Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶೆಫ್‌ಟಾಕ್‌ಗೆ ಕ್ಯಾಟರಿಂಗ್ ಕಂಪೆನಿ ಆಫ್ ದಿ ಇಯರ್ ಆವಾರ್ಡ್
    ಊರ್ಮನೆ ಸಮಾಚಾರ

    ಶೆಫ್‌ಟಾಕ್‌ಗೆ ಕ್ಯಾಟರಿಂಗ್ ಕಂಪೆನಿ ಆಫ್ ದಿ ಇಯರ್ ಆವಾರ್ಡ್

    Updated:12/10/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ನವದೆಹಲಿಯ ಆಲ್ ಇಂಡಿಯಾ ಬ್ಯುಸಿನೆಸ್ ಡೆವೆಲಪ್‌ಮೆಂಟ್ ಅಸೋಸಿಯೇಷನ್ ಕೊಡಮಾಡುವ ’ಕ್ಯಾಟರಿಂಗ್ ಕಂಪೆನಿ ಆಫ್ ದಿ ಇಯರ್ ಆವಾರ್ಡ್’ ಪ್ರಶಸ್ತ ಸಾಲಿನಲ್ಲಿ ಶೆಫ್‌ಟಾಕ್ ಫುಡ್ & ಹಾಸ್ಟಿಟಾಲಿಟಿ ಸರ್ವಿಸಸ್ ಪ್ರೈ. ಲಿ ಸಂಸ್ಥೆಗೆ ದೊರೆತಿದೆ. ಆಹಾರೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಲಾಗಿರುವ ವಿಶೇಷ ಸೇವೆ ಹಾಗೂ ದೇಶದ ಆರ್ಥಿಕತೆ ಮತ್ತು ಸಮಾಜದ ಅಭಿವೃದ್ಧಿಗೆ ನೀಡಲಾಗಿರುವ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

    Click Here

    Call us

    Click Here

    ಈ ಪ್ರಶಸ್ತಿಯ ಮೂಲಕ ಆಹಾರ ಮತ್ತು ಅತಿಥಿ ಸತ್ಕಾರ ವಿಭಾಗದಲ್ಲಿ ಗುಣಮಟ್ಟ ಹಾಗೂ ವೇಗದ ಪ್ರಗತಿ ಸಾಧಿಸಿ ಛಾಪು ಮೂಡಿಸಿರುವ ಡಾ. ಗೋವಿಂದ ಬಾಬು ಪೂಜಾರಿ ಅವರ ಒಡೆತನದ ಶೆಫ್‌ಟಾಕ್ ಸಂಸ್ಥೆಯ ಕೀರ್ತಿ ಮುಕುಟಕ್ಕೆ ಮತ್ತೊಂದು ಗರಿ ಸೇರಿದಂತಾಗಿದೆ.

    ಶೆಫ್‌ಟಾಕ್ ಸಂಸ್ಥೆಗೆ ಈವರೆಗೆ ಹಲವು ಪ್ರಶಸ್ತಿಗಳು ಸಂದಿದ್ದು ಅವುಗಳಲ್ಲಿ ಪ್ರಮುಖವಾಗಿ 2016-17ನೇ ಸಾಲಿನಲ್ಲಿ ಆಲ್ ಇಂಡಿಯ ಅಚೀವರ್ಸ್ ಫೌಂಡೇಶನ್‌ನಿಂದ ‘ನಾಯಕತ್ವ ಹಾಗೂ ಕ್ಷಿಪ್ರ ಬೆಳವಣಿಗೆಯ ಕಂಪೆನಿ’ ಪ್ರಶಸ್ತಿ, ಬಿಸಿಸಿಐ ಮುಂಬೈನಿಂದ ಕ್ಷಿಪ್ರ ಬೆಳವಣಿಗೆಯ ಉದ್ಯಮ ವಿಭಾಗದಲ್ಲಿ ಬಿಜಿನೆಸ್ ಎಕ್ಸ್‌ಲೆಕ್ಸ್ ಅವಾರ್ಡ್ 2019 (ಉದ್ಯಮ ಶ್ರೇಷ್ಠತಾ ಪ್ರಶಸ್ತಿ), 2021ರಲ್ಲಿ ಇಂಟರ್‌ನ್ಯಾಶನಲ್ ಅಚಿವರ‍್ಸ್ ಕಾನ್ಫರೆನ್ಸ್‌ನಲ್ಲಿ ಕ್ವಾಲಿಟಿ ಪುಡ್ ಕಸ್ಟಮರ್ ಸ್ಯಾಟಿಸ್ಪ್ಯಾಕ್ಷನ್ ಅವಾರ್ಡ್ ದೊರೆತಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    We are extremely pleased to announce that our company, ChefTalk has bagged the 'Catering Company of the Year Award' from all India business development association, New Delhi

    Being Managing Director, congratulating my team for wonderful achievement. #ChefTalk pic.twitter.com/nYntQc71gq

    — Govinda Babu Poojari (@GBPoojari) October 12, 2021

    2008ರಲ್ಲಿ ಮುಂಬೈಯಲ್ಲಿ ಶೆಫ್‌ಟಾಕ್ ಕೇಟರಿಂಗ್ ಸರ್ವಿಸಸ್ ಆರಂಭಿಸಿದ ಡಾ. ಗೋವಿಂದ ಬಾಬು ಪೂಜಾರಿ ಅವರು, 2015ರಲ್ಲಿ ಅದನ್ನು ಶೆಫ್‌ಟಾಕ್ ಫುಡ್ ಅಂಡ್ ಹಾಸ್ಪಿಟಾಲಿಟಿ ಸರ್ವಿಸಸ್ ಪೈವೆಟ್ ಲಿಮಿಟೆಡ್ ಆಗಿ ಪರಿವರ್ತಿಸಿದರು. ಈಗ ಪೂನಾ, ಹೈದರಾಬಾದ್, ಬೆಂಗಳೂರು, ಗುಜರಾತ್ ಮೊದಲಾದ ನಗರಗಳಲ್ಲಿ ಇದೇ ಉದ್ಯಮಗಳು ವಿಸ್ತರಿಸಿದ್ದು ಉತ್ತಮವಾಗಿ ಕಾರ್ಯನಿರ್ವಹಿಸಲಾಗುತ್ತಿದೆ. ಬೆಂಗಳೂರು ಹಾಗೂ ರಾಜ್ಯದ ಇತರ ನಗರಗಳಲ್ಲಿ ಕರ್ನಾಟಕ ಸರಕಾರದ ಹಸಿವು ಮುಕ್ತ ಯೋಜನೆ ಜಾರಿಗೊಳಿಸಿ ಇಂದಿರಾ ಕ್ಯಾಂಟಿನ್ ಆರಂಭಿಸಿದಾಗ ಅದರ ಅರ್ಧದಷ್ಟು ಕ್ಯಾಂಟಿನ್‌ಗಳ ನಿರ್ವಹಣೆ ಹೊಣೆ ಹೊತ್ತು ಸಾವಿರಾರು ಮಂದಿಗೆ ಆಹಾರ ಒದಗಿಸುತ್ತಿದೆ/ಕುಂದಾಪ್ರ ಡಾಟ್ ಕಾಂ ಸುದ್ದಿ/

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    3 × 1 =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.