Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಫೈನಾನ್ಸ್ ವ್ಯವಹಾರದಲ್ಲಿನ ಒಡಕಿನಿಂದ ಸ್ನೇಹಿತನ ಕಡಿದು ಕೊಲೆ: ಮಾಹಿತಿ ನೀಡಿದ ಎಸ್ಪಿ ವಿಷ್ಣುವರ್ಧನ್
    ಅಪಘಾತ-ಅಪರಾಧ ಸುದ್ದಿ

    ಫೈನಾನ್ಸ್ ವ್ಯವಹಾರದಲ್ಲಿನ ಒಡಕಿನಿಂದ ಸ್ನೇಹಿತನ ಕಡಿದು ಕೊಲೆ: ಮಾಹಿತಿ ನೀಡಿದ ಎಸ್ಪಿ ವಿಷ್ಣುವರ್ಧನ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಫೈನಾನ್ಸಿನ ವ್ಯವಹಾರದಲ್ಲಿನ ಒಡಕಿನಿಂದಾಗಿ ತನ್ನ ವ್ಯವಹಾರದ ಪಾಲುದಾರ ಅಜೇಂದ್ರ ಶೆಟ್ಟಿಯನ್ನು ಕೊಲೆ ಮಾಡಿದ್ದಾಗಿ ಅನೂಪ್ ಶೆಟ್ಟಿ ಒಪ್ಪಿಕೊಂಡಿದ್ದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ತಿಳಿಸಿದ್ದಾರೆ.

    Click Here

    Call us

    Click Here

    ಸೋಮವಾರ ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಪ್ರಕರಣ ಮಾಹಿತಿ ನೀಡಿ , ಆರೋಪಿ ಅನೂಪ್ ಶೆಟ್ಟಿ ಈ ಮೊದಲು ದುಬಾಯಿ ಮತ್ತು ಸಿಂಗಾಪೂರದಲ್ಲಿ ಕೆಲಸ ಮಾಡಿಕೊಂಡಿದ್ದು ಬಳಿಕ ಊರಿಗೆ ಮರಳಿ ಅಜೇಂದ್ರ ಶೆಟ್ಟಿಯೊಂದಿಗೆ ಸೇರಿಕೊಂಡು ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದ. ಫೈನಾನ್ಸ್ ವ್ಯವಹಾರದಲ್ಲಿ ಇಬ್ಬರಿಗೂ ಆಗಿಂದಾಗ್ಗೆ ಗಲಾಟೆಗಳು ನಡೆದಿದ್ದು, ಇದೇ ಕೊಲೆಗೆ ಪ್ರಮುಖ ಕಾರಣವಾಗಿದೆ. ಜುಲೈ 30ರಂದು ಅಜೇಂದ್ರ ಶೆಟ್ಟಿಯನ್ನು ಮಾರಕಾಯುಧದಿಂದ ಕಡಿದು ಕೊಲೆ ಮಾಡಿ ಅಜೇಂದ್ರ ಶೆಟ್ಟಿಯ ಕೊರಳಿನಲ್ಲಿದ್ದ ಚಿನ್ನದ ಚೈನ್ ಮತ್ತು ಅವರ ಹೊಸ ಹೊಂಡಾ ಸಿಟಿ ಕಾರನ್ನು ಸುಲಿಗೆ ಮಾಡಿಕೊಂಡು ಹೋಗಿದ್ದ. ಅನೂಪ್ ಪಟ್ಟಿಯು ತಲೆಮರೆಸಿಕೊಂಡಿದ್ದರಿಂದ ಈತನ ವಿರುದ್ಧ ಅಜೇಂದ್ರ ಶೆಟ್ಟಿಯ ಅಣ್ಣ ಮಹೇಂದ್ರ ಶೆಟ್ಟಿಯು ನೀಡಿರುವ ದೂರಿನಂತೆ ಕುಂದಾಪ್ರರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಆರೋಪಿಯ ಬಂಧನಕ್ಕಾಗಿ ಕುಂದಾಪುರ ಪೊಲೀಸ್ ಉಪಾಧೀಕ್ಷಕರಾದ ಕೆ. ಶ್ರೀಕಾಂತ್ ರವರ ಮಾರ್ಗದರ್ಶನದಲ್ಲಿ ಕುಂದಾಪುರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಮತ್ತು ಬೈಂದೂರು ವೃತ್ತ ನಿರೀಕ್ಷರಾದ ಸಂತೋಷ ಕಾಯ್ಕಿಣಿ ನೇತೃತ್ವದಲ್ಲಿ, ಕುಂದಾಪುರ ಉಪವಿಭಾಗದ ಅಪರಾಧ ಪತ್ತೆ ದಳದ ಸಿಬ್ಬಂದಿಯವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿ ಆರೋಪಿಯನ್ನು ಜುಲೈ 31 ರಂದು ಗೋವಾ ರಾಜ್ಯದ ಕೋಲ್ವಾ ಬೀಚ್ ಬಳಿ ಬಂಧಿಸಲಾಗಿದೆ. ಆತನು ಸುಲಿಗೆ ಮಾಡಿಕೊಂಡು ಹೋಗಿರುವ ಕಾರನ್ನು ವಿಶೇಷ ತಂಡದಲ್ಲಿದ್ದ ಬೈಂದೂರು ಸಿಪಿಐ ರವರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ವರದಿಯಾದ 24 ಗಂಟೆಯೊಳಗಾಗಿ ಭೇದಿಸುವಲ್ಲಿ ಯಶಸ್ವಿಯಾಗಿ ಸಾರ್ವಜನಿಕರ ಪ್ರಶಂಸೆಗೊಳಗಾಗಿರುತ್ತಾರೆ ಎಂದರು

