Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿಶು ಮತ್ತು ತಾಯಿ ಮರಣ ನಿಯಂತ್ರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸೂಚನೆ
    ಉಡುಪಿ ಜಿಲ್ಲೆ

    ಶಿಶು ಮತ್ತು ತಾಯಿ ಮರಣ ನಿಯಂತ್ರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸೂಚನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಶಿಶು ಮತ್ತು ತಾಯಿ ಮರಣ ಸಂಖ್ಯೆಯನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ ಪ್ರಾರಂಭಿಕ ಹಂತದಲ್ಲಿಯೇ ಗರ್ಭಿಣಿ ಸ್ತ್ರೀಯರಿಗೆ ತಾಯಿ ಕಾರ್ಡ್ ನೀಡುವುದರೊಂದಿಗೆ, ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ತಮ್ಮ ಕಚೇರಿ ಸಭಾಂಗಣದಲ್ಲಿ, ಶಿಶು ಮತ್ತು ತಾಯಿ ಮರಣ ನಿಯಂತ್ರಣ ಹಾಗೂ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

    ಸರ್ಕಾರ ಶಿಶು ಹಾಗೂ ತಾಯಿ ಮರಣ ಪ್ರಮಾಣ ತಡೆಗಟ್ಟಲು ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದರೂ ಸಹ ಲಾಕ್ಡೌನ್ ಅವಧಿಯಲ್ಲಿ ಶಿಶು ಮತ್ತು ತಾಯಿ ಮರಣ ಪ್ರಮಾಣವು ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಾಗಿರುವುದು ಕಂಡುಬಂದಿದೆ, ಕೊರೋನಾ ಸೋಂಕಿಗೆ ಚಿಕಿತ್ಸೆ ನೀಡುವುದರ ಜೊತೆಗೆ ಇತರೆ ಸಾಮಾನ್ಯ ಕಾಯಿಲೆ ಹಾಗೂ ಗರ್ಭಿಣಿ ಸ್ತ್ರೀಯರ ಪರೀಕ್ಷೆಗೆ ಒತ್ತು ನೀಡಬೇಕು ಎಂದರು.

    ಜಿಲ್ಲೆಯಲ್ಲಿ ಮಾರ್ಚಿನಿಂದ ಜೂನ್ವರೆಗೆ 8 ತಾಯಿ ಮರಣ ಹಾಗೂ ಫೆಬ್ರವರಿಯಿಂದ ಜೂನ್ವರೆಗೆ 52 ಶಿಶು ಮರಣ ಪ್ರಕರಣಗಳು ಆಗಿವೆ ಎಂದವರು ಅರಿವಿನ ಕೊರತೆ, ಸಮಯಕ್ಕೆ ಸರಿಯಾಗಿ ಸಿಗದ ಅರೋಗ್ಯ ವೈದ್ಯಕೀಯ ಸೇವೆ, ಕಡಿಮೆ ತೂಕ, ಅಪೌಷ್ಠಿಕತೆ, ಹೃದಯ ಸಂಬಂಧಿ ಸಮಸ್ಯೆ, ಅವಧಿಗೆ ಮುಂಚೆ ಹೆರಿಗೆ ಸೇರಿದಂತೆ ಮತ್ತಿತರ ಕಾರಣದಿಂದ ತಾಯಿ ಮತ್ತು ಶಿಶು ಮರಣಗಳು ಹೆಚ್ಚಾಗುವ ಸಾಧ್ಯತೆ ಇವೆ ಹೀಗಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದರು.

    ತಾಯಿ ಮಗು ಮರಣವು ಆಕಸ್ಮಿಕವಲ್ಲದೇ, ವೈದ್ಯರುಗಳ ನಿರ್ಲಕ್ಷö್ಯದಿಂದ ಉಂಟಾಗಿದ್ದರೆ ಅಂತಹವುಗಳಲ್ಲಿ ಪ್ರಾರಂಭದಿಂದ ಕೊನೆಯ ತನಕ ನೀಡಿರುವ ಚಿಕಿತ್ಸೆಯ ಬಗ್ಗೆ ತನಿಖೆ ಕೈಗೊಂಡು ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

    Click here

    Click here

    Click here

    Call us

    Call us

    ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗರ್ಭಿಣಿ ಮಹಿಳೆಯರಿಗೆ ನೀಡುವ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕಾರ್ಯವನ್ನು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಮಾಡಬೇಕು, ಜೊತೆಗೆ ಅವರಿಗೆ ಉತ್ತಮ ಆರೋಗ್ಯವನ್ನು ಕಾಪಾಡಲು ಸಲಹೆ ನೀಡಬೇಕು ಎಂದರು.

