Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾನವೀಯ ಮೌಲ್ಯಗಳ ಮರುಸ್ಥಾಪನೆ ಇಂದಿನ ತುರ್ತು: ವಿವೇಕಾನಂದ ಹೆಚ್. ಕೆ
    ಊರ್ಮನೆ ಸಮಾಚಾರ

    ಮಾನವೀಯ ಮೌಲ್ಯಗಳ ಮರುಸ್ಥಾಪನೆ ಇಂದಿನ ತುರ್ತು: ವಿವೇಕಾನಂದ ಹೆಚ್. ಕೆ

    Updated:28/07/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಮೌಲ್ಯಗಳು ಇಂದು ಎಲ್ಲಾ ಕ್ಷೇತ್ರದಲ್ಲಿಯೂ ಶಿಥಿಲವಾಗಿದೆ. ಹಣ, ಅಧಿಕಾರ ಹಾಗೂ ಪ್ರಚಾರದ ಆಧಾರದಲ್ಲಿಯೇ ಅದನ್ನು ಅಳೆಯಲಾಗುತ್ತಿದೆ. ಎಲ್ಲವನ್ನೂ ಕೈಯಂಚಲ್ಲಿ ಪಡೆಯುವಷ್ಟು ಸಲೀಸಾಗಿ ಮುಂದುವರಿದಿರುವ ಸಮಾಜದಲ್ಲಿ ಮಾನವೀಯ ಮೌಲ್ಯಗಳ ಮರುಸ್ಥಾಪನೆಯಾಗಬೇಕಿದೆ ಎಂದು ಸಾಹಿತಿ, ಚಿಂತಕ ವಿವೇಕಾನಂದ ಹೆಚ್. ಕೆ ಹೇಳಿದರು.

    Click Here

    Call us

    Click Here

    ಕಲಾಕ್ಷೇತ್ರ ಕುಂದಾಪುರ ಸಂಸ್ಥೆಯು ಮಂಗಳವಾರ ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡಿರುವ ವಿವೇಕಾನಂದ ಹೆಚ್. ಕೆ ಅವರೊಂದಿಗೆ ಆಯೋಜಿಸಿದ್ದ ಸಂವಾದದಲ್ಲಿ ಅವರು ಮಾತನಾಡಿ ಕೆಟ್ಟವರು, ವಂಚಕರು ಈ ಸಮಾದಲ್ಲಿ ವಿಜ್ರಂಭಿಸುತ್ತಾರೆ ಎಂಬ ಭಾವನೆ ಇದೆ. ಕೆಲವು ವರ್ಷಗಳ ಹಿಂದೆ ಒಳ್ಳೆಯವರಿಗೆ ಸಮಾಜದಲ್ಲಿ ಗೌರವವಿತ್ತು. ಇಂದೂ ಅಂತಹ ಒಳ್ಳೆಯತನಕ್ಕೆ ಗೌರವಕೊಡುವ ಕಾರ್ಯವಾಗಬೇಕಿದೆ. ಮನ, ಮನೆ ಹಾಗೂ ಮತಗಳಲ್ಲಿ ಬದಲಾವಣೆಯಾದರೆ ಮುಂದಿನ ಹದಿನೈದು ವರ್ಷಗಳಲ್ಲಿ ಮೌಲ್ಯಗಳ ಮರುಸ್ಥಾಪನೆ ಮಾಡಬಹುದಾಗಿದೆ. ಯಾವುದೇ ಕ್ಷೇತ್ರದ ಕೆಟ್ಟ ವ್ಯಕ್ತಿಗಳನ್ನು ನಿರ್ಲಕ್ಷಿಸಿ ಒಳ್ಳೆಯವರನ್ನು ಗೌರವಿಸುವ ಕಾರ್ಯ ನಮ್ಮಿಂದ ಆರಂಭವಾದರೆ ಮುಂದಿನ ಪೀಳಿಗೆಯಾದರೂ ನೆಮ್ಮದಿಯಿಂದ ಬದುಕಬಹುದು ಎಂದರು.

    ಮೌಲ್ಯಗಳ ಉದ್ದೀಪನಕ್ಕಾಗಿ ಪಾದಯಾತ್ರೆ:
    ಬೆಂಗಳೂರು ಗ್ರಾಮಾಂತರ ಜಿಲ್ಲೆಯವರಾದ ವಿವೇಕಾನಂದ ಹೆಚ್. ಕೆ ಅವರು ವೃತ್ತಿಯಲ್ಲಿ ಜಾಹೀರಾತು ನಿರ್ಮಾಪಕರು. ಮಾನವೀಯ ಮೌಲ್ಯಗಳ ಉದ್ದೀಪನ ಹಾಗೂ ಸಮಾಜವನ್ನು ಹತ್ತಿರದಿಂದ ಅರಿಯುವ ಸಲುವಾಗಿ ಅವರು ಕರ್ನಾಟಕದಾದ್ಯಂತ ಪಾದಯಾತ್ರೆ ಕೈಗೊಂಡಿದ್ದಾರೆ. ಕುಂದಾಪುರಕ್ಕೆ ಪ್ರವೇಶಿಸುವ ಮೊದಲು 269ನೇ ದಿನದ ಪಾದಯಾತ್ರೆ ಪೂರೈಸಿದ್ದು ಈವರೆಗೆ 8200 ಕಿ.ಮೀ ಕ್ರಮಿಸಿದ್ದಾರೆ.

    ಹಿರಿಯ ಸಾಹಿತಿ ಎಎಸ್‌ಎನ್ ಹೆಬ್ಬಾರ್, ಕಲಾಕ್ಷೇತ್ರ ಕುಂದಾಪುರದ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಪುರಸಭಾ ಸದಸ್ಯ ಗಿರೀಶ್ ದೇವಾಡಿಗ, ಜೋಯ್ ಜೆ. ಕರ್ವಾಲೋ ಮೊದಲಾದವರು ಉಪಸ್ಥಿತರಿದ್ದರು.

    ಇದನ್ನೂ ಓದಿ:
    ► ಸಿದ್ಧಾಪುರ: ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡ ಹೆಚ್. ಕೆ. ವಿವೇಕಾನಂದ ಅವರಿಗೆ ಸನ್ಮಾನ – https://kundapraa.com/?p=50409 .
    ► ಪ್ರಬುದ್ಧ ಮನಸು ಪ್ರಬುದ್ಧ ಸಮಾಜ ನಿರ್ಮಾಣಕ್ಕೆ ನಾಂದಿ: ವಿವೇಕಾನಂದ ಹೆಚ್.ಕೆ. – https://kundapraa.com/?p=50506 .

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.