    ಪ್ರಕರಣದ ಭೇದಿಸಲು ರಚಿಸಲಾದ ವಿಶೇಷ ತಂಡದಲ್ಲಿ ಶ್ರೀಧರ್ ನಾಯ್ಕ ಪಿ.ಎಸ್.ಐ. ಶಂಕರನಾರಾಯಣ, ನಂಜನಾಯ್ಕ ಪಿ.ಎಸ್.ಐ. ಗಂಗೊಳ್ಳಿ, ಕುಂದಾಪುರ ಗ್ರಾಮಾಂತರ ಠಾಣೆಯ ಪಿ.ಎಸ್.ಐ. ನಿರಂಜನ ಗೌಡರವರೊಂದಿಗೆ ಉಪವಿಭಾಗದ ಸಿಬ್ಬಂದಿಯವರಾದ ಮೋಹನ, ಚಂದ್ರಶೇಖರ ನಾಗೇಂದ್ರ, ಶ್ರೀನಿವಾಸ, ಸಂತೋಷ್ ಕುಮಾರ್, ಸಂತೋಷ್, ರಾಘವೇಂದ್ರ, ರಾಮು, ಸೀತಾರಾಮ, ಸತೀಶ್, ಚಿದಾನಂದ, ಮಧುಸೂಧನ್ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿಯವರಾದ ದಿನೇಶ್ ಸಹಕರಿಸಿರುತ್ತಾರೆ ಎಂದರು.

    ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಕುಂದಾಪುರ ಪೊಲೀಸ್ ಉಪಾಧೀಕ್ಷಕರಾದ ಕೆ. ಶ್ರೀಕಾಂತ್, ಕುಂದಾಪುರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಮತ್ತು ಬೈಂದೂರು ವೃತ್ತ ನಿರೀಕ್ಷರಾದ ಸಂತೋಷ ಕಾಯ್ಕಿಣಿ, ಶಂಕರನಾರಾಯಣ ಪಿಎಸ್ ಐ ಶ್ರೀಧರ್ ನಾಯ್ಕ, ಗಂಗೊಳ್ಳಿ ಪಿಎಸ್ ಐ ನಂಜಾ ನಾಯ್ಕ, ಗ್ರಾಮಾಂತರ ಠಾಣೆಯ ಪಿ.ಎಸ್.ಐ. ನಿರಂಜನ ಗೌಡ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    5 + nine =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.