ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಯಡ್ತಾಡಿ ಯುವವಾಹಿನಿ ಘಟಕದಿಂದ ರುದ್ರಭೂಮಿ ಸ್ವಚ್ಛತೆ ಮತ್ತು ಜಲ ಸಂರಕ್ಷಣೆಗೆ ತಡೆಗೋಡೆ ನಿರ್ಮಾಣ ಕಾರ್ಯ ಮಾಡುವ ನಡೆಯಿತು.
ಯಡ್ತಾಡಿ ಹಿಂದೂ ರುದ್ರಭೂಮಿ ಸ್ವಚ್ಛತೆ ಹಾಗೂ ಪೋಲಾಗುತ್ತೀರುವ ನೀರನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಸಲುವಾಗಿ ತಡೆಗೋಡೆ ನಿರ್ಮಾಣ ಮಾಡುವ ಕ್ರಾಂತಿಕಾರಿ ಹೆಜ್ಜೆ ಇಡುವ ಮೂಲಕ ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡರು.
ಯುವವಾಹಿನಿ ಸದಸ್ಯರ ಈ ಸಮಾಜಮುಖಿ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದರು. ಈ ಶ್ರಮದಾನ ಕಾರ್ಯದಲ್ಲಿ ಘಟಕದ ಅಧ್ಯಕ್ಷರಾದ ರಾಜು ಪೂಜಾರಿ ಕಾರ್ಯದರ್ಶಿ ಅಜಿತ್ ಕುಮಾರ್ ಎಸ್ ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು .