ಇಡೂರು: ‘ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ’

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಬೈಂದೂರು ತಾಲ್ಲೂಕು ಚಿತ್ತೂರು ವಲಯ ಹಾಗೂ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ‘ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ’ವು ಇಲ್ಲಿನ ಇಡೂರಿನಲ್ಲಿ ನಡೆಯಿತು.

Call us

Click Here

ಗ್ರಾಮ ಪಂಚಾಯಿತಿ ಅಧ್ಯಕ್ಷ ಅಮಿನ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೈಂದೂರು ತಾಲೂಕಿನ ಯೋಜನಾಧಿಕಾರಿ ಶಶಿರೇಖಾ ಪಿ., ಉಪವಲಯ ಸಹಾಯಕ ಅರಣ್ಯಧಿಕಾರಿ ಸುನಿಲ್ ಕುಮಾರ್, ಚಿತ್ತೂರು ವಲಯ ಒಕ್ಕೂಟಗಳ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಇಡೂರು ಒಕ್ಕೂಟದ ಅಧ್ಯಕ್ಷ ವೆಂಕಟರಮಣ ಆಚಾರ್ಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಮತಿ ಆಚಾರ್ಯ ಒಕ್ಕೂಟದ ಪದಾಧಿಕಾರಿಗಳು ಮತ್ತು ಪ್ರಗತಿಬಂಧು ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಹಾಜರಿದ್ದರು.

ವಲಯದ ಮೇಲ್ವಿಚಾರಕ ಶ್ರೀನಿವಾಸ್ ಸ್ವಾಗತಿಸಿ, ಗ್ರಾಮದ ಸೇವಾಪ್ರತಿನಿಧಿ ಪ್ರೇಮಾ ವಂದಿಸಿದರು.

Leave a Reply