Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಷ್ಟಗಳಿಗೆ ಹೆದರಬೇಡಿ, ನಮ್ಮ ತಾಳ್ಮೆ ಪರೀಕ್ಷಿಸಲೆಂದೇ ಬರುತ್ತವೆ!
    ವಿಶೇಷ ಲೇಖನ

    ಕಷ್ಟಗಳಿಗೆ ಹೆದರಬೇಡಿ, ನಮ್ಮ ತಾಳ್ಮೆ ಪರೀಕ್ಷಿಸಲೆಂದೇ ಬರುತ್ತವೆ!

    Updated:30/05/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಸಮಸ್ಯೆ ಯಾರಿಗಿಲ್ಲ ಹೇಳಿ. ಹಾಗಂತ ತಲೆಯ ಮೇಲೆ ಕೈ ಹೊತ್ತು ಕುಳಿತರೆ ಬದುಕು ಸಾಗುವುದಿಲ್ಲ. ನಾವು ನಮಗಿಂತ ಮೇಲಿನವರನ್ನು ನೋಡಿ ನೊಂದುಕೊಳ್ಳುವುದಕ್ಕಿಂತ ನಮಗಿಂತ ಸಂಕಷ್ಟದಲ್ಲಿರುವ ಇತರರನ್ನು ನೋಡಿದರೆ ಸಾಕು. ನಮಗೆ ಭಗವಂತ ಇಷ್ಟನ್ನಾದರೂ ಕರುಣಿಸಿದ್ದಾನಲ್ಲ ಎಂಬ ತೃಪ್ತ ಭಾವ ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ.

    Click Here

    Call us

    Click Here

    ನೀವು ಜೀವನದಲ್ಲಿ ಎಲ್ಲವನ್ನೂ ಕಳೆದುಕೊಂಡಿದ್ದಿರಿ ಅಂತ ನಿಮ್ಮ ಮನಸಿಗೆ ಅನಿಸಿದಾಗ ಒಮ್ಮೆ ಮರಗಳನ್ನು ನೋಡಿ. ಒಂದು ಸಮಯದಲ್ಲಿ ಅವು ತನ್ನೆಲ್ಲಾ ಎಲೆಗಳನ್ನು ಕಳೆದುಕೊಂಡರು ಎಂದಿಗೂ ಅವು ಕುಗ್ಗುವುದಿಲ್ಲ ಅವು ತಮ್ಮ ಸಮಯಕ್ಕಾಗಿ ಕಾಯುತ್ತವೆ. ಹಾಗೆ ನಾವು ಕೊಡ ಸಮಸ್ಯೆಗಳಿಗೆ ಹತಾಶರಾಗದೆ ಅವಮಾನಗಳಿಗೆ ಕುಗ್ಗದೆ ಬದುಕೋಣ. ಯುನಿವರ್ಸಿಟಿಗಳಿಂದ ಕಲಿಯುವ ಪಾಠಕಿಂತ ಬದುಕು ಕಲಿಸುವ ಪಾಠವೇ ದೊಡ್ಡದು.

    ನಾವು ಎಷ್ಟೋ ಜನರ ಸಮಸ್ಯೆಗಳಿಗೆ ದ್ವನಿಯಾಗುತ್ತೇವೆ. ಆದರೆ ನಮಗೆ ಸಮಸ್ಯೆ ಅಂತ ಬಂದಾಗ ತುಂಬಾ ಕಷ್ಟಪಡುತ್ತೇವೆ. ಕೆಲವರು ಹೇಳುವುದುಂಟು ನೀವು ಪತ್ರಕರ್ತರು, ಬರಹಗಾರರಿಗೆ ಏನು ಎಲ್ಲರ ಪರಿಚಯ ಉಂಟು ನಿಮಗೆ ಬೇಕಾದ ಕೆಲಸ ಕೊಡಲೆ ಮಾಡಿಸಿಕೊಳ್ಳಬಹುದು. ಆದರೆ ನೈಜತೆಯೇ ಬೇರೆ. ಬೇರೆಯವರ ಸಮಸ್ಯೆ ಅಂತ ಬಂದಾಗ ಸ್ವಾಭಿಮಾನ ಬಿಟ್ಟು ಅವರಿವರ ಗಮನಕ್ಕೆ ತಂದು ಪರಿಹಾರ ಒದಗಿಸುವ ನಾವು ನಮಗೆ ಸಮಸ್ಯೆ ಅಂತ ಬಂದಾಗ ತುಂಬಾ ಒದ್ದಾಡುತ್ತೇವೆ. ಅದನ್ನು ಯಾರಲ್ಲೂ ಹೇಳಿಕೊಳ್ಳುವ ಗೋಜಿಗೆ ಹೋಗದೆ ನಮ್ಮೊಳಗೆ ಇಟ್ಟುಕೊಂಡು ಸಮಾಜದ ಎದುರು ಕಷ್ಟಗಳೇ ಇಲ್ಲ ಎಂದು ಬದುಕುತ್ತೇವೆ. ಸಮಾಜದ ಕಷ್ಟಗಳಿಗೆ ದ್ವನಿಯಾಗುವ ವ್ಯಕ್ತಿ ತನಗೆ ಕಷ್ಟ ಇದೆ ಅಂತ ಯಾರಲ್ಲೂ ಯಾವತ್ತೂ ಹೇಳುವುದಿಲ್ಲ. ದೇವರು ನಮಗೆ ಒಂದು ಒಳ್ಳೆಯ ಉಡುಗೊರೆ ಕೊಟ್ಟಿದ್ದಾನೆ. ಎಷ್ಟೆ ಕಷ್ಟ ಬಂದರೂ, ಎಷ್ಟೇ ನೋವುಗಳಿದ್ದರೂ ಖುಷಿ ಖುಷಿಯಾಗಿರಿ ಅಂತ.

    ಒಂದು ಹಂತದವರೆಗೆ ನೋವು ಸಹಿಸಿದ ನಂತರ ಮನುಷ್ಯ ಮೌನವಾಗುತ್ತಾನೆ. ನಂತರ ಯಾರನ್ನು ದೂಷಿಸುವುದೂ ಇಲ್ಲ, ಯಾರಿಂದ ನಿರೀಕ್ಷಿಸುವುದು ಇಲ್ಲ.ಪ್ರತಿಯೊಬ್ಬರ ಜೀವನವು ನಾವು ಅಂದುಕೊಂಡಷ್ಟು ಖುಷಿಯಾಗಿರುವುದಿಲ್ಲ. ಪ್ರತಿಯೊಬ್ಬರಲ್ಲೂ ನೋವು ನಲಿವುಗಳಿವೆ. ಅದನ್ನು ಗುರುತಿಸಿ ಅನುಭವಿಸುವ ಮನಸ್ಸು ಇರಬೇಕಷ್ಟೆ. ಇತರರ ಕಷ್ಟಗಳಿಗೆ ನೆರವಾಗುವುದರಲ್ಲೆ ಖುಷಿ ಕಂಡುಕೊಂಡವರು ಎಷ್ಟೋ ಜನ ಇದ್ದಾರೆ. ಹಾಗಂದ ಮಾತ್ರಕ್ಕೆ ಅವರಿಗೆ ಕಷ್ಟಗಳೇ ಇಲ್ಲವೆಂದಲ್ಲ. ಇನ್ನೊಬ್ಬರ ಸಂತೋಷದಲ್ಲೆ ತಮ್ಮ ಖುಷಿ ಕಂಡುಕೊಂಡವರು. ಅಂತ ಖುಷಿ ಅನುಭವಿಸುವವರು ನಾವಾಗಬೇಕು. ಬಹಳ ಕಷ್ಟಕರವಾದ ಕೆಲಸವೆಂದರೆ, ಎಲ್ಲರನ್ನೂ ಖುಷಿಪಡಿಸುವುದು. ಬಹಳ ಸುಲಭವಾದ ಕೆಲಸವೆಂದರೆ, ಎಲ್ಲರೊಂದಿಗೂ ಖುಷಿಯಾಗಿರುವುದು. ಎಲ್ಲರನ್ನೂ ಖುಷಿಪಡಿಸಲು ಸಾಧ್ಯವಿಲ್ಲ. ಆದರೆ ಎಲ್ಲರೊಂದಿಗೂ ಖುಷಿಯಾಗಿರುವುದು ಸಾಧ್ಯವಿದೆ. ಅದನ್ನೇ ಎಲ್ಲರೂ ಮಾಡೋಣ

    ಸದಾ ಇನ್ನೊಬ್ಬರಿಗೆ ಕೆಡುಕನ್ನು ಬಯಸಿ ಇನ್ನೊಬ್ಬರ ಸಂಕಷ್ಟಕ್ಕೆ ಕಾರಣಿಕರ್ತರು ನಾವಾಗಬಾರದು. ಇರುವ ಮೂರು ದಿವಸ ನಾಲ್ಕು ಜನಕ್ಕೆ ಹೆಗಲಾಗಲು ಪ್ರಯತ್ನಿಸೋಣ. ಬರಿ ದ್ವೇಷ ಅಸೂಯೆಯಿಂದಲೆ ಜೀವನ ಕೊನೆಯಾಗುವುದರಲ್ಲಿ ಅರ್ಥವಿಲ್ಲ. ನಾವು ಈ ಭೂಮಿಯ ಮೇಲೆ ಹುಟ್ಟಿದ್ದೇವೆ ಎಂದರೆ ಅದಕ್ಕೊಂದು ಕಾರಣ ಇದ್ದೆ ಇದೆ.ನಿಮ್ಮಿಂದ ಒಂದು ಕೆಲಸ ಮಾಡಿಸುವುದಕ್ಕೆ ಆ ಭಗವಂತ ಇಲ್ಲಿಗೆ ಕಳಿಸಿದ್ದಾನೆಂದ ಮೇಲೆ ಒಳ್ಳೆಯದು ಕೆಟ್ಟದು ಮಾಡುವುದು ನಮ್ಮ ಕೈಯಲ್ಲೆ ಇದೆ. ಇರುವಷ್ಟು ದಿನ ಒಳ್ಳೆಯ ಕೆಲಸ ಮಾಡೋಣ. ಒಳ್ಳೆಯ ನೆನಪುಗಳನ್ನು ಈ ಭೂಮಿಯ ಮೇಲೆ ಬಿಟ್ಟು ಹೋಗೋಣ.

    Click here

    Click here

    Click here

    Call us

    Call us

    ರವಿರಾಜ್ ಬೈಂದೂರು

    ‘ಮೊದಲು ಬೇರೆಯವರು ನಿಮ್ಮನ್ನು ನಿರ್ಲಕ್ಷ್ಯಿಸುತ್ತಾರೆ, ನಂತರ ನಿಮ್ಮನ್ನು ನೋಡಿ ನಗುತ್ತಾರೆ, ಆ ನಂತರ ನಿಮ್ಮೊಂದಿಗೆ ಹೋರಾಡುತ್ತಾರೆ. ನಂತರ ನೀವು ಗೆಲ್ಲುತ್ತೀರಿ’ ಎನ್ನುತ್ತಾರೆ ಮಹಾತ್ಮ ಗಾಂಧಿಜೀ ಅದ್ಭುತವಾದ ಬದುಕು ಕಟ್ಟಿಕೊಳ್ಳಲು ಒಂದು ಕಷ್ಟಗಳು ಇರಬೇಕು, ಇನ್ನೊಂದು ಕಡೆ ಭಗವಂತ ತನ್ನ ಕೈ ಬಿಡುವುದಿಲ್ಲ ಎಂಬ ಅಚಲವಾದ ನಂಬಿಕೆ ಇರಬೇಕು. ಕಷ್ಟಗಳು ಪಾಠ ಕಲಿಸಿದರೆ ನಂಬಿಕೆ ಶಕ್ತಿ ತುಂಬುತ್ತದೆ. ಛತ್ರಿಗೆ ಮಳೆಯನ್ನು ನಿಲ್ಲಿಸಲು ಸಾಧ್ಯವಾಗದೆ ಇರಬಹುದು ಆದರೆ ಅದು ಮಳೆಯನ್ನು ಎದುರಿಸುವ ಧೈರ್ಯವನ್ನು ಕೊಡುತ್ತದೆ. ಹಾಗಾಗಿ ಬದುಕಿನಲ್ಲಿ ಭರವಸೆ ಕಳೆದುಕೊಳ್ಳಬೇಡಿ. ಆತ್ಮವಿಶ್ವಾಸದಿಂದ ಬದುಕಿ

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಣನಾಯಕನ ರೂಪ, ಗುಣದಲ್ಲಿ ಕಲಿಯಬೇಕಾದ ಪಾಠಗಳು ಅನೇಕ

    06/09/2024

    ಭಾರತ ಬಜೆಟ್-23 ಮುನ್ನೋಟ: ಆರ್ಥಿಕ ಕುಸಿತದ ಭೀತಿಯ ನಡುವೆ ಭಾರತೀಯ ಅರ್ಥವ್ಯವಸ್ಥೆಯನ್ನು ಮೇಲೆತ್ತುವ ಸವಾಲು

    01/02/2023

    ಉದ್ಯೋಗ ಸಂದರ್ಶನದ ತಯಾರಿಗೆ ಒಂದಿಷ್ಟು ಟಿಪ್ಸ್

    01/01/2023

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d