Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪ್ರ ಕನ್ನಡ ಭಾಷಿಕರ ಸಂಭ್ರಮ: ವಿಶ್ವ ಕುಂದಾಪ್ರ ಕನ್ನಡ ದಿನ
    ಕುಂದಾಪ್ರ ಕನ್ನಡ

    ಕುಂದಾಪ್ರ ಕನ್ನಡ ಭಾಷಿಕರ ಸಂಭ್ರಮ: ವಿಶ್ವ ಕುಂದಾಪ್ರ ಕನ್ನಡ ದಿನ

    Updated:27/07/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪ್ರ ಕನ್ನಡದ್ ತಾಕತ್ತೇ ಅಂತದ್ ಕಾಣಿ. ಅದ್ರೊಳಗ್ ಭಾವ-ಬಂಧ ಎರಡೂ ಇತ್ತ್. ಹಂಗಾಯೇ ಕುಂದಾಪ್ರ ಭಾಷಿ ಮಾತಾಡ್ವರ್ ಯಾರ್ ಯಾರ್ ಎಲ್ಲೆಲ್ಲಿದ್ರೋ ಅಲ್ಲಲ್ಲೇ ಭಾಷಿ ಉಳ್ಸಿ-ಬೆಳ್ಸು ಬಗ್ಗ್ ಒಂಚೂರಾರೂ ನಿಗಾ ವಯ್ಸ್ಲಿ ಅಂದೇಳಿ ಆಟಿ ಅಮಾಸಿ ದಿನವೇ ’ವಿಶ್ವ ಕುಂದಾಪ್ರ ಕನ್ನಡ ದಿನ ‘ ಅಂದೇಳಿ ಮಾಡ್ತಿದ್ರ್.

    Click Here

    Call us

    Click Here

    ಕಳ್ದ್ ಎರ್ಡ್ ವರ್ಷದ್ ಹಿಂದ್ ಸುರು ಆದ್ ಕುಂದಾಪ್ರ ಕನ್ನಡ ದಿನು ಅಂದಂದೆ ಸೈ, ಬ್ರಹ್ಮಾವರದಿಂದ್ ಬೈಂದೂರು ಶಿರೂರ್ ತನಕ್ , ದೇಶ-ವಿದೇಶದಂಗೆಲ್ಲಾ ಸದ್ದ್ ಮಾಡಿತ್. ಈ ಸರ್ತಿ ಕೊರೋನಾ ಇತ್ತಲಾ ಜನು ಸೇರ್ಸುಕಾತಿಲ್ಲ. ಆರೆ ಸೋಶಿಯಲ್ ಮೀಡಿಯಾದಗಂತೂ ಭಾರಿ ಸದ್ದ್ ಮಾಡ್ತಿತ್. ಬೇರ್ ಬೇರೆ ಬಗಿ ಸರ್ಧೆ, ಕಾರ್ಯಕ್ರಮ ಹಮ್ಮಕಂಡಿರ್.

    ವಿಶ್ವ ಕುಂದಾಪ್ರ ಕನ್ನಡ ದಿನ:
    ಕುಂದಾಪ್ರ ಕನ್ನಡ ಭಾಷೆಗೆ ತನ್ನದೇ ಆದ ಹಿರಿಮೆ-ಗರಿಮೆ ಇದೆ. ಕನ್ನಡ ಭಾಷೆಯ ಅತ್ಯಂತ ಸರಳ ಹಾಗೂ ಸಂಕ್ಷಿಪ್ತ ರೂಪವೆನಿಸಿಕೊಂಡಿರುವ ಕುಂದಾಪ್ರ ಕನ್ನಡ ಸರಿಸುಮಾರು ಬ್ರಹ್ಮಾವರದಿಂದ ಶಿರೂರಿನ ತನಕ ಮೂರು ತಾಲೂಕುಗಳಲ್ಲಿ ವ್ಯಾಪಿಸಿಕೊಂಡಿದೆ. ಕುಂದಾಪ್ರ ಕನ್ನಡ ಭಾಷಿಕರು ರಾಜ್ಯ ರಾಜಧಾನಿ ಸೇರಿದಂತೆ ಪ್ರಪಂಚದ ವಿವಿಧ ದೇಶಗಳಲ್ಲಿ ನೆಲೆನಿಂತಿದ್ದಾರೆ. ಇಷ್ಟ ಮಧ್ಯೆಯೂ ಭಾಷೆಗೊಂದು ತನ್ನದೇ ಆದ ಅಸ್ತಿತ್ವ ಬೇಕು. ಹಾಸ್ಯದ ಕಾರಣಕ್ಕಾಗಿ ಮಾತ್ರ ಬಳಸುವ ಭಾಷೆ, ಕುಂದಾಪುರಿಗರ ಬದುಕಿನ ಭಾಷೆಯೂ ಹೌದು ಎಂಬುದನ್ನು ವಿಶ್ವಕ್ಕೆ ಸಾರಬೇಕು ಎಂಬ ಸದುದ್ದೇಶದೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನಕ್ಕೆ ಮುನ್ನುಡಿ ಬರೆಯಲಾಗಿದೆ.

