Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ಲಾಕ್‌ಮೇಲ್: ‘ಪ್ರಸಿದ್ಧ ಪತ್ರಿಕೆ’ ಸಂಪಾದಕನ ವಿರುದ್ಧ ದೂರು
    ಕುಂದಾಪ್ರದ್ ಸುದ್ಧಿ

    ಬ್ಲಾಕ್‌ಮೇಲ್: ‘ಪ್ರಸಿದ್ಧ ಪತ್ರಿಕೆ’ ಸಂಪಾದಕನ ವಿರುದ್ಧ ದೂರು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಪತ್ರಿಕೆಯೊಂದರ ಸಂಪಾದಕನೆಂದು ಹೇಳಿಕೊಂಡ ವ್ಯಕ್ತಿಯೋರ್ವ ಕುಂದಾಪುರದ ವಿಠಲವಾಡಿಯ ಉದ್ಯಮಿ ಗಣೇಶ ಪೂಜಾರಿ ಎಂಬುವವರಿಗೆ ದೂರವಾಣಿ ಕರೆಮಾಡಿ ಹಣದ ಬೇಡಿಕೆಯಿಟ್ಟು ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು ಈ ಬಗ್ಗೆ ಕುಂದಾಪುರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    Click Here

    Call us

    Click Here

    ಘಟನೆಯ ವಿವರ:

    ‘ಪ್ರಸಿದ್ಧ ಪತ್ರಿಕೆ’ ಯ ಸಂಪಾದಕನೆನ್ನಲಾದ ಸಂತೋಷ್ ಸುವರ್ಣ ಎಂಬುವವರು ಕುಂದಾಪುರದ ಪ್ರಥಮ ದರ್ಜೆ ವಿದ್ಯುತ್ ಗುತ್ತಿಗೆದಾರ ಗಣೇಶ್ ಪೂಜಾರಿ ಎಂಬುವವರಿಗೆ ಸೆ.೧ರಂದು ಕರೆಮಾಡಿ, ತಾವು ಒಂದು ಅನೈತಿಕ ಚಟುವಟಿಕೆಯಲ್ಲಿ ಭಾಗಿಯಾಗಿದ್ದು ಅದಕ್ಕೆ ಪೂರಕವಾಗಿ ಕಾಗದ ಪತ್ರಗಳು ಹಾಗೂ ಪೋನ್ ಕರೆಗಳು ನಮಗೆ ಬರುತ್ತಿದೆ. ಈ ಬಗ್ಗೆ ನಮ್ಮ ಪತ್ರಿಕೆಯಲ್ಲಿ ಬರೆಯುವುದಾಗಿ ಹೇಳಿಕೊಂಡಿದ್ದ. ಇದೆಲ್ಲ ಸುಳ್ಳೆಂದು ಹೇಳಿದರೂ ಮತ್ತೆ ಮತ್ತೆ ಕರೆಮಾಡಿ ಬೇರೆ ಕಾರಣ ರೂ. 30,000ದಿಂದ 1,20,000ದ ವರೆಗೆ ಹಣದ ಬೇಡಿಕೆ ಒಡ್ಡಿದ್ದಾರೆ ಎಂದು ಗಣೇಶ್ ಪೂಜಾರಿ ದೂರು ನೀಡಿದ್ದಾರೆ.

    ಸಂತೋಷ್ ಸುವರ್ಣ ಕರೆ ಮಾಡಿದಾಗ ಓದುಗರ ಬಳಗ ವಿಠಲವಾಡಿ ಹಾಗೂ ಅಪರಿಚಿತ ಸಂಖ್ಯೆಯಿಂದ ದೂರವಾಣಿ ಕರೆಗಳು ಬರುತ್ತಿದ್ದು ನಿಮ್ಮ ಹಗರಣಗಳ ವರದಿಯನ್ನು ಪ್ರಕಟಿಸಲು ಒತ್ತಡ ಹೆಚ್ಚುತ್ತಿದೆ. ನೀವು ಹಣ ನೀಡದಿದ್ದರೇ ಪ್ರಕಟಿಸಲೇಬೇಕಾಗುತ್ತದೆ ಎಂದು ಸಂತೋಷ್ ಸುವರ್ಣ ಹೇಳಿದ ಬಗ್ಗೆ ಅವರು ಕಳುಹಿಸಿದ ಮೆಸೆಜ್, ಕರೆಯ ರೆಕಾರ್ಡ್ ಕಾಪಿಯನ್ನು ಗಣೇಶ್ ಪೂಜಾರಿ ಪೊಲೀಸರಿಗೆ ನೀಡಿದ್ದಾರೆ.

    ಸಂಘದಿಂದ ಅಮಾನತುಗೊಳಿಸಲು ಆಗ್ರಹ

    Click here

    Click here

    Click here

    Call us

    Call us

    ಪತ್ರಿಕೆಯ ಹೆಸರು ಹೇಳಿಕೊಂಡು ಇಲ್ಲಸಲ್ಲದ ಆರೋಪಗಳನ್ನು ಮಾಡಿ ಬೆದರಿಕೆಯೊಡ್ಡಿ, ಹಣದ ಬೇಡಿಕೆಯನ್ನಿಟ್ಟ ಸಂತೋಷ್ ಸುವರ್ಣ ಜಿಲ್ಲಾ ಇಲ್ಲವೇ ರಾಜ್ಯದ ಪತ್ರಕರ್ತರ ಸಂಘದ ಸದಸ್ಯರಾಗಿದ್ದರೇ ಸಂಘದಿಂದ ವಜಾಗೊಳಿಸುವಂತೆ ಗಣೇಶ್ ಪೂಜಾರಿ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಕಮಲಾಕ್ಷ ಹಾಗೂ ರಮೇಶ್ ಕುಮಾರ್ ಹಾಜರಿದ್ದರು.

    Blackmail kundapura Prasidda patrike
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025

    ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    18/12/2025

    ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.