Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಹಿಳೆಯರು ಮುಖ್ಯ ವಾಹಿನಿಗೆ ಬರಲು ಹಿಂಜರಿಯುತ್ತಿರುವುದು ವಿಷಾದನೀಯ: ಸುಮಿತ್ರಾ ಐತಾಳ್
    ಊರ್ಮನೆ ಸಮಾಚಾರ

    ಮಹಿಳೆಯರು ಮುಖ್ಯ ವಾಹಿನಿಗೆ ಬರಲು ಹಿಂಜರಿಯುತ್ತಿರುವುದು ವಿಷಾದನೀಯ: ಸುಮಿತ್ರಾ ಐತಾಳ್

    Updated:28/09/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ:
    ಉದ್ಯೋಗದೊಂದಿಗೆ ಮನೆಯ ಕೆಲಸದಲ್ಲಿಯೂ ತೊಡಗಿಸಿಕೊಂಡ ಮಹಿಳೆ ಒತ್ತಡದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಟೀಕೆಗಳಿಗೆ ಗಮನ ಕೊಡದೇ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು, ಹಿಂಜರಿಕೆ ಕಾಣದೇ, ತಾಳ್ಮೆ, ಸಹನೆಯಿಂದ ಮುನ್ನುಗ್ಗುವಂತ ಮನೋಭಾವನೆ ಬೆಳೆಸಿಕೊಳ್ಳಬೇಕು. ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸ್ವಾವಲಂಬನೆಯತ್ತಾ ಮಹಿಳೆಯರು ದಿಟ್ಟ ಹೆಜ್ಜೆಯನ್ನಿಡಬೇಕು, ಮಹಿಳೆಯರಿಗೂ ಜ್ಞಾನ ಪೀಠ ಪ್ರಶಸ್ತಿ ದೊರಕಬೇಕು ಎಂದು ಶಿಕ್ಷಕಿ ಹಾಗೂ ಸಾಹಿತಿ ಸುಮಿತ್ರ ಐತಾಳ್ ಹೇಳಿದರು.

    Click Here

    Call us

    Click Here

    ಅವರು ಕೋಟ ಡಾ.ಕಾರಂತ ಥೀಂ ಪಾರ್ಕ್ನಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್, ಡಾ.ಶಿವರಾಮ ಕಾರಂತ ಟ್ರಸ್ಟ್,(ರಿ) ಉಡುಪಿ, ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಟಾನದ (ರಿ)ಕೋಟ ಸಹಯೋಗದಲ್ಲಿ ನಡೆದ ಉಡುಪಿ ಜಿಲ್ಲಾ ಮಹಿಳಾ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ, ಮಣೂರು ಅಶ್ವಿನಿ ಮಧ್ಯಸ್ಥ ಸ್ಮಾರಕ ಸಾಧನಾ ಶ್ರೀ ಮಹಿಳಾ ಪುರಸ್ಕಾರ ಪ್ರದಾನ ಸಮಾರಂಭ ಭಾವಗಾನ-2021(ಸಾಧನೆಯ ತಿಲ್ಲಾನ) ಕಾರ್ಯಕ್ರಮದ ಸಮ್ಮೇಳನಾಧ್ಯಕ್ಷೆ ನೆಲೆಯಲ್ಲಿ ಮಾತನಾಡಿದರು.

    ಹೆಣ್ಣಿನ ನೋವು ಸಾಹಿತ್ಯದಲ್ಲಿ ಅನಾವರಣ
    ಚಲನಶೀಲತೆ ಜೀವಂತಿಕೆ ಗುಣ, ನಿಸರ್ಗದ ಹೊಂದಾಣಿಕೆಯಂತೆ ಕಾಲ ಉರುಳುತ್ತದೆ. ಅದಕ್ಕೆ ತಡೆಯಂಬುದಿಲ್ಲ ಅಂತಹ ಪ್ರಭಾವ ಶಾಲಿಯಾದರೂ ಕಾಲಚಕ್ರದ ಎದುರು ತಲೆಬಾಗಲೇಬೇಕು ಆಯಾ ಕಾಲದಲ್ಲಿ ನಡೆದ ಪ್ರತಿಯೊಂದು ಘಟನೆಯೂ ಕಾಲ ಉರುಳಿದಂತೆ ಇತಿಹಾಸವಾಗುತ್ತಾ ಹೋಗುತ್ತದೆ. ನೊಂದ ಜೀವನವನ್ನು ನೊಂದವರೇ ಬಲ್ಲರು ಎಂಬಂತೆ ಹೆಣ್ಣು ಒಳಸಂಕಟಗಳನ್ನು ಸಾರ್ವಜನಿಕವಾಗಿ ಹೇಳಿಕೊಳ್ಳಲು ಸಾಧ್ಯವಾಗಲ್ಲ ಇಂದು ಮಹಿಳಾ ಲೇಖಕಿಯರಿಂದ ಸಾಹಿತ್ಯದಲ್ಲಿ ಇಂದು ಅಭಿವ್ಯಕ್ತಗೊಳ್ಳುತ್ತಿದೆ ಎಂದರು

    ಮಹಿಳೆಯರು ಸಂಘಟನೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಿ
    ಪುರುಷರಿಗೆ ಸರಿಸಮಾನವಾಗಿ ಇಂದು ಮಹಿಳೆ ಸಾಹಿತ್ಯ ಕ್ಷೇತ್ರದಲ್ಲಿ ಅವಕಾಶ ಕಲ್ಪಿಸಿಕೊಳ್ಳಲು ಮತ್ತು ಪ್ರಬುದ್ಧ ಚಿಂತನೆಗಳನ್ನು ಬೆಳೆಸಲು ಸಂಘಟನೆಗಳು ಅಗತ್ಯ ಇಂದು ಮಹಿಳೆ ಎಲ್ಲ ಕ್ಷೇತ್ರಗಳಲ್ಲಿಯೂ ಸಂಘಟಿತಳಾಗಿ ಸಾಧನೆ ತೋರುತ್ತಿದ್ದಾಳೆ. ಅದೇ ರೀತಿ ಸಾಹಿತ್ಯ ಕ್ಷೇತ್ರದಲ್ಲಿಯೂ ಸಂಘಟಿತರಾಗಬೇಕು.ಇದರಿಂದ ಮಹಿಳೆ ಸಾಹಿತ್ಯ ಕ್ಷೇತ್ರದಲ್ಲೂ ಬೆಳೆಯಲು ಸಾಧ್ಯ ಎಂದು ಕಾರ್ಯಕ್ರಮ ಉದ್ಘಾಟಿಸಿ ಸಾಂಸ್ಕೃತಿಕ ಚಿಂತಕಿ ಸುಧಾ ಮಣೂರು ಕದ್ರಿಕಟ್ಟು ಹೇಳಿದರು.

    ಸಾಧಕ ಮಹಿಳೆಯರಿಗೆ ಸನ್ಮಾನ
    ಸಮಾರಂಭದಲ್ಲಿ ಕೋಟೇಶ್ವರದ ಸುಮಿತ್ರಾ ಐತಾಳ್, ಸಂಧ್ಯಾ ಲಕ್ಷ್ಮಣ್ ಆಚಾರ್ಯ, ಮಂಜುಳಾ ತೆಕ್ಕಟ್ಟೆ, ಚಂದ್ರಿಕಾ ಧನ್ಯ, ಕಲ್ಪನಾ ಭಾಸ್ಕರ್, ಅಮಿತ ಪ್ರಕಾಶ್ ಕ್ರಮಧಾರಿ, ವಿನಂತಿ ಶೆಟ್ಟಿ ಕೋಟೇಶ್ವರ, ರೇವತಿ ಪ್ರಭಾಕರ ಗಾಣಿಗ ಮತ್ತು ಗೀತಾ ಮರಕಾಲ ಅವರಿಗೆ ಅಶ್ವಿನಿ ಸ್ಮಾರಕ ಸಾಧನ ಶ್ರೀ ಮಹಿಳಾ ಪುರಸ್ಕಾರ ನೀಡಿ ಗೌರವಿಸಲಾಯಿತು.

    Click here

    Click here

    Click here

    Click Here

    Call us

    Call us

    ಪ್ರಗತಿಪರ ಕೃಷಿಕ ರವೀಂದ್ರ ಐತಾಳ, ಥೀಂ ಪಾರ್ಕ್ನ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯಿತಿ ಸದಸ್ಯ ಸತೀಶ್ ಬಾರಿಕೆರೆ, ದಿನೇಶ್ ಆಚಾರ್ಯ ಉಪಸ್ಥಿತರಿದ್ದರು.

    ಟ್ರಸ್ಟ್ ನ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಾಸ್ತಾವಿಕವಾಗಿ ಮಾತನಾಡಿದರು ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.ಪಂಚಾಯತ್ ಸದಸ್ಯೆ ವಿದ್ಯಾ ಸಾಲಿಯಾನ್ ವಂದಿಸಿದರು. ನಂತರ ಬಹುವಿಧ ಗೋಷ್ಟಿ, ನನ್ನ ಕಥೆ ನಿಮ್ಮ ಜೊತೆ ಮಾತುಕತೆ ಕಾರ್ಯಕ್ರಮಗಳು ನಡೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    11 + 2 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.