    ಆಷಾಡ ಅಮವಾಸ್ಯೆ ದಿನ ಆಚರಣೆ:
    ವಿಶ್ವ ಕುಂದಾಪ್ರ ಕನ್ನಡ ದಿನವನ್ನು ಪ್ರತಿವರ್ಷ ಆಷಾಡ ಅಮಾವಾಸ್ಯೆ (ಕರ್ಕಾಟಕ ಅಮವಾಸ್ಯೆ) ದಿನ ಜು.28ರಂದು ಆಚರಿಸಲಾಗುತ್ತಿದೆ. ಪ್ರಾದೇಶಿಕ ಹಬ್ಬಗಳೊಂದಿಗಿನ ಭಾಷೆಯ ನಂಟು ಹೆಚ್ಚಿರುವ ಕಾರಣಕ್ಕೆ, ನಮ್ಮ ಮೊದಲ ಹಬ್ಬವೂ ಆಗಿರುವುದರಿಂದ ಪ್ರತಿವರ್ಷ ಹಬ್ಬದ ದಿನವೇ ಕಾರ್ಯಕ್ರಮ ಆಯೋಜಿಸಲಾಗುತ್ತದೆ.

    ಭಾಷೆ ಗಟ್ಟಿಗೊಳ್ಳಲಿ. ಆಚರಣೆ ಯಶಸ್ವಿಯಾಗಲಿ:
    ಕುಂದಾಪ್ರ ಕನ್ನಡ ಭಾಷೆಗೆ ನಮ್ಮ ಹಿರಿಕರ ಕೊಡುಗೆ ದೊಡ್ಡದಿದೆ. ಅದು ಅಷ್ಟಾಗಿ ಗ್ರಾಂಥಿಕ ರೂಪ ಪಡೆದುಕೊಳ್ಳದೇ ಇದ್ದರೂ, ಆಡುಭಾಷೆಯಾಗಿ ಉಳಿದಿದೆ. ಆದರೆ ಕೆಲವೊಂದಿಷ್ಟು ವರ್ಷಗಳ ಈಚೆಗೆ ಕುಂದಾಪ್ರ ಕನ್ನಡ ದಾಖಲೀಕರಣ ಪ್ರಕ್ರಿಯೆಗಳು ನಡೆದಿವೆ. ನಿಘಂಟು, ಜಾನಪದ ಕೋಶಗಳಲ್ಲಿ ಕುಂದಾಪ್ರ ಕನ್ನಡವನ್ನು ದಾಖಲಿಸುವ ಕಾರ್ಯ ನಡೆದಿದೆ. ಕುಂದಾಪ್ರ ಕನ್ನಡದ ಸಾಹಿತ್ಯ, ಹಾಡು, ಸಿನೆಮಾ ಭಾಷೆಯ ಸೊಬಗನ್ನು ಹೆಚ್ಚಿಸುತ್ತಲೇ ಯುವಜನರಿಗೆ ಆಪ್ತವಾಗುವಂತೆ ಮಾಡಿದೆ. ಆದರೆ ಅಷ್ಟಕ್ಕೇ ನಿಂತರೆ ಸಾಲದು. ಭಾಷಾ ಸಂಪತ್ತು ಸಂಪನ್ನಗೊಳಿಸುವ ಹಾಗೂ ಮತ್ತಷ್ಟು ಗಟ್ಟಿಗೊಳಿಸುವ ಪ್ರಕ್ರಿಯೆಗಳು ಹೆಚ್ಚೆಚ್ಚು ನಡೆಯಬೇಕಿದೆ. ಆ ನೆಲೆಯಲ್ಲಿ ಕುಂದಾಪ್ರ ಕನ್ನಡ ದಿನಾಚರಣೆ ಒಂದು ವೇದಿಕೆಯಾಗಲಿ ಎಂಬುದು ‘ಕುಂದಾಪ್ರ ಡಾಟ್ ಕಾಂ’ನ ಆಶಯ.

    Click here

    Click here

    Click here

    Call us

    Call us

    ಇದನ್ನೂ ಓದಿ:
    ► ಜು.28ರಂದು ಕುಂದಾಪುರ, ಬೆಂಗಳೂರು, ದುಬೈ ಸೇರಿದಂತೆ ವಿವಿಧೆಡೆ ಕುಂದಾಪ್ರ ಕನ್ನಡ ದಿನಾಚರಣೆ – https://kundapraa.com/?p=60948 .

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಹುಲಿಯಾಸ, ವಿಟ್ಲಪಿಂಡಿ… ಆ ಶ್ರೀ ಕೃಷ್ಣ ಜನ್ಮಾಷ್ಟಮಿ ರಂಗ್ ಕಾಣ್ದೇ ಇಪ್ಪುಕ್ ಆತ್ತೇ

    07/09/2023

    ಬೆಂಗ್ಳೂರಂಗೂ ಕುಂದಾಪ್ರದ್ದೇ ಮಾತ್. ಕುಂದಾಪ್ರ ಕನ್ನಡ ಹಬ್ಬದಲ್ಲಿ ಮೇಳೈಸಿದ ಭಾವ ಸಂಭ್ರಮ

    24/07/2023

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d