Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಾರಾಹಿ ನೀರು ರೈತರಿಗೆ ಕೊಡುವಲ್ಲಿ ತನ್ನ ಬಲಿದಾನವಾದರೂ ಚಿಂತೆ ಇಲ್ಲ: ಕೆ. ಪ್ರತಾಪಚಂದ್ರ ಶೆಟ್ಟಿ
    ಊರ್ಮನೆ ಸಮಾಚಾರ

    ವಾರಾಹಿ ನೀರು ರೈತರಿಗೆ ಕೊಡುವಲ್ಲಿ ತನ್ನ ಬಲಿದಾನವಾದರೂ ಚಿಂತೆ ಇಲ್ಲ: ಕೆ. ಪ್ರತಾಪಚಂದ್ರ ಶೆಟ್ಟಿ

    Updated:09/09/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ವಾರಾಹಿ ನೀರಾವರಿ ಯೋಜನೆಯ ಮೂಲ ಉದ್ದೇಶದಂತೆ ಪ್ರತಿಯೊಬ್ಬ ರೈತರಿಗೆ ವಾರಾಹಿ ನೀರು ಸಿಗುವ ತನಕ ಹೋರಾಟ ಮಾಡುತ್ತೇನೆ. ತನ್ನ ಹೋರಾಟ ಹತ್ತಿಕ್ಕಲೂ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಈ ಹೋರಾಟದಲ್ಲಿ ತನ್ನ ಬಲಿದಾನವಾದರೂ ಚಿಂತೆ ಇಲ್ಲ ಎಂದು ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆ. ಪ್ರತಾಪಚಂದ್ರ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಉಡುಪಿ ಜಿಲ್ಲಾ ರೈತ ಸಂಘದ ನೇತ್ರತ್ವದಲ್ಲಿ ಅಂಪಾರು ಶ್ರೀ ರಾಮ ಸಭಾಭವನದಲ್ಲಿ ನಡೆದ ವಾರಾಹಿ ಬಲದಂಡೆ ನೀರಾವರಿ ಯೋಜನೆ ಅಚ್ಚುಕಟ್ಟು ಪ್ರದೇಶದ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

    ವಾರಾಹಿ ನೀರಾವರಿ ಯೋಜನೆ ಆರಂಭವಾಗಿ 41 ವರ್ಷ ಕಳೆದರೂ ಕೂಡಾ ಅದು ಚುರುಕು ಪಡೆದುಕೊಂಡಿದ್ದು 2000ನೇ ಇಸವಿಯ ಅನಂತರ. ಕೇವಲ ರೈತರಿಗೆ ನೀರು ಕೊಡುವ ಉದ್ದೇಶದಿಂದ ಈ ಯೋಜನೆ ಇಂದು ಬೇರೆ ಉದ್ದೇಶಕ್ಕೆ ಬಳಕೆಯಾಗುತ್ತಿರುದು ವಿಪರ್ಯಾಸವಾಗಿದೆ. ಮೂಲ ಯೋಜನೆಯಲ್ಲಿರುವ ಬಲ ದಂಡೆ ಕಾಮಗಾರಿ ಆರಂಭವಾಗಿಲ್ಲ. ಆದರೆ ಸೌಕೂರು ಏತನೀರಾವರಿ ಕಾಮಗಾರಿ ಆರಂಭಗೊಂಡಿದೆ. ಬಲದಂಡೆ ಕಾಮಗಾರಿ ಕೂಡಲೇ ಆರಂಭಗೊಂಡು, ಮೂಲ ಯೋಜನೆಯಲ್ಲಿರುವ ಪ್ರತೀ ಫಲಾನುಭವಿಗಳಿಗೂ ನೀರು ಸಿಗಬೇಕು. ಭವಿಷ್ಯದಲ್ಲಿ ರೈತರಿಗೆ ವಾರಾಹಿ ನಾಲೆಯಿಂದ ಬರುವ ನೀರು ಮಾತ್ರ ಆಸರೆಯಾಗಲಿದೆ ಎಂದು ಹೇಳಿದರು.

