Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಖಿ ಕೇಂದ್ರದಲ್ಲಿ ನೊಂದ ಮಹಿಳೆಯರಿಗೆ ನೆರವು ದೊರೆಯುವಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಜಿ. ಜಗದೀಶ್
    ಉಡುಪಿ ಜಿಲ್ಲೆ

    ಸಖಿ ಕೇಂದ್ರದಲ್ಲಿ ನೊಂದ ಮಹಿಳೆಯರಿಗೆ ನೆರವು ದೊರೆಯುವಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಜಿ. ಜಗದೀಶ್

    Updated:20/07/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ದೊರೆಯುವ ನೆರವು ಮತ್ತು ಸೌಲಭ್ಯಗಳ ಕುರಿತಂತೆ, ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ, ನೊಂದ ಮಹಿಳೆಯರಿಗೆ ಸಕಾಲದಲ್ಲಿ ಅಗತ್ಯ ನೆರವು ದೊರಕುವಂತೆ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

    Click Here

    Call us

    Click Here

    ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ದಾಖಲಾಗುವ ದೂರುಗಳನ್ನು ಆದಷ್ಟು ಬೇಗ ಇತ್ಯರ್ಥಗೊಳಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಸಮಾಲೋಚನೆ ಹಂತದಲ್ಲಿರುವ ಪ್ರಕರಣಗಳನ್ನು ಬೇಗ ಮುಕ್ತಾಯಗೊಳಿಸಿ, ನ್ಯಾಯಾಲಯದಲ್ಲಿರುವ ಪ್ರಕರಣಗಳ ಕುರಿತು ಆಗಾಗ್ಗೆ ವಿಚಾರಿಸಿ, ಕೇಂದ್ರದಲ್ಲಿ ದಾಖಲಾಗುವ ಮಹಿಳೆಯರಿಗೆ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಜಿಲ್ಲಾಸ್ಪತ್ರೆಗೆ ದೂರವಾಣಿ ಕರೆ ಮಾಡುವ ಮೂಲಕ ಶುಶ್ರೂಷಕರ ಸೇವೆಯನ್ನು ಪಡೆಯುವಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ. ಜಗದೀಶ್, ರಾಷ್ಟ್ರೀಯ ಹೆದ್ದಾರಿಯಿಂದ ಬರಲು ಅನುಕೂಲವಾಗುವಂತೆ ಕೇಂದ್ರಕ್ಕೆ ಕಾಂಕ್ರೀಟ್ ಅಥವಾ ಇಂಟರ್ಲಾಕ್ ರಸ್ತೆ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

    ಸಖಿ ಕೇಂದ್ರದಲ್ಲಿ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರನ್ನು ಮಾತ್ರ ದಾಖಲು ಮಾಡುವ ಅವಕಾಶವಿದ್ದು, ಇತರೆ ಮಾನಸಿಕ ಸಮಸ್ಯೆಯಿಂದ ರಸ್ತೆ ಬದಿ ಅಲೆದಾಡುವ ಮಹಿಳೆಯರನ್ನು ದಾಖಲು ಮಾಡಲು ಪ್ರತ್ಯೇಕ ಕೇಂದ್ರ ಇಲ್ಲವಾಗಿದ್ದು, ಈ ಕುರಿತು ಜಿಲ್ಲೆಯಲ್ಲಿ ಪ್ರತ್ಯೇಕ ಕೇಂದ್ರ ತೆರೆಯುವ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪತ್ರ ಬರೆಯುವಂತೆ ತಿಳಿಸಿದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್, ಸಖಿ ಕೇಂದ್ರದ ಕುರಿತಂತೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಅರಿವು ಮೂಡಿಸಿ ಎಂದರು.

    ಸಖಿ ಕೇಂದ್ರದಲ್ಲಿ ಫೆಬ್ರವರಿ 2021 ರಿಂದ ಜೂನ್ ವರೆಗೆ 42 ಕೌಟುಂಬಿಕ ದೌರ್ಜನ್ಯ, 1 ಸೈಬರ್ ಅಪರಾಧ, 2 ಕಾಣೆಯಾದ ಪ್ರಕರಣ ಹಾಗೂ ಇತರೆ 33 ಸೇರಿದಂತೆ ಒಟ್ಟು 78 ಪ್ರಕರಣಗಳು ದಾಖಲಾಗಿದ್ದು, 27 ಪ್ರಕರಣ ಇತ್ಯರ್ಥಗೊಂಡಿದ್ದು, ಉಳಿದ ಪ್ರಕರಣಗಳು ನ್ಯಾಯಾಲಯದಲ್ಲಿ ಮತ್ತು ಸಮಾಲೋಚನೆಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ ಮಾಹಿತಿ ನೀಡಿದರು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರಚಂದ್ರ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    5 × 1 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.