ಬೈಂದೂರು ಅಂಚೆ ಸಹಾಯಕ ಸುರೇಂದ್ರ ಡಿ. ಅವರಿಗೆ ರಾಷ್ಟ್ರ ಪ್ರಶಸ್ತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಭಾರತೀಯ ಅಂಚೆ ಇಲಾಖೆ ನೀಡುವ ಪ್ರತಿಷ್ಠಿತ ರಾಷ್ಟ್ರ ಪ್ರಶಸ್ತಿಯು ಉಡುಪಿ ಅಂಚೆ ವಿಭಾಗದ ಬೈಂದೂರು ಅಂಚೆ ಕಚೇರಿಯಲ್ಲಿ ಅಂಚೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ಸುರೇಂದ್ರ ಡಿ. ಅವರಿಗೆ ಸತತ ಎರಡನೇ ಬಾರಿ ಲಭಿಸಿದೆ.

Call us

Click Here

ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಜೀವ ವಿಮಾ ವಿಭಾಗದಲ್ಲಿ 2020-21ನೇ ಸಾಲಿನಲ್ಲಿ ರಾಷ್ಟ್ರ ಮಟ್ಟದಲ್ಲಿ ಅತಿ ಹೆಚ್ಚಿನ ವಹಿವಾಟು ಮಾಡಿದ ಹಿನ್ನೆಲೆಯಲ್ಲಿ ಭಾರತೀಯ ಅಂಚೆ ಇಲಾಖೆ ಇತ್ತೀಚೆಗೆ ಅವರನ್ನು ಬೆಂಗಳೂರಿನ ಕರ್ನಾಟಕ ಪೋಸ್ಟಲ್ ವೃತ್ತದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅವರು 13 ವರ್ಷಗಳ ಸೇವಾ ಅವಧಿಯಲ್ಲಿ ಒಂಬತ್ತು ಬಾರಿ ವಿಭಾಗೀಯ ಮಟ್ಟದ, ನಾಲ್ಕು ಬಾರಿ ರಾಜ್ಯ ಮಟ್ಟದ ಮತ್ತು ಇದೇ ವರ್ಷ ಫೆಬ್ರವರಿಯಲ್ಲಿ 2019-20ನೇ ಸಾಲಿನ ರಾಷ್ಟ್ರಪ್ರಶಸ್ತಿಯನ್ನು ಇವರು ಪಡೆದಿದ್ದಾರೆ. ನವದೆಹಲಿಯ ಡಾಕ್ ಭವನದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನಿರೂಪಿಸಲ್ಪಟ್ಟ ಸಮಾರಂಭದಲ್ಲಿ ಕರ್ನಾಟಕ ವೃತ್ತದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಶಾರದಾ ಸಂಪತ್ ಪ್ರಶಸ್ತಿ ವಿತರಿಸಿದರು. ನವದೆಹಲಿಯಿಂದ ಸೆಕ್ರೆಟರಿ ಅಂಚೆ ಇಲಾಖೆ, ಪೋಸ್ಟಲ್ ಸರ್ವಿಸ್ ಬೋರ್ಡ್ ನ ಸದಸ್ಯರು ವಿಡಿಯೋ ಕಾನ್ಫರೆನ್ಸ್ನಲ್ಲಿ ಪಾಲ್ಗೊಂಡಿದ್ದರು.

Leave a Reply