Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಿವಾಲ್ವಾರ್ ತೋರಿಸಿ ಮೊಬೈಲ್ ಅಂಗಡಿ ಮಾಲೀಕನ ಅಪಹರಣ, ದೂರು ದಾಖಲು
    ಅಪಘಾತ-ಅಪರಾಧ ಸುದ್ದಿ

    ರಿವಾಲ್ವಾರ್ ತೋರಿಸಿ ಮೊಬೈಲ್ ಅಂಗಡಿ ಮಾಲೀಕನ ಅಪಹರಣ, ದೂರು ದಾಖಲು

    Updated:22/09/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಮೊಬೈಲ್ ಅಂಗಡಿಯ ಮಾಲಿಕನನ್ನು ಅಪಹರಿಸಿ ಅವರಿಂದ ನಗದು ಹಾಗೂ ಮೊಬೈಲ್ ಸೇರಿದಂತೆ ಸುಮಾರು 5.5 ಲಕ್ಷ ಮೌಲ್ಯದ ಸೊತ್ತುಗಳನ್ನು ಸುಲಿಗೆ ಮಾಡಿದ ಘಟನೆ ಇತ್ತಿಚಿಗೆ ನಡೆದಿದೆ. ಕುಂದಾಪುರದ ಫ್ಲ್ಯಾಟ್’ನಲ್ಲಿ ವಾಸವಿರುವ ಮುಸ್ತಾಫ್ (34) ಅಪಹರಣಕ್ಕೊಳಗಾದವರು. ಮುಕ್ತಾರ್ ಹಾಗೂ ಇತರ ಐವರು ಅಪಹರಣ ಮಾಡಿ 4 ಲಕ್ಷದ 64 ಸಾವಿರದ ನೂರ ಎಪ್ಪತ್ತೈದು ರೂಪಾಯಿ ಹಣ ಹಾಗೂ 1 ಲಕ್ಷ ಮೌಲ್ಯದ ಸೊತ್ತುಗಳು ಮತ್ತು ಅಮೂಲ್ಯ ದಾಖಲಾತಿಗಳನ್ನು ಸುಲಿಗೆ ಮಾಡಿ ಬಳಿಕ ಬಿಟ್ಟು ಕಳುಹಿಸಿರುವ ಬಗ್ಗೆ ಮೊಬೈಲ್ ಅಂಗಡಿ ಮಾಲಿಕ ಮುಸ್ತಾಫ್ ಕುಂದಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    Click Here

    Call us

    Click Here

    ಘಟನೆ ವಿವರ:
    ಕುಂದಾಪುರದ ಚಿಕನ್ ಸಾಲ್ ರಸ್ತೆಯಲ್ಲಿ ಮೊಬೈಲ್ ಏಕ್ಸ್ ಎಂಬ ಮೊಬೈಲ್ ಅಂಗಡಿಯನ್ನು ಹೊಂದಿರುವ ಮುಸ್ತಾಪ್ ಸೆ.17 ರಂದು ರಾತ್ರಿ 9.30ಕ್ಕೆ ಅಂಗಡಿ ವ್ಯವಹಾರ ಮುಗಿಸಿ ವ್ಯವಹಾರದ ಹಣ 50 ಸಾವಿರ ನಗದು, ಆಧಾರ್ ಕಾರ್ಡ್, ಪಾನ್ ಕಾರ್ಡ್ 3-4 ಬ್ಯಾಂಕ್ಗಳ ಚೆಕ್ ಪುಸ್ತಕಗಳು ಹಾಗೂ ಇನ್ನಿತರ ಅಮೂಲ್ಯ ದಾಖಲಾತಿಯೊಂದಿಗೆ ಹಾಗೂ ಐಫೋನ್ -1, ಸ್ಯಾಮಸಂಗ್ ಮೊಬೈಲ್ ಫೋನ್ 1, ಆಪಲ್ ಸ್ಮಾರ್ಟ್ ವಾಚ್ -1 ಹಾಗೂ ಏರ್ ಪೋಡ್-1 ಇವುಗಳನ್ನು ಬ್ಯಾಗಿನಲ್ಲಿ ಹಾಕಿಕೊಂಡು ದ್ವಿಚಕ್ರ ವಾಹನದಲ್ಲಿ ತನ್ನ ವಾಸದ ಪ್ಲ್ಯಾಟ್ ಸಮೀಪ ಹೋದಾಗ ಒಂದು ಸ್ವಿಪ್ಟ್ ಕಾರು ಅನುಮಾನಾಸ್ಪದವಾಗಿ ಬಂದಿದ್ದು ಅದರ ಚಾಲಕನಾಗಿ ಆರೋಪಿ ಮುಕ್ತಾರ್ ಎಂಬುವವರಿದ್ದು ಅಪರಿಚಿತ ವ್ಯಕ್ತಿ ಕಾರಿನಿಂದ ಕೆಳಗೆ ಇಳಿದು ದೈಹಿಕ ಹಲ್ಲೆ ಮಾಡಿ ಕಾರಿನ ಒಳಗೆ ಎಳೆದುಕೊಂಡಿದ್ದು ಕಾರಿನಲ್ಲಿದ್ದ ಇನ್ನೊರ್ವ ಅಪರಿಚಿತ ವ್ಯಕ್ತಿ ಕೈಯಲ್ಲಿದ್ದ ರಿಲಾಲ್ವರ್ ಅನ್ನು ತೋರಿಸಿ ಬೆದರಿಸಿದ್ದಾನೆ. ಓರ್ವ ಆರೋಪಿಯು ಮುಸ್ತಾಫ್ ಎಡಕಣ್ಣಿನ ಕೆಳಗೆ ಮುಷ್ಠಿಯಿಂದ ಬಲವಾಗಿ ಗುದ್ದಿ ಹಲ್ಲೆ ನಡೆಸಿ ಕೈಯನ್ನು ಹಾಗೂ ಬಾಯಿಯನ್ನು ಕಟ್ಟಿ ಕೂಗದಂತೆ ಮಾಡಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಕಾರಿನಲ್ಲಿ ತೆರಳುವ ಮಾರ್ಗಮದ್ಯೆ ಓರ್ವ ಮಹಿಳೆ ಕಾರು ಏರಿದ್ದು ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಮತ್ತಿಬ್ಬರು ಅಪರಿಚಿತ ಆರೋಪಿಗಳು ಇವರಿಗೆ ಜೊತೆಯಾಗಿದ್ದಾರೆ.

