ್ಞಾನಿಕ ಪರಂಪರೆ’ ಕುರಿತು ವಿಶೇಷ ಉಪನ್ಯಾಸ

    10/07/2026

    ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ

    10/07/2026

    ಸಾಧನೆಯ ಹಾದಿಯಲ್ಲಿ ಸಾಧಕರ ಬದುಕು ನಮಗೆ ಮಾದರಿಯಾಗಲಿ: ಅನಂತ ಪದ್ಮನಾಭ ಭಟ್

    10/07/2026
    Leave A Reply Cancel Reply

    five × three =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಐಎಂಜೆ ಸಂಸ್ಥೆಗಳಲ್ಲಿ ‘ಭಾರತದ ವೈಜ್ಞಾನಿಕ ಪರಂಪರೆ’ ಕುರಿತು ವಿಶೇಷ ಉಪನ್ಯಾಸ
    • ಲಯನ್ಸ್ ಕ್ಲಬ್ ಬನ್ನಾಡಿ ವಡ್ಡರ್ಸೆ ವತಿಯಿಂದ ವೈದ್ಯರ ದಿನಾಚರಣೆ ಆಚರಣೆ
    • ಸಾಧನೆಯ ಹಾದಿಯಲ್ಲಿ ಸಾಧಕರ ಬದುಕು ನಮಗೆ ಮಾದರಿಯಾಗಲಿ: ಅನಂತ ಪದ್ಮನಾಭ ಭಟ್
    • ಕುಂದಾಪುರ ತಹಶೀಲ್ದಾರರಾಗಿ ವಸಂತ ಕುಮಾರ ಅಧಿಕಾರ ಸ್ವೀಕಾರ
    • ಶಕ್ತಿ ಕೇಂದ್ರದಲ್ಲಿ ಬಿಜೆಪಿಯ ಗೆಲುವಿನ ಶಕ್ತಿಯಿದೆ: ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.