ಸಿಇಟಿ, ನೀಟ್, ಜೆಇಇ ಪರೀಕ್ಷಾ ತರಬೇತಿ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಜಿ ಎಸ್ ವಿ ಎಸ್ ಅಸೋಸಿಯೇಷನ್ ವತಿಯಿಂದ ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಈ ಸಾಲಿನ ಶೈಕ್ಷಣಿಕ ವರ್ಷದ ಸಿಇಟಿ, ನೀಟ್ ಮತ್ತು ಜೆಇಇ ಪರೀಕ್ಷಾ ತರಬೇತಿ ಕಾರ್ಯಕ್ರಮವು ಗುಜ್ಜಾಡಿ ಗೋಪಾಲ ನಾಯಕ ರೋಟರಿ ಇಂಡೋರ್ ಸ್ಟೇಡಿಯಂನಲ್ಲಿ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.

Call us

Click Here

ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕರಾದ ರಾಘವೇಂದ್ರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಇಲಾಖಾ ಪರೀಕ್ಷೆಗಳ ಜೊತೆಯಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮಾಡಬೇಕು. ಇಂತಹ ಪರೀಕ್ಷೆಗಳ ಯಶಸ್ಸಿನಲ್ಲಿ ಪಾಲಕರು ಪೋಷಕರು ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ತರಬೇತುದಾರರ ಪರಿಶ್ರಮ ಬಹಳಷ್ಟು ಮುಖ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಜಿ ಎಸ್ ವಿ ಎಸ್ ಅಸೋಸಿಯೇಷನ್ನಿನ ಕಾರ್ಯದರ್ಶಿ ಹೆಚ್ ಗಣೇಶ್ ಕಾಮತ್ ಅಧ್ಯಕ್ಷತೆಯನ್ನು ವಹಿಸಿದ್ದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅತಿಥಿಗಳನ್ನು ಸ್ವಾಗತಿಸಿದರು. ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಸದಾಶಿವ ನಾಯಕ್ ಪ್ರಸ್ತಾವಿಸಿದರು.

ಗಣಿತಶಾಸ್ತ್ರ ಉಪನ್ಯಾಸಕ ಪ್ರವೀಣ್ ಕಾಮತ್ ಅತಿಥಿಗಳನ್ನು ಪರಿಚಯಿಸಿದರು. ಆಂಗ್ಲಭಾಷೆ ಉಪನ್ಯಾಸಕ ಥಾಮಸ್ ಪಿ ಎ ಕಾರ್ಯಕ್ರಮ ನಿರ್ವಹಿಸಿದರು. ಭೌತಶಾಸ್ತ್ರ ಉಪನ್ಯಾಸಕ ಕೃಷ್ಣ ಗುಜ್ಜಾಡಿ ವಂದಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಆನ್‌ಲೈನ್ ಮೂಲಕ ಪಾಲ್ಗೊಂಡಿದ್ದರು.

Click here

Click here

Click here

Click Here

Call us

Call us

Leave a Reply