ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಲ್ಲಾ ಪಂಚಾಯತ್ ಉಡುಪಿ, ಆಯುಷ್ ಇಲಾಖೆ ಉಡುಪಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದಲ್ಲಿ ಜರಗಿತು.
ಕಾಲ್ತೋಡು ಗ್ರಾಮ ಪಂಚಾಯತ್ ಪಿಡಿಒ ಸತೀಶ ತೋಳಾರ್ ಕಾರ್ಯಕ್ರಮ ಉದ್ಘಾಟಿಸಿ ಶುಭಾಶಂಸನೆಗೈದರು. ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ವೀಣಾ ಕಾರಂತ್ ಅವರು ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಹದಿಹರೆಯದ ಹೆಣ್ಣು ಮಕ್ಕಳು, ಗರ್ಭಿಣಿಯರ ಆಹಾರ-ವಿಹಾರದ ಬಗ್ಗೆ, ಕಡಿಮೆ ತೂಕದ ಮಕ್ಕಳ ಆರೋಗ್ಯ ವರ್ಧನೆಯ ಬಗ್ಗೆ, ನಮ್ಮ ಸುತ್ತಮುತ್ತಲಿನ ತರಕಾರಿ, ಹಣ್ಣು ಬೇಳೆಕಾಳುಗಳನ್ನುಉಪಯೋಗಿಸಿ ಉತ್ತಮ ಆರೋಗ್ಯ ಪಡೆಯುವ ಬಗ್ಗೆ ವಿವರಿಸಿದರು.
ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಶೆಡ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ಸಹಾಯಕಿ ಪ್ರತಿಮಾ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಮತ್ತಿತರರು ಉಪಸ್ಥಿತರಿದ್ದರು.