Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಹರೀಶ್ ಭಟ್ ಪಕ್ಷಿವನ ಆಕ್ಟ್ ಟು ರಿಸ್ಟೋರ್ ಅಭಿಯಾನಕ್ಕೆ ಆಯ್ಕೆ
    alvas nudisiri

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಹರೀಶ್ ಭಟ್ ಪಕ್ಷಿವನ ಆಕ್ಟ್ ಟು ರಿಸ್ಟೋರ್ ಅಭಿಯಾನಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದರೆ:
    ಯುನೈಟೆಡ್ ನೇಶನ್ಸ್ ಎನ್ವಿರಾನ್ಮೆಂಟ್ ಪ್ರೋಗ್ರಾಮ್ ಹಾಗೂ ಸೆಂಟರ್ ಫಾರ್ ಎನ್ವಿರಾನ್ಮೆಂಟ್ ಎಜ್ಯುಕೇಶನ್ ಜಂಟಿಯಾಗಿ ಭಾರತದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸುತ್ತಿದ್ದು, ಇದರ ಭಾಗವಾಗಿ ಆಕ್ಟ್ ಟು ರಿಸ್ಟೋರ್’ ಎಂಬ ಆರು ತಿಂಗಳ ಪರಿಸರ ಅಭಿಯಾನವನ್ನು ಆಯೋಜಿಸಿವೆ. ಪರಿಸರ ಸಂಬಂಧೀ ಮಾಹಿತಿ- ಶಿಕ್ಷಣ- ಸಂವಹನ ಅಭಿಯಾನ ಇದಾಗಿದ್ದು, ಇದರ ಭಾಗವಾಗಿ ವಿವಿಧ ಪರಿಸರ ವ್ಯವಸ್ಥೆಗಳ ಬಗ್ಗೆ ಪ್ರತೀ ತಿಂಗಳೂ ವೈಜ್ಞಾನಿಕ ಪೋಸ್ಟರ‍್ಗಳನ್ನು ಬಿಡುಗಡೆಗೊಳಿಸಲಾಗುತ್ತದೆ. ಈ ಅಭಿಯಾನದ ಜುಲೈ ತಿಂಗಳ ಪೋಸ್ಟರ್‌ನಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಿರ್ಮಿಸಲಾಗಿರುವ ಹರೀಶ್ ಭಟ್ ಪಕ್ಷಿವನಕ್ಕೆ ಸ್ಥಾನ ಸಿಕ್ಕಿದೆ.

    Click Here

    Call us

    Click Here

    ಯುನೈಟೆಡ್ ನೇಶನ್ಸ್ ಎನ್ವಿರಾನ್ಮೆಂಟ್ ಪ್ರೋಗ್ರಾಮ್ ಹಾಗೂ ಸೆಂಟರ್ ಫಾರ್ ಎನ್ವಿರಾನ್ಮೆಂಟ್ ಎಜ್ಯುಕೇಶನ್ ಪರಿಸರದ ಕುರಿತು ವಾರ್ಷಿಕ ಹಾಗೂ ದಶಕದ ಅವಧಿಯ ಕಾರ್ಯಗಳನ್ನು ನಡೆಸುತ್ತ ಬಂದಿದೆ. ಪ್ರತಿಬಾರಿಯೂ ವಿವಿಧ ಮುಖ್ಯ ಪರಿಸರ ವಿ?ಯಗಳ ಕುರಿತು ಜಾಗೃತಿ ಕಾರ್ಯಗಳನ್ನು ಮಾಡುತ್ತ ಬಂದಿದ್ದು, ಈ ಬಾರಿಯ ಥೀಮ್ ‘ಇಕೋಸಿಸ್ಟಮ್ ರಿಸ್ಟೋರೇಶನ್’ ಆಗಿದೆ. ಕೃಷಿ ಪರಿಸರ, ಹುಲ್ಲುಗಾವಲುಗಳು, ಪರ್ವತಗಳು, ತೇವಭೂಮಿ, ಸಂರಕ್ಷಿತ ಅಭಯಾರಣ್ಯಗಳು, ಕೆರೆ, ನದಿ ಹಾಗೂ ಕರಾವಳಿ ಪ್ರದೇಶಗಳ ಮೇಲಾಗುತ್ತಿರುವ ದುಷ್ಪರಿಣಾಮಗಳನ್ನು ತಡೆದು ಅವುಗಳನ್ನು ಸಂರಕ್ಷಿಸುವುದು ಈ ವಾರ್ಷಿಕ ಕಾರ್ಯಗಳ ಮುಖ್ಯ ಉದ್ದೇಶವಾಗಿದೆ. ದಶಕದ ಚಟುವಟಿಕೆಗಳು ದೂರದೃಷ್ಟಿಯನ್ನು ಹೊಂದಿದ್ದು, ಪರಿಸರ ವ್ಯವಸ್ಥೆಯ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು ಅದರ ಉದ್ದೇಶ. ವಾತಾವರಣದ ತೀವ್ರ ಬದಲಾವಣೆಯ ಉಪಶಮನ, ನೀರು ಮತ್ತು ಆಹಾರ ಭದ್ರತೆ, ಬಡತನ ನಿರ್ಮೂಲನೆ, ಆರ್ಥಿಕ ಪ್ರಗತಿ, ಜೀವವೈವಿಧ್ಯತೆಯ ಸಂರಕ್ಷಣೆ ಹೀಗೆ ವಿವಿಧ ವಿಷಯಗಳಿಗೆ ಶಾಶ್ವತ ಪರಿಸರಸ್ನೇಹಿ ಪರಿಹಾರಗಳನ್ನು ನೀಡುವುದು ದಶಕದ ಕಾರ್ಯಗಳ ಧ್ಯೇಯ.

