Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ನಾಗತಿಹಳ್ಳಿ ಚಂದ್ರಶೇಖರ್ ಗೆ ಗುಲ್ವಾಡಿ ಗೌರವ ಪ್ರಧಾನ
    ಊರ್ಮನೆ ಸಮಾಚಾರ

    ಡಾ. ನಾಗತಿಹಳ್ಳಿ ಚಂದ್ರಶೇಖರ್ ಗೆ ಗುಲ್ವಾಡಿ ಗೌರವ ಪ್ರಧಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಎಲ್ಲರೊಂದಿಗೆ ಬೆರತು ಬದುಕುವಂತೆ ಮಾಡುವುದೇ ನಮ್ಮ ದೊಡ್ಡ ಜವಾಬ್ದಾರಿ: ಡಾ. ನಾಗತಿಹಳ್ಳಿ

    Click Here

    Call us

    Click Here

    ಕುಂದಾಪುರ: ಇಂದು ಪರಸ್ಪರ ಒಬ್ಬರಿಗೊಬ್ಬರು ಆತುಕೊಳ್ಳುತ್ತಾ, ಮೆಚ್ಚಿಕೊಳ್ಳುತ್ತಾ, ಪ್ರಾಮಾಣಿಕವಾಗಿ ವಿಮರ್ಷಿಸುತ್ತಾ ಮುಂದುವರಿಯಬೇಕಾದ ತುರ್ತು ಎದುರಾಗಿದೆ. ಎಲ್ಲರೂ ಬೆರೆತು ಬದುಕುವಂತೆ ಮಾಡುವುದೇ ನಮಗೂ ನಿಮಗೂ ಇರುವ ದೊಡ್ಡ ಜವಾಬ್ದಾರಿಯಾಗಿದೆ. ಅದರ ಅಗತ್ಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂಬುದನ್ನು ನಾವು ಸೂಕ್ಷ್ಮವಾಗಿ ಗಮನಿಸಬೇಕಿದೆ ಎಂದು ಖ್ಯಾತ ಸಾಹಿತಿ ಡಾ. ನಾಗತಿಹಳ್ಳಿ ಚಂದ್ರಶೇಖರ ಹೇಳಿದರು.

    ಅವರು ಗುಲ್ವಾಡಿಯ ತೋಟದಮನೆಯಲ್ಲಿ ಗುಲ್ವಾಡಿ ಸಾಂಸ್ಕೃತಿಕ ಪ್ರತಿಷ್ಠಾನವು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸಹಕಾರದೊಂದಿಗೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಪತ್ರಕರ್ತ ಸಂತೋಷಕುಮಾರ್ ಗುಲ್ವಾಡಿ ಸ್ಮಾಕರ ಕೊಡಮಾಡುವ ಗುಲ್ವಾಡಿ ಗೌರವ ಪುರಸ್ಕಾರವನ್ನು ಸ್ವೀಕರಿಸಿ ಮಾತನಾಡಿದರು.

    ಪತ್ರಿಕೋದ್ಯಮದಲ್ಲಿ ಹೊಸತನವನ್ನು ತಂದ ಸಂತೋಷಕುಮಾರ್ ಗುಲ್ವಾಡಿ ಅವರ ಹೆಸರಿನ ಈ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ಖುಷಿ ನೀಡಿದೆ. ಎಷ್ಟೇ ದೇಶ ಸುತ್ತಿ ಬಂದರೂ ನಾವಿರುವ ಜಾಗವನ್ನು ಸಾಂಸ್ಕೃತಿಕ ಕೇಂದ್ರವನ್ನಾಗಿ ರೂಪಿಸುವುದು ಬಹಳ ಮುಖ್ಯವಾದುದು. ಆ ನಿಟ್ಟಿನಲ್ಲಿ ಯಾಕುಬ್ ಖಾದರ್ ಗುಲ್ವಾಡಿಯವರ ಪ್ರಯತ್ನ ಶ್ಲಾಘನೀಯ ಎಂದರು.

