Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯ ಬೀಚ್ ಗಳನ್ನು ವಿಶ್ವ ದರ್ಜೆಗೇರಿಸಬೇಕು: ಸಚಿವ ವಿ. ಸುನೀಲ್ ಕುಮಾರ್
    Uncategorized

    ಜಿಲ್ಲೆಯ ಬೀಚ್ ಗಳನ್ನು ವಿಶ್ವ ದರ್ಜೆಗೇರಿಸಬೇಕು: ಸಚಿವ ವಿ. ಸುನೀಲ್ ಕುಮಾರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಕಡಲತೀರದಲ್ಲಿ ಜನಸ್ನೇಹಿ ಪರಿಸರ ನಿರ್ಮಾಣ ಮಾಡಿ ಪ್ರವಾಸಿಗರನ್ನು ಸೆಳೆಯುವುದರ ಜೊತೆಗೆ ಜಿಲ್ಲೆಯಲ್ಲಿರುವ ಬೀಚ್‌ಗಳನ್ನು ರಾಷ್ಟ್ರಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶ್ವದರ್ಜೆಗೇರಿಸುವ ಕೆಲಸವಾಗಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು.

    Click Here

    Call us

    Click Here

    ಅವರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಉಡುಪಿ ಜಿಲ್ಲೆ ಪರಿಸರ ಮಂತ್ರಾಲಯ ಅರಣ್ಯ ಮತ್ತು ಹವಾಮಾನ ಬದಲಾವಣೆ ಭಾರತ ಸರಕಾರ ಸೊಸೈಟಿ ಆಫ್ ಇಂಟರ್ನೆಟ್ ಕೋಸ್ಟಲ್ ಮ್ಯಾನೇಜ್ಮೆಂಟ್ ಹಾಗೂ ಮ್ಯಾನೇಜ್ಮೆಂಟ್ ಕಮಿಟಿ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಾನ್ಯತೆ ಪಡೆದಿರುವ ಜಿಲ್ಲೆಯ ಪಡುಬಿದ್ರಿ ಕಡಲತೀರದಲ್ಲಿ ಭಾರತದ 75ನೇ ಆಜಾದಿ ಕಾ ಅಮೃತ ಮಹೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪ್ರಸ್ತುತ ರಾಜ್ಯದಲ್ಲಿ 2 ಬ್ಲೂ ಫ್ಲಾಗ್ ಬೀಚ್‌ಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿದ್ದು, ಇನ್ನೂ 16 ಬೀಚ್ಗಳ ಪಟ್ಟಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ. ಡೆನ್ಮಾರ್ಕ್ನಲ್ಲಿ ಎಫ್ಇಇ ಸಂಸ್ಥೆಯು ನಿಗಧಿಪಡಿಸಿದ ಸರಾಸರಿ (33)ಅಂಕ ಪಡೆದಲ್ಲಿ ರಾಜ್ಯದಲ್ಲಿ ಇನ್ನೂ ಹೆಚ್ಚು ಪ್ರವಾಸಿ ಆಕರ್ಷಿತ ಬೀಚ್ಗಳು ನೀಲಿಧ್ವಜ ಸಂಕೇತವನ್ನು ಪಡೆಯಲಿವೆ. ಆ ನಿಟ್ಟಿನಲ್ಲಿ ನಾವು ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದರ ಜೊತೆಗೆ ಸಂರಕ್ಷಣೆಯನ್ನು ಸಹ ಮಾಡಬೇಕಿದೆ ಎಂದರು.

    ಕರಾವಳಿ ತೀರದ ಗ್ರಾಮಗಳನ್ನು ಇಕೋಸ್ಮಾಟ್ ಗ್ರಾಮಗಳನ್ನಾಗಿ ಮಾಡುವುದರ ಜೊತೆಗೆ ಮೀನುಗಾರರ ಜೀವನಶೈಲಿಯನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದ ಅವರು ಕರಾವಳಿ ಅಭಿವೃದ್ಧಿ ಹೊಂದಿದಲ್ಲಿ ಹೆಚ್ಚು ಪ್ರವಾಸಿಗರನ್ನು ಸೆಳೆಯುವುದರ ಜೊತೆಗೆ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ ಎಂದರು.

