ಹಿರಿಯ ಯಕ್ಷಗಾನ ಕಲಾವಿದ ಅನಂತ ಕುಲಾಲ ನಿಧನ

Call us

Call us

Call us

ಕುದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ, ಅ.13:
ಬಡಗು ತಿಟ್ಟಿನ ಹಿರಿಯ ವೇಷಧಾರಿ ಅನಂತ ಕುಲಾಲ (66) ಅವರು ಮಂಗಳವಾರ ರಾತ್ರಿ ಮೊಳಹಳ್ಳಿಯಲ್ಲಿ ನಿಧನ ಹೊಂದಿದರು. ಅವರು ಕಳೆದ ಆರು ತಿಂಗಳಿನಿಂದ ಅಸೌಖ್ಯದಲ್ಲಿದ್ದರು.

Call us

Click Here

ಅಮೃತೇಶ್ವರೀ, ಹಿರಿಯಡಕ, ಸಾಲಿಗ್ರಾಮ, ಪೆರ್ಡೂರು, ಹಾಲಾಡಿ, ಮಾರಣಕಟ್ಟೆ ಮೇಳಗಳಲ್ಲಿ ಕಲಾವಿದರಾಗಿ ದುಡಿದಿದ್ದರು. ಮಾರಣಕಟ್ಟೆ ಮೇಳವೊಂದರಲ್ಲೇ ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ಅವರು ಯಕ್ಷಗಾನ ಕಲಾರಂಗ ಪ್ರಶಸ್ತಿ ಹಾಗೂ ಎಮ್. ಎಮ್. ಹೆಗಡೆ ಪ್ರಶಸ್ತಿ ಪಡೆದುಕೊಂಡಿದ್ದರು.

ಮೃತರು ಪತ್ನಿ, ನಾಲ್ವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

Leave a Reply