Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕ: ಗೃಹ ಸಚಿವ ಅರಗ ಜ್ಞಾನೇಂದ್ರ
    ಉಡುಪಿ ಜಿಲ್ಲೆ

    ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕ: ಗೃಹ ಸಚಿವ ಅರಗ ಜ್ಞಾನೇಂದ್ರ

    Updated:09/10/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಇಲ್ಲಿನ ಮಿಷನ್ ಕಾಂಪೌಂಡ್ ಬಳಿ 10 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ 56 ಮನೆಗಳನ್ನು ಒಳಗೊಂಡ ನೂತನ ಪೊಲೀಸ್ ವಸತಿ ಸಮುಚ್ಛಯವನ್ನು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಇಂದು ಉದ್ಘಾಟಿಸಿದರು.

    Click Here

    Call us

    Click Here

    ರಾಜ್ಯದಲ್ಲಿ ಗೃಹ ಇಲಾಖೆವತಿಯಿಂದ 2025 ರೊಳಗೆ 10000 ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾರ್ಯ ನಡೆಯುತ್ತಿದ್ದು, 200 ಕೋಟಿ ರೂ ವೆಚ್ಚದಲ್ಲಿ 100 ನೂತನ ಪೊಲೀಸ್ ಠಾಣೆಗಳ ನಿರ್ಮಾಣ ಹಾಗೂ 140 ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಪೊಲೀಸ್ ಇಲಾಖೆಯ ಬಲವರ್ಧನೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಕ್ರೈಮ್ ಸೀನ್ ಅಧಿಕಾರಿಗಳ ನೇಮಕಾತಿ ನಡೆಯುತ್ತಿದೆ. ಆಧುನಿಕ ತಂತ್ರಜ್ಞಾನಗಳನ್ನು ಇಲಾಖೆಯಲ್ಲಿ ಅಳವಡಿಸಿದ್ದು, ಸೈಬರ್ ಅಪರಾಧಗಳನ್ನು ಪತ್ತೆ ಮಾಡಲು ಬ್ಯಾಂಕ್ ಗಳೊಂದಿಗೆ ಒಪ್ಪಂದ ಆಗಿದ್ದು,ಹಣ ಕಳೆದುಕೊಂಡು ವ್ಯಕ್ತಿ 1-2 ಗಂಟೆಯೊಳಗೆ ದೂರು ನೀಡಬೇಕು , ತಕ್ಷಣದಲ್ಲಿ ಲಿಖಿತ ದೂರು ನೀಡಲು ಸಾಧ್ಯವಾಗದಿದ್ದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಿ ದೂರು ಸಲ್ಲಿಸಬಹುದು,ಸಾರ್ವಜನಿಕರು ಪೊಲೀಸ್ ಇಲಾಖೆಯ ನೆರವು ಅಗತ್ಯವಿದ್ದಲ್ಲಿ 112 ಗೆ ಕರೆ ಮಾಡುವಂತೆ ಸಚಿವರು ಹೇಳಿದರು.

    ಬಹು ಮಹಡಿ ಕಟ್ಟಡಗಳನ್ನು ನಿರ್ಮಿಸುವಾಗ ಅಗ್ನಿಶಾಮಕ ಇಲಾಖೆಯ ನಿರಪೇಕ್ಷಣಾ ಅನುಮತಿ ಪತ್ರ ಮತ್ತು ಕಟ್ಟಡ ಮುಕ್ತಾಯಗೊಂಡಾಗ ಕ್ಲಿಯರೆನ್ಸ್ ಪತ್ರ ಪಡೆಯುವುದು ಕಡ್ಡಾಯ ಎಂದ ಸಚಿವರು,ಮಾದಕ ವಸ್ತುಗಳ ನಿಯಂತ್ರಣ ಇಲಾಖೆಗೆ ದೊಡ್ಡ ಸವಾಲಾಗಿದ್ದು,ಸಾರ್ವಜನಿಕರು ಈ ಬಗ್ಗೆ ಮಾಹಿತಿಗಳನ್ನು ಇಲಾಖೆಗೆ ನೀಡಬೇಕು,ರಾಜ್ಯದಲ್ಲಿ ಎಫ್.ಎಸ್.ಎಲ್ ಲ್ಯಾಬ್ ನ್ನು ಅತ್ಯಾಧುನಿಕವಾಗಿ ಸಿದ್ದಪಡಿಸಿದ್ದು, ಸೈಬರ್ ಕ್ರೆöÊಂ ತನಿಖೆ ಕುರಿತಂತೆ ಗುಜರಾತ್ ಸರ್ಕಾರದೊಂದಿಗೆ ಎಂಓಯು ಮಾಡಿಕೊಂಡಿದ್ದು,ರಾಜ್ಯದ ಸಿಬ್ಬಂದಿಗಳನ್ನು ಅಲ್ಲಿಗೆ ತರಬೇತಿಗಾಗಿ ಕಳುಹಿಸಲಾಗುವುದು ಎಂದರು.

    ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿದ್ದು, ಮಧ್ಯವರ್ತಿಗಳನ್ನು ನಂಬಿ ಯಾರೂ ಮೋಸ ಹೋಗಬೇಡಿ, ಇಂತಹ ಮಧ್ಯವತಿಗಳ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡುವಂತೆ ಹೇಳಿದರು. ಉಡುಪಿಯ ಮಣಿಪಾಲದಲ್ಲಿ ನೂತನ ಅಗ್ನಿಶಾಮಕ ಠಾಣೆಗೆ ಮಂಜೂರಾತಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಘುಪತಿ ಭಟ್ ಮಾತನಾಡಿ, ಉಡುಪಿ ನಗರದಲ್ಲಿ ಪೊಲೀಸ್ ರಿಗೆ ಮನೆ ಕೊರತೆ ಇದೆ. ದೊಡ್ಡಣಗುಡ್ಡೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ವಸತಿಗೃಹಗಳನ್ನು ನೆಲಸಮ ಮಾಡಿ,ಸಮುಚ್ಛಯ ಮಾದರಿಯಲ್ಲಿ ನೂತನ ಗೃಹಗಳ ನಿರ್ಮಾಣ, ಶ್ರೀಕೃಷ್ಣಮಠದಲ್ಲಿ ಪೊಲೀಸ್ ಔಟ್ಪೋಸ್ಟ್ ನಿರ್ಮಾಣ ಮತ್ತು ಮಣಿಪಾಲದಲ್ಲಿ ಅಗ್ನಿಶಾಮಕ ಠಾಣೆಗೆ ಮಂಜೂರು ನೀಡುವಂತೆ ಕೋರಿದರು.

    Click here

    Click here

    Click here

    Click Here

    Call us

    Call us

    ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ದೇವಜ್ಯೋತಿ ರೇ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್,ಎ.ಎನ್.ಎಫ್ ಹಾಗೂ ಕರಾವಳಿ ಕಾವಲು ಪಡೆ ಎಸ್ಪಿ ನಿಖಿಲ್ ಉಪಸ್ಥಿತರಿದ್ದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸ್ವಾಗತಿಸಿದರು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ ವಂದಿಸಿದರು. ಮನಮೋಹನ್ ರಾವ್ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026
    Leave A Reply Cancel Reply

    four × four =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.