Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀಗುರು ನಿತ್ಯಾನಂದ ಸೌಹಾರ್ದ ಸಹಕಾರಿ: ವಾರ್ಷಿಕ ಸಾಮಾನ್ಯ ಸಭೆ
    ಊರ್ಮನೆ ಸಮಾಚಾರ

    ಶ್ರೀಗುರು ನಿತ್ಯಾನಂದ ಸೌಹಾರ್ದ ಸಹಕಾರಿ: ವಾರ್ಷಿಕ ಸಾಮಾನ್ಯ ಸಭೆ

    Updated:06/09/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಇಲ್ಲಿನ ಶ್ರೀಗುರು ನಿತ್ಯಾನಂದ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಇದರ ವಾರ್ಷಿಕ ಸಾಮಾನ್ಯ ಸಭೆಯು ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಶಾಲೆಯ ಆದಿತ್ಯ ಸಭಾಂಗಣದಲ್ಲಿ ಜರಗಿತು.

    Click Here

    Call us

    Click Here

    ಸಂಸ್ಥೆಯ ಉಪಾಧ್ಯಕ್ಷರಾದ ಶೇಖರ ಪೂಜಾರಿಂ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಹಕಾರಿಯ ಸಿಇಒ ಕುಮಾರಿ ಪೂಜಾ ಟಿ ಸ್ವಾಗತಿಸಿ ವಾರ್ಷಿಕ ವರದಿ ವಾಚಿಸಿ ಲೆಕ್ಕಪತ್ರಗಳನ್ನು ಮಂಡಿಸಿದರು. ಕೋವಿಡ್ 16ರ ವೀಕೆಂಡ್ ಕರ್ಪ್ಯೂ ಇರುವ ಕಾರಣ ಸಭೆಯಲ್ಲಿ ವರ್ಚುವಲ್ ಮೀಟಿಂಗ್ ಅಳವಡಿಸಲಾಯಿತು.

    ಸಹಕಾರಿಯ ಅಧ್ಯಕ್ಷರಾದ ಡಾ. ಎನ್ ಕೆ ಬಿಲ್ಲವ ಮಾತನಾಡಿ, ಕರೋನಾ ಸಂಕಷ್ಟದ ನಡುವೆಯೂ ಸಹಕಾರಿ ಸಂಸ್ಥೆ ಉತ್ತಮ ಪ್ರಗತಿ ಸಾಧಿಸಿ ಸದಸ್ಯರಿಗೆ ಶೇಕಡ 10 ಪಾಲು ಮುನಾಫೆ ಘೋಷಿಸಲಾಗಿದೆ ಎಂದರು.

    ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಉಡುಪಿ ಜಿಲ್ಲೆಯ ಸಂಯೋಜಕರಾದ ವಿಜಯ ಬಿ.ಎಸ್ ಉಪಸ್ಥಿತರಿದ್ದು, ಸಹಕಾರಿಯ ದ್ಯೇಯೋದ್ದೇಶಗಳನ್ನು ಸಭೆಗೆ ತಿಳಿಸಿದರು. ಕಾನೂನು ರಿತ್ಯಾ ಲಾಭಾಂಶದಲ್ಲಿ ಸಲ್ಲಿಸಬೇಕಾಗಿರುವ ಶಿಕ್ಷಣ ನಿಧಿಯ ಚೆಕ್ ಅನ್ನು ಕುಮಾರಿ ಪೂಜಾ ಹಸ್ತಾಂತರಿಸಿದರು.

    ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾದ ಶುಭದಾ ಶಾಲೆಯ ವಿದ್ಯಾರ್ಥಿನಿಯರಾದ ಸ್ಪಂದನಾ ಮುತ್ತಯ್ಯ ಪೂಜಾರಿ, ಕುಮಾರಿ ಸ್ವೀಕೃತಿ ಕರುಣಾಕರ ಶೆಟ್ಟಿ ಇವರಿಗೆ ಮತ್ತು ಅಂತರಾಷ್ಟೀಯ ಮಟ್ಟದಲ್ಲಿ ಆನ್‌ಲೈನ್ ಮೂಲಕ ನಡೆದ ಯೋಗ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದ ಯೋಗ ಪಟು ಕುಮಾರಿ ನಿರೀಕ್ಷಾ ಬಾಬು ಪೂಜಾರಿ ಇವರಿಗೆ ನಗದು ಪುರಸ್ಕಾರದೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶುಭದಾ ಶಾಲೆಯ ಮುಖ್ಯ ಶಿಕ್ಷಕರಾದ ರವಿದಾಸ ಶೆಟ್ಟಿಯವರು ಮತ್ತು ಮಕ್ಕಳ ಪೋಷಕರು ಮತ್ತು ಸಹಕಾರಿಯ ಸದಸ್ಯರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಸಹಕಾರಿಯ ಆರಂಭದಿಂದಲೂ ಸಹಕಾರಿಯ ಹಿತೈಷಿಗಳಾಗಿ ಉತ್ತಮ ವ್ಯವಹಾರ ಮಾಡುತ್ತಿರುವ ಅಭಿವೃದ್ದಿಯಲ್ಲಿ ಸಲಹೆ ಸೂಚನೆಗಳನ್ನು ನೀಡುತ್ತಿರುವ ಸಹಕಾರಿಯ ಸದಸ್ಯರಾದ ವಿ. ಹೆಚ್ ನಾಯಕ್ ಉಪ್ಪುಂದ, ಎನ್ ರಮೇಶ ಪೈ ನಾಗೂರು, ಶಂಕರ ಪೂಜಾರಿ ಮರವಂತೆ, ಮಂಜು ಪೂಜಾರಿ ಕೆ. ಮರವಂತೆ, ಸರ್ವೋತ್ತಮ ಭಟ್ ಉಪ್ಪುಂದ ಅವರನ್ನು ಸಭೆಯಲ್ಲಿ ಗೌರವಿಸಲಾಯಿತು.

    ಸಹಕಾರಿಯ ಮೇಲ್ವಿಚಾರಕರಾದ ರಾಮಕೃಷ್ಣ ಬಿಲ್ಲವ, ವ್ಯವಸ್ಥಾಪಕ ತಿಮ್ಮಪ್ಪ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ಆಡಳಿತ ಮಂಡಳಿಯ ಸದಸ್ಯರಾದ ಮಂಜು ಪೂಜಾರಿ, ಈಶ್ವರ ಖಾರ್ವಿ, ಯೋಗೀಶ್ ಕಾರಂತ, ರಾಜೀವ ಎಮ್ ಶೆಟ್ಟಿ, ಸುರೇಶ ಕೆ ಪೂಜಾರಿ, ಸಾವಿತ್ರಿ ಪೂಜಾರಿ ಮತ್ತು ಸಲಹೆಗಾರರಾದ ಕೆ ಪುಂಡಲೀಕ ನಾಯಕ್ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    three × three =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.