ಕುಂದಾಪುರ: ಇಂದು ಕುಂದಾಪುರ ನಗರದಲ್ಲಿ ಭವ್ಯ ಪುರಮೆರವಣಿಗೆಯೊಂದಿಗೆ ರಜತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಕುಂದಾಪುರ ಶ್ರೀ ಮಹಾಕಾಳಿ ದೇವಸ್ಥಾನ ಗಣೇಶೋತ್ಸವದ ಭವ್ಯ ಪುರಮೆರವಣಿಗೆ ನಡೆಯಲಿದೆ. ಪಂಚಗಂಗಾವಳಿ ನದಿಯಲ್ಲಿ ನಿರ್ಮಿಸಿದ ವೇದಿಕೆಯಲ್ಲಿ ಶ್ರೀ ಆಂಜನೇಯ ವ್ಯಾಯಾಮ ಶಾಲೆಯ ಸದಸ್ಯರಿಂದ ಮೈನವಿರೇಳಿಸುವ ಬೆಂಕಿ ಆಟ ಮುಂತಾದ ರಂಜನೆಯ ಬಳಿಕ ಪಂಚಗಂಗಾವಳಿ ನದಿಯಲ್ಲಿ ಗಣಪತಿಯ ವಿಗ್ರಹವನ್ನು ಜಲಸ್ಥಂಭನ ಮಾಡಲಾಗುವುದು.
ಸುನಿಲ್ ಹೆಚ್. ಜಿ. ಬೈಂದೂರು
ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.




