ಕುಂದಾಪ್ರ ಡಾಟ್ ಕಾಂ ಸುದ್ದಿ
ಬೆಂಗಳೂರು: ವಿಧಾನ ಪರಿಷತ್ ಸಭಾ ನಾಯಕರಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನ ಪರಿಷತ್ ಸಭಾಪತಿಗೆ ಬಸವರಾಜ ಹೊರಟ್ಟಿ ಅವರಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ.