Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಓಡಿಎಫ್+ 1 ಜಿಲ್ಲೆಯಾಗಿ ಘೋಷಣೆ: ಡಾ. ನವೀನ್ ಭಟ್
    ಉಡುಪಿ ಜಿಲ್ಲೆ

    ಉಡುಪಿ ಓಡಿಎಫ್+ 1 ಜಿಲ್ಲೆಯಾಗಿ ಘೋಷಣೆ: ಡಾ. ನವೀನ್ ಭಟ್

    Updated:02/10/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯ ಎಲ್ಲಾ 155 ಗ್ರಾಮ ಪಂಚಾಯತ್ ಗಳು ಕಸ ಸಂಗ್ರಹಣೆ ಮತ್ತು ವಿಲೇವಾರಿ ಹಾಗೂ ಕಸ ಸಂಗ್ರಹಣೆಗೆ ಪ್ರತ್ಯೇಕ ವಾಹನ ವ್ಯವಸ್ಥೆ ಹೊಂದುವ ಮೂಲಕ ಉಡುಪಿ ಜಿಲ್ಲೆಯನ್ನು ಓಡಿಎಫ್+1 ಜಿಲ್ಲೆಯನ್ನಾಗಿ ಘೋಷಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಹೇಳಿದರು.

    Click Here

    Call us

    Click Here

    ಅವರು ಇಂದು , ಆಜಾದಿ ಕಾ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ,ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯನ್ನು ಓಡಿಎಫ್+1 ಜಿಲ್ಲೆಯನ್ನಾಗಿ ಘೋಷಿಸಲಾಗಿದ್ದು, ಎಲ್ಲಾ ಗ್ರಾಮ ಪಂಚಾಯತ್ ಗಳು ತಮ್ಮ ವ್ಯಾಪ್ತಿಯಲ್ಲಿನ ಕಸವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ತಿಳಿಸಿದ ಸಿಇಓ, ಎಸ್ಎಲ್ಆರ್ಎಂ ಘಟಕಗಳು ಕಸದಿಂದ ಆದಾಯವನ್ನು ಸಂಗ್ರಹಿಸಿ, ತಮ್ಮ ವೆಚ್ಚಗಳನ್ನು ನಿಭಾಯಿಸಿಕೊಂಡುವ ಲಾಭದಾಯಕವಾಗಿ ನಡೆಸುವಂತೆ ಹೇಳಿದರು.

    ಜಲಜೀವನ್ ಮಿಷನ್ ಯೋಜನೆಯಡಿ ಎಲ್ಲಾ ಮನೆಗಳಿಗೆ ನೀರಿನ ಸಂಪರ್ಕ ಒದಗಿಸಿ, ತಮಗೆ ಈಗಾಗಲೇ ನೀರಿನ ಸಂಪರ್ಕ ಇದೆ, ಈ ಯೋಜನೆಯಡಿ ಸಂಪರ್ಕ ಬೇಡ ಎನ್ನುವ ಕುಟುಂಬಗಳ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ, ಲಿಖಿತ ವರದಿ ಪಡೆದು ಅನಿವಾರ್ಯವಾದಲ್ಲಿ ಮಾತ್ರ ರದ್ದುಗೊಳಿಸಿ, ಯೋಜನೆಯನ್ನು ಅನುಷ್ಠಾನಗೊಳಿಸುವಾಗ ಸಂಬದಪಟ್ಟ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿ, ಸಾರ್ವಜನಿಕರಿಗೆ ಜಲ ಜೀವನ್ ಮಿಷನ್ ಮಹತ್ವದ ಕುರಿತು ಸೂಕ್ತ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ , ಎಲ್ಲಾ ಗ್ರಾಮ ಪಂಚಾಯತ್ ಗಳು 15 ನೇ ಹಣಕಾಸಿನ ಯೋಜನೆಯಡಿ ತಮ್ಮ ಕ್ರಿಯಾ ಯೋಜನೆಯಲ್ಲಿ ಕಡ್ಡಾಯವಾಗಿ ಜಲ ಜೀವನ್ ಯೋಜನೆ ಅನುಷ್ಠಾನಕ್ಕೆ ಅನುದಾನ ಮೀಸಲಿಡಬೇಕು ಈ ಬಗ್ಗೆ ಗ್ರಾಮ ಪಂಚಾಯತ್ ಗಳಿಗೆ ಮತ್ತೊಮ್ಮೆ ಸೂಚನೆ ನೀಡುವಂತೆ ಎಲ್ಲಾ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ತಿಳಿಸಿದರು.

    ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ತಿಂಗಳಲ್ಲಿ 1 ದಿನ ಜಲಜೀವನ್ ಮಿಷನ್,ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ,ಇಂಗು ಗುಂಡಿಗಳ ಗಳ ಮಹತ್ಬಗಳ , ಪ್ಲಾಸ್ಟಿಕ್ ವಿಲೇವಾರಿ, ಬಗ್ಗೆ ಮಕ್ಕಳಿಗೆ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಿ, ಇದಕ್ಕೆ ಸ್ಥಳೀಯ ನಿವೃತ್ತ ಶಿಕ್ಷಕರು, ಮಾಜಿ ಜನಪ್ರತಿನಿಧಿಗಳು , ನಿವೃತ್ತ ಇಂಜನಿಯರಿಂಗ್ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಸಂಪನ್ಮೂಲ ವ್ಯಕ್ತಿಗಳನ್ನು ಗುರುತಿಸಿ ಅವರ ಮೂಲಕ ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    Click here

    Click here

    Click here

    Click Here

    Call us

    Call us

    ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿನ ಶಾಲೆಗಳು ,ಹಾಸ್ಟೆಲ್ ಗಳು ಮತ್ತು ಆಸ್ಪತ್ರೆಗಳಲ್ಲಿ ಇಂಗು ಗುಂಡಿಗಳ ನಿರ್ಮಾಣ ಮಾಡುವ ಕುರಿತಂತೆ ಸಂಬಂದಪಟ್ಟ ಇಲಾಖೆಗಳು ಅಗತ್ಯ ಮಾಹಿತಿ ನೀಡುವಂತೆ ಮತ್ತು ಗ್ರಾಮ ಪಂಚಾಯತ್ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಘಟಕ ಅಳವಡಿಸುವ ಕುರಿತಂತೆ ಮಾಹಿತಿ ನೀಡುವಂತೆ ತಿಳಿಸಿದರು.

    ನೀರು ಮತ್ತು ನೈರ್ಮಲ್ಯ ಸಮಸ್ಯೆಗಳ ಕುರಿತು ಸಹಾಯವಾಣಿಗೆ ಬರುವ ದೂರುಗಳನ್ನು ಶೀಘ್ರದಲ್ಲಿ ಇತ್ಯರ್ಥಪಡಿಸುವಂತೆ ಸಿಇಓ ಸೂಚಿಸಿದರು.

    ಜಿಲ್ಲಾ ಪಂಚಾಯತ್ ನಿಂದ ಹೊರತಂದ ತ್ಯಾಜ್ಯ ಮುಕ್ತ ಗ್ರಾಮದತ್ತ ನಮ್ಮ ಚಿತ್ತ ಎಂಬ ,ಸ್ವಚ್ಚತೆ , ಜಲಜೀವನ್ ಮಿಷನ್ ಕುರಿತು ಅರಿವು ಮೂಡಿಸುವ ಮಾಹಿತಿ ಪತ್ರವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಬಿಡುಗಡೆಗೊಳಿಸಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸರಾವ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಇಂಜಿನಿಯರ್ ಕೃಷ್ಣಾನಂದ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಾಬು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    eighteen − 5 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.