    ಲಾಡ್ಜಿನಲ್ಲಿ ಮಹಿಳಾ ಆರೋಪಿ ಒಂದು ಮೊಬೈಲ್ಗೆ ಮುಸ್ತಾಪ್ ಅವರ ಸಿಮ್ ಕಾರ್ಡ್ ಹಾಕಿ ಮನೆಯವರಿಗೆ ಕರೆ ಮಾಡಿಸಿ ಅವರಿಂದ ತಲಾ ಒಂದೊಂದು ಲಕ್ಷ ಬೇಕೆಂದು ಹಾಕಿಸಿಕೊಂಡಿದ್ದು ಮುಸ್ತಾಪ್ ಖಾತೆಯಲ್ಲಿದ್ದ ಹಣ ಸಹಿತ ಮೊಬೈಲ್ ಮೂಲಕ ಬ್ಯಾಂಕ್ ಖಾತೆಯನ್ನು ಓಪನ್ ಮಾಡಿ ಅವರ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದು ಮಾತ್ರವಲ್ಲದೇ ಕುಂದಾಫುರದಿಂದ ಬೆಂಗಳೂರಿಗೆ ಕರೆದುಕೊಂಡು ಹೋಗುವಾಗ ದಾರಿಮಧ್ಯೆಯಲ್ಲಿ ಬೆಂಗಳೂರಿನ ಎಟಿಎಮ್ ಹಾಗೂ ಸ್ವೈಪಿಂಗ್ ಮೆಷಿನ್ ನಿಂದ ರೂಪಾಯಿ 3,14,175 /- ರೂಪಾಯಿಯನ್ನು ಡ್ರಾ ಮಾಡಿದ್ದಾರೆ. ಅಲ್ಲದೆ ಎಕ್ಸಿಸ್ ಬ್ಯಾಂಕ್ನ ಚೆಕ್ ಪುಸ್ತಕವನ್ನು ತೆಗೆದುಕೊಂಡು ಸಹಿ ಮಾಡಲು ಹೇಳಿ ನೀನು ಊರಿಗೆ ಹೋದ ಮೇಲೆ ಖಾತೆಗೆ ಹಣ ಜಮಾ ಮಾಡಬೇಕು ಜಮಾ ಮಾಡಿದರೇ ಮಾತ್ರ ದಾಖಲಾತಿಯನ್ನು ಮೊಬೈಲ್ ಹಾಗೂ ಇನ್ನಿತರ ವಸ್ತುಗಳ ಹಿಂತಿರುಗಿಸುವುದಾಗಿ ಹೇಳಿದ್ದಾರೆ. ಒಟ್ಟು 4,64,175 ರೂ. ಹಣವನ್ನು ಹಾಗೂ 1 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಸುಲಿಗೆ ಮಾಡಿದ್ದಾರೆ. ಮತ್ತೆ ಹಣಕ್ಕೆ ಬೇಡಿಕೆಯಿಟ್ಟು 2 ಮೊಬೈಲ್, ದಾಖಲೆಗಳನ್ನು ತಮ್ಮಲ್ಲಿಯೇ ಇರಿಸಿಕೊಂಡ ಆರೋಪಿಗಳು ಸೆ.18ರಂದು ರಾತ್ರಿ 9:30ಕ್ಕೆ ಮುಸ್ತಾಫ್ ಅವರನ್ನು ಬಿಟ್ಟಿದ್ದು ಸ್ನೇಹಿತರ ಸಹಾಯದಿಂದ ಅವರು ಸೆ.19ಕ್ಕೆ ಊರು ಸೇರಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಕೆ ನಡೆಸುತ್ತಿದ್ದಾರೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d