    ಮುಂದಿನ ವರ್ಷಗಳಲ್ಲಿ ರೈತರ ನೀರಾವರಿ ಪಂಪ್ ಸೆಟ್‌ಗಳಿ ಬಿಲ್ ಪಾವತಿಸುವ ಸಂದರ್ಭ ಬರುತ್ತದೆ. ಆಗ ವಿದ್ಯುತ್ ಬಿಲ್ ಪಾವತಿಸುದು ಕಷ್ಟ ಹಾಗೂ ಬಿಲ್ ಪಾವತಿ ಕೃಷಿ ಮಾಡಿದರೂ ನಿರೀಕ್ಷಿತ ಲಾಭ ಅಸಾಧ್ಯ. ಅಂತಹ ಸಂದರ್ಭದಲ್ಲಿ ನಾಲೆಯ ಮೂಲಕ ಹರಿದು ಬರುವ ವಾರಾಹಿ ನೀರು ರೈತರನ್ನು ರಕ್ಷಿಸಲಿದೆ. ಮುಂದಿನ ಜನಾಂಗ ನಮ್ಮನ್ನು ಜರಿಯಬಾರದು. ಚುನಾಯಿತ ಪ್ರತಿನಿಧಿಗಳಾದ ನಾವು ನಮ್ಮ ಜವಬ್ದಾರಿ, ಕರ್ತವ್ಯಗಳನ್ನು ಮರೆಯಬಾರದು. ಇಲ್ಲಿ ಸಂಸದರು, ಶಾಸಕರು, ಮಾಜಿ ಶಾಸಕರು ಎಲ್ಲರೂ ವಾರಾಹಿ ಬಲದಂಡೆ ಯೋಜನೆ ಕಾಮಗಾರಿ ಆರಂಭಕ್ಕೆ ಪ್ರಯತ್ನಿಸಬೇಕು. ಮುಖ್ಯಮಂತ್ರಿಗಳು ಈ ಬಗ್ಗೆ ಆಸಕ್ತಿ ವಹಿಸುತ್ತಾರೆ ಎನ್ನುವ ನಂಬಿಕೆ ಇದೆ ಎಂದರು.

    ಉಡುಪಿಯಲ್ಲಿ ಐದು ನದಿಗಳು ಹರಿಯುತ್ತಿದ್ದರೂ, ವಾರಾಹಿ ನೀರನ್ನು ತಗೆದುಕೊಂಡು ಹೋಗಲಾಗುತ್ತಿದ್ದು, ಇದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಮೂಲ ಯೋಜನೆಗೆ ಹಿನ್ನೆಡೆಯಾಗಬಾರದು. ವಾರಾಹಿ ನದಿಯ ನೀರು ಯಾವ ಯಾವ ಸರ್ವೇ ನಂಬರ್‌ಗಳಲ್ಲಿ ವಾರಾಹಿ ಕಾಲುವೆ ಹೋಗುತ್ತದೆ ಎನ್ನುವ ಮಾಹಿತಿಯನ್ನು ಆಯಾಯ ಗ್ರಾ.ಪಂ.ಗಳಿಗೆ ತಕ್ಷಣ ಒದಗಿಸಿ ಎಂದು ವಾರಾಹಿ ಅಽಕಾರಿಗಳಿಗೆ ಪ್ರತಾಪಚಂದ್ರ ಶೆಟ್ಟಿ ಅವರು ಸೂಚನೆ ನೀಡಿದರು.