    ಇದೆಲ್ಲದರ ಭಾಗವಾಗಿ ಆಕ್ಟ್ ಟು ರಿಸ್ಟೋರ್ ಎಂಬ ಆರು ತಿಂಗಳ ಅಭಿಯಾನವನ್ನು ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು, ಉಪನ್ಯಾಸಕರು, ಯುವ ಸಂಘಟನೆಗಳು, ಎನ್‌ಜಿಓಗಳು ಪತ್ರಕರ್ತರು, ಕಾರ್ಪೋರೇಟ್ ಕಂಪನಿಗಳು ಸೇರಿದಂತೆ ಪರಿಸರ ವ್ಯವಸ್ಥೆಗಳ ಮುಖ್ಯ ಬಳಕೆದಾರರನ್ನು ಒಳಗೊಂಡು ಜಾಗೃತಿ ಕಾರ್ಯಗಳನ್ನು ಮಾಡುವುದು ಇದರ ಮುಖ್ಯ ಉದ್ದೇಶ. ಪ್ರತಿ ತಿಂಗಳೂ ವಿವಿಧ ಪರಿಸರ ವ್ಯವಸ್ಥೆಗಳ ಕುರಿತು ಪೋಸ್ಟರ್ ಮೂಲಕ ಹೆಚ್ಚಿನ ಮಾಹಿತಿಯನ್ನು ಜನರಿಗೆ ನೀಡಿ, ಅದರ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ನಾಶವಾಗುತ್ತಿರುವ ಪರಿಸರ ವ್ಯವಸ್ಥೆಯ ಉಳಿವಿಗಾಗಿ ಮಾಡಿದ ವಿನೂತನ ಪ್ರಯೋಗಗಳು, ಹಾಗೂ ಅದಕ್ಕೆ ಸಂಬಂಧಿಸಿದ ಯಶಸ್ವೀ ಪರಿಸರ ಮಾದರಿಗಳನ್ನು ದೇಶಾದ್ಯಂತ ಈ ಪೋಸ್ಟರ್‌ಗಳ ಮೂಲಕ ಪ್ರಚುರಪಡಿಸಲಾಗುತ್ತದೆ. ಈ ಬಾರಿಯ ಜುಲೈ ತಿಂಗಳ ಪೋಸ್ಟರ್ ಗಾಗಿ ‘ಅರಣ್ಯ ಪರಿಸರ ವ್ಯವಸ್ಥೆ’ ಮುಖ್ಯ ವಿಷಯವಾಗಿತ್ತು. ಇದಕ್ಕೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಿರ್ಮಿಸಿರುವ ಹರೀಶ್ ಭಟ್ ಪಕ್ಷಿವನದ ಮಾದರಿ ಪ್ರಯೋಗ ಆಯ್ಕೆಯಾಗಿದೆ. ರಾಷ್ಟ್ರದಾದ್ಯಂತ ನಡೆದ ಹಲವು ವಿನೂತನ ಪ್ರಯೋಗಗಳು ಆಯ್ಕೆ ಸಮಿತಿಯ ಮುಂದೆ ಬಂದಿದ್ದವು. ಸುದೀರ್ಘ ಪರಿಶೀಲನೆಯ ಬಳಿಕ ಆಳ್ವಾಸ್‌ನ ಈ ನೂತನ ಪ್ರಯೋಗ ಆಯ್ಕೆಯಾಗಿ ರಾಷ್ಟ್ರಮಟ್ಟದ ಜಾಗೃತಿ ಪೋಸ್ಟರನಲ್ಲಿ ಸ್ಥಾನ ಪಡೆದಿದೆ ಎಂದು ಸೆಂಟರ್ ಫಾರ್ ಎನ್ವಿರಾನ್ಮೆಂಟ್ ಎಜ್ಯುಕೇಶನ್‌ನ ದಕ್ಷಿಣ ವಲಯದ ಸ್ಟೇಟ್ ಪ್ರೊಜೆಕ್ಟ್ ಕೊಆರ್ಡಿನೇಟರ್ ವ್ರಿಜುಲಾಲ್ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    30/04/2026
    Leave A Reply Cancel Reply

    seventeen + 20 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.