Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಭಾರಿ ಅವ್ಯವಹಾರ: ಬಿ.ಟಿ. ಮಂಜುನಾಥ ಪೂಜಾರಿ ಆರೋಪ
    ಊರ್ಮನೆ ಸಮಾಚಾರ

    ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಭಾರಿ ಅವ್ಯವಹಾರ: ಬಿ.ಟಿ. ಮಂಜುನಾಥ ಪೂಜಾರಿ ಆರೋಪ

    Updated:23/07/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿರುವ ಬಗ್ಗೆ ಸಂಬಂದಪಟ್ಟವರ ಗಮನಕ್ಕೆ ತಂದಿದ್ದರೂ ಈವರೆಗೆ ಪ್ರಯೋಜನವಾಗಿಲ್ಲ. ಸಹಕಾರಿ ಸಂಘದ ಅವ್ಯವಹಾರ ತನಿಖೆ ಮಾಡಿ ತಪ್ಪಿತಸ್ತರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳದಿದ್ದರೆ ವಿಧಾನಸೌಧ ಮುಂದೆ ಧರಣಿ ನಡೆಸುವುದಾಗಿ ಸಂಘದ ಸದಸ್ಯ ಬಿ. ಟಿ. ಮಂಜುನಾಥ ಪೂಜಾರಿ ಎಚ್ಚರಿಸಿದ್ದಾರೆ.

    Click Here

    Call us

    Click Here

    ಕುಂದಾಪುರ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಹತ್ತಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆಯುತ್ತಿದೆ. ಈ ಬಗ್ಗೆ ಉಡುಪಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಮಾಹಿತಿ ಹಕ್ಕಿನ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದು ಅವರು ಮಾಮೂಲಿ ಅರ್ಜಿ ಎಂದು ಪರಿಗಣಿಸಿ ತಮ್ಮ ಕೈಕೆಳಗಿನ ಸಂಸ್ಥೆಯಲ್ಲಿ ಕೋಟಿಗಟ್ಟಲೆ ಅವ್ಯವಹಾರ ನಡೆಯುತ್ತಿದ್ದರೂ ತಮಗೆ ಏನು ಸಂಬಂಧ ಇಲ್ಲ ಎಂಬಂತೆ ವರ್ತಿಸಿ ಮಾಹಿತಿ ನೀಡಲು ಅವಕಾಶ ಇಲ್ಲ ಎಂದು ಹಿಂಬರಹ ನೀಡಿ ಕೈ ತೊಳೆದುಕೊಂಡಿದ್ದಾರೆ.

    ಆ ನಂತರ ಕುಂದಾಪುರ ಸಹಾಯಕ ಪೋಲಿಸ್ ಅಧೀಕ್ಷಕರು, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಿಗೂ ಹಾಗೂ ಕರ್ನಾಟಕ ರಾಜ್ಯ ಸಹಕಾರಿ ಸಚಿವರಿಗೂ ದೂರು ನೀಡಿದ್ದು ಯಾರಿಂದಲೂ ಸಕಾರತ್ಮಕ ಸ್ಪಂದನೆ ದೊರೆತಿಲ್ಲ. ಕರ್ನಾಟಕ ಲೋಕಾಯುಕ್ತಕ್ಕೆ ಕೂಡ ದೂರು ನೀಡಿದ್ದು, ಅವರು ನನಗೆ ಮಾಹಿತಿ ನೀಡಿ ಅವ್ಯವಹಾರ ಆಗಿದೆ ಎಂದು ಅದರಲ್ಲಿ ನಾನೇ ಎಲ್ಲಾ ದಾಖಲೆಗಳನ್ನು ನೀಡಬೇಕೆಂದು ಉತ್ತರಿಸಿದ್ದು, ಲೋಕಾಯುಕ್ತ ಇಲಾಖೆಯವರು ಕೂಡಾ ಈ ಪ್ರಕರಣವನ್ನು ಗಂಬೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದ್ದಾರೆ.

    ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಜನಪ್ರಿಯ ಅಧ್ಯಕ್ಷರಾದ ಜಯರಾಮ ಭಂಡಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ರಮೇಶ ಗಾಣಿಗ ಹಾಗೂ ಮ್ಯಾನೇಜರ್ ಈಗ ಮೃತಪಟ್ಟಿರುವ ಸಂಪತ್ ಕಾಮತ್ ಸೇರಿ ಸುಮಾರು 30 ಕೋಟಿಗೂ ಮಿಕ್ಕಿ ಅವ್ಯವಹಾರ ನೆಡೆಸಿರುವುದು ಈಗಿನ ಲೆಕ್ಕಪರಿಶೋಧನೆ (ಅಡಿಟ್) ತನಿಖೆಯಲ್ಲಿ ತಿಳಿದು ಬಂದಿದ್ದು, ವ್ಯವಹಾರದಲ್ಲಿ ನಾಮಾಕಾವಸ್ತೆಗೆ 2-3 ಕೋಟಿ ರೂಪಾಯಿಗಳನ್ನು ಇವರಿಂದ ಕಟ್ಟಿಸಿಕೊಂಡು ಪ್ರಕರಣವನ್ನು ಮುಚ್ಚಿ ಹಾಕುವ ವ್ಯವಸ್ಥಿತ ಷಂಡ್ಯತ್ರ ನಡೆಯುತ್ತಿರುವುದಾಗಿ ಕಂಡು ಬಂದಿರುತ್ತದೆ. ಇವರೆಗೆ ಅಧಿಕೃತ ಲೆಕ್ಕಪರಿಶೋಧಕರನ್ನು ನೇಮಿಸಿದೆ ಇರುವುದನ್ನು ಕಂಡರೆ ಪ್ರಕರಣದಲ್ಲಿ ಎಲ್ಲರೂ ಭಾಗಿಯಾಗಿರುತ್ತಾರೆಂದು ಅರ್ಥವಾಗುತ್ತಿದೆ. ಸಿದ್ದಾಪುರ ವ್ಯವಸಹಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಿಗೂ ದೂರು ನೀಡಿದ್ದು ಇವರೆಗೂ ಯಾವುದೇ ನಿರೀಕ್ಷಿತ ಕ್ರಮ ಆಗಿರುವುದಿಲ್ಲ. ಇಷ್ಟು ದೊಡ್ಡ ಮೊತ್ತದ ಅವ್ಯವಹಾರ ನಡೆದರೂ ಇವರೆಗೂ ಯಾರ ವಿರುದ್ದವೂ ಪ್ರಕರಣ ದಾಖಾಲಾಗಿರುವುದಿಲ್ಲ. ಅವ್ಯವಹಾರದಲ್ಲಿ ಮೇಲಾಧಿಕಾರಿಗಳ ಪಾತ್ರವೂ ಇರುವುದು ಕಂಡು ಬರುತ್ತದೆ ಎಂದವರು ಆರೋಪಿಸಿದರು.

    ಈ ಪ್ರಕರಣದಲ್ಲಿ ಗಂಭೀರ ಸ್ವರೂಪದಾಗಿದ್ದು ಸಾವಿರಾರು ಜನರು ನಂಬಿಕೊಂಡು ಬಂದಿರುವ ಪ್ರಾಥಮಿಕ ಸಹಕಾರಿ ಸಂಘ ಇದಾಗಿದ್ದು ನಿವೃತ್ತಿ ವೇತನ, ಪಿಂಚಣಿ, ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಮಕ್ಕಳ ಮದುವೆಯ ಬಗ್ಗೆ ಸಂಸ್ಥೆಯಲ್ಲಿ ಠೇವಣಿ ಇಟ್ಟವರು ಕಳವಳ ಪಡುವಂತಾಗಿದೆ.

    Click here

    Click here

    Click here

    Call us

    Call us

    ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯ ಇಲ್ಲವೆ ಸಿಬಿಐಗೆ ಒಪ್ಪಿಸಿ ಸಮಗ್ರ ತನಿಕೆ ನಡೆಸಿ ತಪ್ಪಿಸ್ಥರ ವಿರುದ್ದ ಕಾನುನು ಕ್ರಮ ಕೈಗೊಂಡು ಸಂಘದ ಹಿತ ಕಾಪಾಡುವಂತೆ ಅವರು ಆಗ್ರಹಿಸಿದ್ದಾರೆ.

    ಮಾಧ್ಯಮಗೋಷ್ಠಿಯಲ್ಲಿ ದಿವಾಕರ ಹೆಗ್ಡೆ, ಸುದರ್ಶನ ಶೆಟ್ಟಿ, ಶಾಂತರಾಮ ಶೆಟ್ಟಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.