    ಗುಲ್ವಾಡಿ ಗೌರವ ಪ್ರದಾನಿಸಿದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮಾತನಾಡಿ ಕಾಲೇಜು ದಿನಗಳಿಂದಲೇ ನನ್ನ ಒಡನಾಡಿಯಾಗಿದ್ದ ಸಂತೋಷಕುಮಾರ್ ಗುಲ್ವಾಡಿ ಅವರ ಸಾಂಸ್ಕೃತಿಕ ಒಲವು ವಿಶೇಷವಾಗಿತ್ತು. ಸ್ವಯತ್ತತೆಯ ಹಸಿವು ಹೊಂದಿದ್ದ ಅವರು ಪತ್ರಿಕೋದ್ಯಮದಲ್ಲಿ ಒಂದು ಶ್ರೇಷ್ಠ ಮಾರ್ಗವನ್ನು ಸೃಷ್ಟಿಸಿದವರು. ಅವರು ಎಲೆಮರೆಯ ಕಾಯಿಯಂತಿದ್ದ ಅದೆಷ್ಟೋ ಪ್ರತಿಭಾವಂತರನ್ನು ಬೆಳಕಿಗೆ ತಂದವರಲ್ಲಿ ಗುಲ್ವಾಡಿ ಅಗ್ರಪಂಥಿಯಲ್ಲಿ ನಿಲ್ಲತ್ತಾರೆ ಎಂದು ತಮ್ಮ ಸ್ನೇಹದ ದಿನಗಳನ್ನು ನೆನಪಿಸಿಕೊಂಡರು.

    Click here

    Click here

    Click here

    Call us

    Call us

    ಪ್ರತಿಷ್ಠಾನದ ಪುರಸ್ಕಾರವನ್ನು ಅಕ್ಕ ಅಮೇರಿಕಾದ ಅಧ್ಯಕ್ಷ ಡಾ| ಹಳೆಕೋಟೆ ವಿಶ್ವಾಮಿತ್ರ, ಎಂ. ಸುಬ್ರಮಣಿ, ಜನಾಬ್ ಹರೆಕಳ್ ಹಾಜಬ್ಬ, ಡಾ| ವಿ. ನಾಗರಾಜು, ನಿಖಿಲ್ ಮಂಜೂ ಲಿಂಗಯ್ಯ ಅವರಿಗೆ ನೀಡಿ ಗೌರವಿಸಲಾಯಿತು.

    ಇದೇ ಸಂದರ್ಭದಲ್ಲಿ ಯಾಕೂಬ್ ಖಾದರ್ ಗುಲ್ವಾಡಿ ಅವರ ಪ್ರವಾಸ ಕಥನ ’ನನ್ನ ಫಾರಿನ್ ಟೂರಿಂಗ್ ಟಾಕಿಸ್’ ಪುಸ್ತಕ ಬಿಡುಗಡೆಗೊಳಿಸಲಾಯಿತು. ಮಾಜಿ ಜಿಲ್ಲಾ ರೋಟರಿ ಗವರ್ನರ್ ಎ.ಎಸ್.ಎನ್. ಹೆಬ್ಬಾರ್ ಕೃತಿಯ ಪರಿಚಯ ಮಾಡಿದರು.

    ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲ ಪೂಜಾರಿ, ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಬಿ.ಎ. ಮೊಹಮ್ಮದ್ ಹನೀಫ್, ಗುಲ್ವಾಡಿ ಗ್ರಾ.ಪಂ ಅಧ್ಯಕ್ಷೆ ಸುಪ್ರಿತಾ, ಹಟ್ಟಿಯಂಗಡಿ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲ ಶರಣ್‌ಕುಮಾರ್, ಮಾವಿನಕಟ್ಟೆ ಅಲ್‌ಬದ್ರಿಯಾ ಜುಮ್ಮಾ ಮಸೀದಿಯ ಅಧ್ಯಕ್ಷ ಹಾಜಿ ಬಿ. ಎಂ. ಚೇರಿಯಬ್ಬ ಸಾಹೇಬ್, ಗುಲ್ವಾಡಿ ಮೆಹರಾಜ್ ಜುಮ್ಮಾ ಮಸೀದಿಯ ಅಧ್ಯಕ್ಷ ಜನಾಬ್ ಫಕೀರ್ ಹಸನಬ್ಬ, ಗುಲ್ವಾಡಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಜನಾಬ್ ಮೊಹಮ್ಮದ್ ಅಲಿ, ಜಯಪ್ರಕಾಶ್ ರಾವ್ ಪುತ್ತೂರು ಮೊದಲಾದವರು ಉಪಸ್ಥಿತರಿದ್ದರು.

    ಕಾರ್ಯಕ್ರಮದ ಪೂರ್ವದಲ್ಲಿ ಕನ್ನಡ ಹಾಗೂ ಬ್ಯಾರಿ ಭಾಷೆಯ ಜನಪದಗೀತೆಗಳನ್ನು ಹಾಡಿಲಾಯಿತು.

    ಗುಲ್ವಾಡಿ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಧಾನ ಕಾರ್ಯನಿರ್ವಾಹಕ ಯಾಕೂಬ್ ಖಾದರ್ ಗುಲ್ವಾಡಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಗ. ನಾ. ಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d