Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಚಿವ ಸ್ಥಾನಕ್ಕಾಗಿ ಯಾರ ಕಾಲಿಗೂ ಬೀಳಲು ಸಿದ್ದವಿಲ್ಲ. ಕೊಟ್ಟರೆ ನಿಭಾಯಿಸುತ್ತೇನೆ: ಶಾಸಕ ಹಾಲಾಡಿ
    ಊರ್ಮನೆ ಸಮಾಚಾರ

    ಸಚಿವ ಸ್ಥಾನಕ್ಕಾಗಿ ಯಾರ ಕಾಲಿಗೂ ಬೀಳಲು ಸಿದ್ದವಿಲ್ಲ. ಕೊಟ್ಟರೆ ನಿಭಾಯಿಸುತ್ತೇನೆ: ಶಾಸಕ ಹಾಲಾಡಿ

    Updated:30/07/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಸಚಿವ ಸ್ಥಾನಕ್ಕಾಗಿ ಯಾರ ಬಳಿಯೂ ಕೇಳಲ್ಲ. ಬೆಂಗಳೂರಿಗೆ ಹೋಗಿ ಸಚಿವ ಸ್ಥಾನಕ್ಕಾಗಿ ಯಾರ ಕಾಲಿಗೂ ಬೀಳುವುದಿಲ್ಲ. ಯಾವ ನಾಯಕನ ಹಿಂದೆಯೂ ತಿರುಗಾಡಲು ಹೋಗಲ್ಲ. ನಾನಿನ್ನು ರಾಜಕೀಯದಲ್ಲಿ ಸ್ವಾಭಿಮಾನ ಬಿಟ್ಟಿಲ್ಲ. ಈ ಹಿಂದೆ ನನ್ನನ್ನು ಕರೆದು ತಪ್ಪು ಮಾಡಿದ್ದರು. ಆಗಲೂ ನಾನು ಸಚಿವ ಸ್ಥಾನ ಕೇಳಿರಲಿಲ್ಲ. ಈಗಲೂ ಕೇಳಲು ಹೋಗಲ್ಲ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹೇಳಿದ್ದಾರೆ.

    Click Here

    Call us

    Click Here

    ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆ ಸಂಪುಟ ರಚನೆಯ ಕಸರತ್ತು ಜೋರಾಗಿದ್ದು ಆಕಾಂಕ್ಷಿಗಳು ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದರೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಮಾತ್ರ ನೇರ ನುಡಿಯ ಮೂಲಕ ನಾಯಕರಿಗೆ ಬಿಸಿಮುಟ್ಟಿಸಿದ್ದಾರೆ.

    ನಾನೆಂದೂ ರಾಜಕೀಯದಲ್ಲಿ ಲಾಬಿ, ಜಾತಿವಾದಿತನ ನಾನು ಮಾಡಿಲ್ಲ, ಮಾಡುವುದು ಇಲ್ಲ. ಯಾರ ಕಾಲಿಗೆ ಬಿದ್ದು ನಾನು ಕೆಲಸ ತೆಗೆದುಕೊಳ್ಳುವುದಿಲ್ಲ. ಕೆಲಸ ಕೊಟ್ಟರೆ ನಾನು ಅದನ್ನು ನಿಭಾಯಿಸುತ್ತೇನೆ. ಶ್ರದ್ಧೆಯಿಂದ ಮಾಡುತ್ತೇನೆ. ಶಾಸಕನಾಗಿ ಜನ ಸೇವೆಯನ್ನು ಐದು ಅವಧಿಯಲ್ಲೂ ಮಾಡುತ್ತಿದ್ದೇನೆ ಎಂದವರು ಹೇಳಿದ್ದಾರೆ.

    ಈವರೆಗೆ ನನಗೆ ಯಾರಿಂದಲೂ ಯಾವುದೇ ಕರೆಗಳು ಮಾಹಿತಿಗಳು ಬಂದಿಲ್ಲ. ಒಂದು ವೇಳೆ ನನ್ನನ್ನು ಮಂತ್ರಿ ಮಾಡಿದರೆ ಸರ್ಕಾರಿ ಕಾರು, ಎಸ್ಕಾರ್ಟ್, ಗನ್ ಮ್ಯಾನ್ ತೆಗೆದುಕೊಳ್ಳುವುದಿಲ್ಲ. ನಾನು ಜನರ ಜೊತೆ ಕೆಲಸ ಮಾಡುವವನು ನನಗೆ ಯಾವ ಜೀವ ಭಯವಿಲ್ಲ. ನಾಯಕರಿಂದ ಕರೆ ಬಂದರೆ ನಾನು ಇದನ್ನು ಹೇಳಲು ಸಿದ್ಧನಿದ್ದೇನೆ. ನಾನು ಹೆಡ್ಡ ರಾಜಕಾರಣಿ ಅಲ್ಲ. ನನ್ನದು ನೇರನುಡಿಯ ರಾಜಕಾರಣ. ದುರಹಂಕಾರ ಅಲ್ಲ, ಯಾರ ಭಯದಲ್ಲೂ ಇಲ್ಲ. ಮತದಾರರ ಮತ್ತು ಕಾರ್ಯಕರ್ತರ ಋಣದಲ್ಲಿ ಮಾತ್ರ ನಾನಿರೋದು ಎಂದಿದ್ದಾರೆ.

    ಶ್ವಾಸ ಇದ್ದರೆ ಸಚಿವ ಸ್ಥಾನ ಕೇಳಲು ಹೋಗಲ್ಲ. ನಾನು ಜಾತ್ಯಾತೀತ ರಾಜಕಾರಣಿ. ನನ್ನ ಹುಟ್ಟಿನಿಂದ ನಾನು ಜಾತಿ ಸಂಘರ್ಷಕ್ಕೆ ಹೋಗಿಲ್ಲ. ಪ್ರಬಲ ಜಾತಿಯಲ್ಲಿ ಹುಟ್ಟಿದ್ದು ಆಕಸ್ಮಿಕ. ಎಲ್ಲಾ ಜಾತಿಯವರು ಮತ ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ. ಒಂದು ಜಾತಿಯ ಉದ್ಧಾರಕ್ಕಾಗಿ ಜನ ನನ್ನನ್ನು ಗೆಲ್ಲಿಸಿದ್ದಲ್ಲ. ಜಾತಿವಾದಿಗಳು ಸಾರ್ವತ್ರಿಕ ಚುನಾವಣೆಗೆ ಬರಬಾರದು, ಶಾಸಕರಾಗಲೇಬಾರದು. ಜಾತಿವಾದಿಗಳು ಜಾತಿಯ ಸಂಘಕ್ಕೆ ಸಚಿವರಾಗಬೇಕು. ಸ್ಥಾನಮಾನ ಕೇಳುವುದು ಪ್ರಜಾಪ್ರಭುತ್ವ ಅಲ್ಲ ಕೇಳಿ ಸಚಿವ ಸ್ಥಾನವನ್ನ ಪಡೆಯುವುದು ಪ್ರಜಾಪ್ರಭುತ್ವ ವ್ಯವಸ್ಥೆ ಅಲ್ಲ. ಕೇಳಿ ಅಧಿಕಾರವನ್ನು ಪಡೆಯುವುದು ಪ್ರಜಾಪ್ರಭುತ್ವ ವ್ಯವಸ್ಥೆಯೇ ಅಲ್ಲ ಎಂದಿದ್ದಾರೆ. ಉಪಯೋಗಕ್ಕೆ ಇಲ್ಲದ್ದನ್ನ ಕೊಟ್ಟರೆ ಕಿಸೆಗೆ ಹಾಕಿಕೊಂಡು ಬರುವುದು ಇಲ್ಲ ಎಂದವರು ಸ್ಪಷ್ಟಪಡಿಸಿದ್ದಾರೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    eight + 8 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.