    ಮಕ್ಕಳಿಗೆ ನಿಗಧಿತ ಕಾಲಾವಧಿಯಲ್ಲಿ ಸಾಮಾನ್ಯ ಚುಚ್ಚುಮದ್ದು ನೀಡುವ ಕಾರ್ಯಕ್ರಮಗಳನ್ನು ತಪ್ಪದೇ ಅನುಷ್ಠಾನಗೊಳಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಕೋವಿಡ್ ಲಸಿಕೆಯನ್ನು ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬರುತ್ತಿರುವ ಪ್ರದೇಶಗಳಲ್ಲಿನ ಜನರಿಗೆ, ಗರ್ಭಿಣಿ ಸ್ತ್ರೀಯರಿಗೆ, ಅಪೌಷ್ಠಿಕತೆ ಹೊಂದಿರುವವರಿಗೆ, ಎಂಡೋ ಸಲ್ಫಾನ್ ಪೀಡಿತರಿಗೆ ಆದ್ಯತೆ ಮೇಲೆ ನೀಡಬೇಕೆಂದು ಸೂಚನೆ ನೀಡಿದರು.

    ಮಕ್ಕಳನ್ನು ಕೋವಿಡ್ 3ನೇ ಅಲೆಯಿಂದ ತಡೆಯುವ ನಿಟ್ಟಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ಮಹತ್ವಕಾಂಕ್ಷೆಯ ಕಾರ್ಯಕ್ರಮವಾದ ವಾತ್ಸಲ್ಯ ಯೋಜನೆಯಡಿ, ಮಕ್ಕಳ ಆರೋಗ್ಯ ತಪಾಸಣೆಯನ್ನು ಜಿಲ್ಲೆಯ ಪ್ರತಿಯೊಬ್ಬ ಮಕ್ಕಳಿಗೂ ಮಾಡುವ ಕಾರ್ಯವನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದಿ ಇಲಾಖೆ ಅಗತ್ಯ ಸಹಕಾರ ನೀಡಬೇಕೆಂದು ಸೂಚನೆ ನೀಡಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಮಾತನಾಡಿ, ಗರ್ಭಿಣಿ ಸ್ತ್ರೀಯರನ್ನು ನಿಯಮಿತವಾಗಿ ಪರೀಕ್ಷೆ ಮಾಡುವಾಗ ಅವರಿಗೆ ರಕ್ತದೊತ್ತಡ, ಮಾನಸಿಕ ಒತ್ತಡ ಸೇರಿದಂತೆ ಮತ್ತಿತರ ಕಾಯಿಲೆಗಳು ಇರುವ ಬಗ್ಗೆ ತಪ್ಪದೇ ಪರಿಶೀಲಿಸಬೇಕು, ಒಂದೊಮ್ಮೆ ಇದ್ದಲ್ಲಿ ಅವರಿಗೆ ಪ್ರಾರಂಭಿಕ ಹಂತದಿಂದಲೇ ಚಿಕಿತ್ಸೆ ಹಾಗೂ ಸಮಾಲೋಚನೆಗಳನ್ನು ಕೈಗೊಳ್ಳುವುದರಿಂದ ಕೊನೆಯ ಹಂತದಲ್ಲಿ ಆರೋಗ್ಯ ತೊಂದರೆ ಉಂಟಾಗುವುದನ್ನು ತಡೆಯಲು ಸಾಧ್ಯವಾಗುತ್ತದೆ ಎಂದರು.

    ವಾತ್ಸಲ್ಯ ಯೋಜನೆಯಡಿ ಮಕ್ಕಳ ತಪಾಸಣಾ ಕಾರ್ಯಕ್ರಮವು ಜಿಲ್ಲೆಯಲ್ಲಿ ಶೇ. 65.73 ರಷ್ಟು ಶಾಲೆಗಳು, 77.31 ರಷ್ಟು ಅಂಗನವಾಡಿಗಳಲ್ಲಿ ಆರೋಗ್ಯ ತಪಾಸಣೆಯನ್ನು ಕೈಗೊಳ್ಳಲಾಗಿದೆ ಎಂದ ಅವರು, ಪೋಷಕರುಗಳು ಮಕ್ಕಳನ್ನು ಆರೋಗ್ಯ ತಪಾಸಣೆಗೆ ತಪ್ಪದೇ ಕರೆ ತರಬೇಕೆಂದು ತಿಳಿಸಿದರು.

    ಸಭೆಯಲ್ಲಿ ನಗರಸಭೆ ಅದ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಲಸಿಕೆ ಅಧಿಕಾರಿ ಡಾ. ಎಂ.ಜಿ.ರಾಮ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    2 + 16 =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.