ಕುಂದಾಪುರ: ನಾಯ್ಕನಕಟ್ಟೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಸೇವಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆಯು ದೇವಸ್ಥಾನ ಅರ್ಚಕರಾದ ಶ್ರೀ ಬಾಲಕೃಷ್ಣ ಭಟ್ ಹಾಗೂ ವೇದ ಮೂರ್ತಿ ಗಣೇಶ ಭಟ್ ಇವರ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ ಜರಗಿತು. ರಾತ್ರಿ ಅಲಂಕಾರ ಪೂಜೆ ಮತ್ತು ದಾನಿಗಳಿಗೆ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವರಮಹಾಲಕ್ಷ್ಮೀ ಸೇವಾ ಸಮಿತಿಯ ಸರ್ವ ಸದಸ್ಯರು ವೆಂಕಟರಮಣ ಸೇವಾ ಸಮಿತಿಯ ಸದಸ್ಯರು ಸಹಕರಿಸಿದರು.
ನಾಯ್ಕನಕಟ್ಟೆ ಜಿ.ಎಸ್.ಬಿ ಮಹಿಳೆಯರಿಂದ ಸಾಮೂಹಿಕ ಚೂಡಿ ಪೂಜೆ
ನಾಯ್ಕನಕಟ್ಟೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಸೇವಾ ಸಮಿತಿಯಿಂದ ಜಿ.ಎಸ್.ಬಿ ಮಹಿಳೆಯರಿಂದ ಸಾಮೂಹಿಕ ಚೂಡಿ ಪೂಜೆ ಕಾರ್ಯಕ್ರಮವು ವಿಜೃಂಭಣೆಯಿಂದ ಜರಗಿತು. ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.