    Click here

    Click here

    Click here

    Call us

    Call us

    ರೈತ ಸಂಘದ ಕಾರ್ಯದರ್ಶಿ ಸಂತೋಷ್ ಕುಮಾರ ಶೆಟ್ಟಿ ಬಲಾಡಿ ಮಾತನಾಡಿ, ಉಡುಪಿ ಜಿಲ್ಲಾ ರೈತ ಸಂಘದ ನೇತ್ರತ್ವದಲ್ಲಿ ವಾರಾಹಿ ನೀರಾವರಿ ಯೋಜನೆಗೆ ಸಂಬಂಧಪಟ್ಟಂತೆ ಇದು ೫ನೇ ಸಭೆಯಾಗಿದೆ. ರೈತರಿಗೆ ಯೋಜನೆಯ ಬಗ್ಗೆ ಅರಿವು ಮೂಡಿದೆ. ರೈತರ ಸಂದೇಹಗಳು ಮತ್ತು ಆತಂಕಗಳ ಪರಹಾರಕ್ಕೆ ಉತ್ತಮ ವೇದಿಕೆಯಾಗಿದೆ ಎಂದರು.

    ಕೃಷಿಕ ದಿನಕರ ಶೆಟ್ಟಿ ಮುಂಬಾರು ಮಾತನಾಡಿ, ವಾರಾಹಿ ಬಲದಂಡೆ ಯೋಜನೆಗೆ ಹಿಂದೊಮ್ಮೆ ಸರ್ವೇ ಮಾಡಿ ಗುರುತು ಕಲ್ಲುಗಳನ್ನು ಹಾಕಿದ್ದರು. ಈಗ ವಿನ್ಯಾಸ ಬದಲಾವಣೆ ಎನ್ನಲಾಗುತ್ತಿದೆ. ಈಗ ಯಾವ ಮಾರ್ಗದಲ್ಲಿ ಹಾದು ಹೋಗುತ್ತದೆ ಎನ್ನುವ ಗೊಂದಲ ರೈತರಲ್ಲಿದೆ. ಬಲದಂಡೆ ಯೋಜನೆ ಕೂಡಲೇ ಅನುಷ್ಠಾನವಾಗದೇ ಇದ್ದರೆ ಮುಂದೆ ಉಚಿತ ವಿದ್ಯುತ್ ಸಿಗದೆ ರೈತರು ನೀರಿನ ಅಭಾವಕ್ಕೆ ಗುರಿಯಾಗುವ ಸಾಧ್ಯತೆ ಇದೆ. ಹಾಗಾಗಿ ಈ ಯೋಜನೆ ಕೂಡಲೇ ಕಾರ್ಯಗತಗೊಳ್ಳಬೇಕು ಎಂದರು. ಕಿರಣ್ ಹೆಗ್ಡೆ ಅಂಪಾರು ಮಾತನಾಡಿ, ಯೋಜನೆಯ ಮುಖ್ಯ ಕಾಲುವೆ ಪಥ ಬದಲಾವಣೆಯಿಂದ ಮೂಲ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನ್ಯಾಯವಾಗಬಾರದು. ಮುಂದೆ ಅದು ಗೊಂದಲಕ್ಕೆ ಕಾರಣವಾಗಬಾರದು. ಈ ಬಗ್ಗೆ ಅಽಕಾರಿಗಳು ಮುತುವರ್ಜಿ ವಹಿಸಬೇಕು ಎಂದರು.