    ಕರಾವಳಿ ಅಭಿವೃದ್ಧಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದ್ದು, ರಾಜ್ಯ ಸರಕಾರದಿಂದ ಜಿಲ್ಲಾಡಳಿತಕ್ಕೆ ಆಧ್ಯತೆಯ ಮೇರೆಗೆ ಅಭಿವೃದ್ಧಿಗೆ ಬೇಕಾದ ಸವಲತ್ತುಗಳನ್ನು ನೀಡಲಾಗುವುದು ಎಂದರು.

    ಕರಾವಳಿ ಅಭಿವೃದ್ಧಿಗೆ ಸರಕಾರದ ಜೊತೆಗೆ ಸ್ಥಳೀಯರು ಆಧ್ಯತೆ ನೀಡಿದಲ್ಲಿ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಹಾಗೂ ಯೋಜನೆಗಳ ಅನುಷ್ಠಾನಕ್ಕೆ ಮಹತ್ವ ಸಿಕ್ಕಂತಾಗುತ್ತದೆ ಎಂದ ಅವರು ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಹಾಗೂ ಉತ್ತಮ ಬೀಚ್ ಗಾರ್ಡ್ಗಳಿಗೆ ಬಹುಮಾನ ವಿತರಿಸಿದರು.

    Click here

    Click here

    Click here

    Call us

    Call us

    ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ ಮಾತನಾಡಿ, ಕರಾವಳಿ ಪ್ರದೇಶಗಳು ಅದ್ಭುತವಾದ ಪ್ರಕೃತಿ ಸೌಂದರ್ಯವನ್ನು ಹೊಂದಿದ್ದು, ಪ್ರವಾಸೋದ್ಯಮಕ್ಕೆ ಹೆಚ್ಚಿನ ಮಟ್ಟದಲ್ಲಿ ಉತ್ತೇಜನವನ್ನು ಕೊಡುವುದರಿಂದ ಸ್ಥಳೀಯರ ಜನಜೀವನ ಸುಧಾರಿಸಬಹುದು ಹಾಗೂ ಹೆಚ್ಚು ಪ್ರವಾಸಿಗರು ಬರುವುದರಿಂದ ಆದಾಯ ಗಳಿಸುವ ಪ್ರಮಾಣವನ್ನು ಹೆಚ್ಚಿಸಬಹುದು ಎಂದರು.

    ಐ.ಎಫ್.ಎಸ್ ಅಧಿಕಾರಿ ದಿನೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಡುಬಿದ್ರಿ ಗ್ರಾಮ ಪಂಚಾಯತಿ ಅಧ್ಯಕ್ಷ ರವಿ ಶೆಟ್ಟಿ ಪದ್ರ, ಪರಿಸರ ಅಭಿಯಂತರರು ಗರೀಮಾ ಶರ್ಮ, ಉಡುಪಿ ಕರಾವಳಿ ಪ್ರವಾಸೋದ್ಯಮ ಇಲಾಖೆ ಸಂಘಟನೆ ಅಧ್ಯಕ್ಷ ಮನೋಹರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ನೀತಾ ಗುರುರಾಜ್, ದ್ರೆ ವಿವಿಧ ಕಾಲೇಜಿನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು, ಪಡುಬಿದ್ರಿ ಎಂಡ್ ಪಾಯಿಂಟ್ ಕಡಲತೀರದ ಬೀಚ್ ಮ್ಯಾನೇಜ್ಮೆಂಟ್ ಕಮಿಟಿಯ ಸದಸ್ಯರು ಮತ್ತು ಬೀಚ್ ನಿರ್ವಹಣ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ ಜೆ. ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ಕುಮಾರ್ ಶೆಟ್ಟಿ ನಿರೂಪಿಸಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್

    17/12/2025

    ಕೋಟೇಶ್ವರ: ಬಿಜೆಪಿಯಿಂದ ಸಮಗ್ರ ಮತದಾರ ಪಟ್ಟಿ ಪರಿಷ್ಕರಣಿಯ ಕಾರ್ಯಗಾರ

    15/12/2025

    ಕೋಟ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿಗೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಚಾಲನೆ

    15/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.