    ನಾಲಾ ಪಥ ಪರಿಷ್ಕಾರ, ನೀರಿನ ಸೇತುವೆ ನಿರ್ಮಾಣ: ವಾರಾಹಿ ನೀರಾವರಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿ, ಬಲದಂಡೆ ಯೋಜನೆ ಸುಮಾರು1,900 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಲಿದೆ. ಇದರ ಮೂಲ ನಾಲಾ ಪಥದಲ್ಲಿ ರಕ್ಷಿತಾರಣ್ಯ, ಡೀಮ್ಡ್ ಫಾರೆಸ್ಟ್, ಬೆಟ್ಟಗುಡ್ಡಗಳು ಇರುವುದರಿಂದ ಮುಖ್ಯನಾಲೆಯ ವಿನ್ಯಾಸದಲ್ಲಿ ಒಂದಿಷ್ಟು ಬಲದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಇದರಿಂದ ಮೂಲ ಅಚ್ಚುಕಟ್ಟು ಪ್ರದೇಶಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಪರಿಷ್ಕೃತ ನಾಲಾ ಪಥದಲ್ಲಿ ನೀರಿನ ಸೇತುವೆಗಳ ವಿನ್ಯಾಸ ಅಳವಡಿಸಲಾಗಿದೆ. ಶಂಕರನಾರಯಣ-ಹಳ್ನಾಡು 9.5 ಕಿ.ಮೀ ಮುಖ್ಯ ಕಾಲುವೆಯಾಗಿದ್ದು, ಅಂಪಾರು ಸರ್ಕಲ್ ನಿಂದ ಉಪ ಕಾಲುವೆಗಳ ನಿರ್ಮಾಣ ಮಾಡಲಾಗುತ್ತದೆ. ಈಗಾಗಲೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ ಎಂದರು.

    ವಾರಾಹಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಪ್ರವೀಣ್, ಸಹಾಯಕ ಇಂಜಿನಿಯರ್‌ಗಳಾದ ದ ಪ್ರಸನ್ನಕುಮಾರ್, ಕಿರಣ್ ಅವರು ಸಭೆಗೆ ಮಾಹಿತಿ ಒದಗಿಸಿದರು. ಇಂಜಿನಿಯರ್‌ಗಳಾದ ಪ್ರೀತಮ್, ಪ್ರಶಾಂತ್‌ಕುಮಾರ್, ಪ್ರಸನ್ನ ಕಾಮತ್, ಕೆ. ಆಶ್ರಫ್ ಉಪಸ್ಥಿತರಿದ್ದರು.

    ಉಡುಪಿ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಸತೀಶ್ ಕಿಣಿ ಬೆಳ್ವೆ, ವಕ್ತಾರ ವಿಕಾಸ್ ಹೆಗ್ಡೆ, ಮುಖಂಡರಾದ ಪ್ರದೀಪ ಕುಮಾರ್ ಶೆಟ್ಟಿ ಗುಡಿಬೆಟ್ಟು, ಸದಾಶಿವ ಶೆಟ್ಟಿ ಶಂಕರನಾರಾಯಣ, ಶರತಚಂದ್ರ ಶೆಟ್ಟಿ, ಕೃಷ್ಣದೇವ ಕಾರಂತ ಕೋಣಿ, ಅಶೋಕ ಕುಮಾರ್ ಶೆಟ್ಟಿ ಚೋರಾಡಿ, ರಮೇಶ ಗಾಣಿಗ ಕೊಲ್ಲೂರು, ದೇವಾನಂದ ಶೆಟ್ಟಿ ಬಸ್ರೂರು, ರೋಹಿತ್‌ಕುಮಾರ ಶೆಟ್ಟಿ ಶಂಕರನಾರಾಯಣ, ವಿಜಯ ಪುತ್ರನ್, ಗಣಪಯ್ಯ ಶೆಟ್ಟಿ ಕುಪ್ಪುಗೋಡು ಮೊದಲಾದವರು ಉಪಸ್ಥಿತರಿದ್ದರು.

    ವಾರಾಹಿ ಬಲದಂಡೆ ನೀರಾವರಿ ಯೋಜನೆಯು ಶಂಕರನಾರಾಯಣ-1177.18ಎಕರೆ, ಕುಳುಂಜೆ-600.20 ಎಕರೆ, ಕಾವ್ರಾಡಿ-698.11 ಎಕರೆ, ಹಳ್ನಾಡು-505.78 ಎಕರೆ, ಅಂಪಾರು-1048.91 ಎಕರೆ. ಒಟ್ಟು ಗ್ರಾಮಗಳ ಅಂದಾಜು-4030.68 ಎಕರೆ ಕೃಷಿ ಜಮೀನಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.